![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 14, 2022, 10:52 AM IST
ಬೆಂಗಳೂರು: ಸಾಲದ ಕಂತಿನ ಇಎಂಐ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ಸ್ನೇಹಿತನನ್ನೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಥಣಿಸಂದ್ರ ನಿವಾಸಿ ಜಯಕುಮಾರ್ (31) ಕೊಲೆಯಾದವ. ಕೃತ್ಯ ಎಸಗಿದ ರಾಯಿಲ್ ಎಂಬಾತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಜಯಕುಮಾರ್ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದು, ರಾಯಿಲ್ ಬೇರೆ ಸಣ್ಣ-ಪುಟ್ಟ ವ್ಯವಹಾರ ಮಾಡಿಕೊಂಡಿದ್ದಾನೆ. ಇಬ್ಬರು ಸ್ನೇಹಿತರಾಗಿದ್ದಾರೆ. ಈ ಹಿನ್ನೆಲೆ ಪಾಲುದಾರಿಕೆಯಲ್ಲಿ ಹೋಟೆಲ್ ಉದ್ಯಮ ನಡೆಸಲು ಸಿದ್ಧತೆ ನಡೆಸಿದ್ದರು. ಹೀಗಾಗಿ ಜಯಕುಮಾರ್, ಬ್ಯಾಂಕ್ವೊಂದರಲ್ಲಿ 19.60 ಲಕ್ಷ ರೂ. ಸಾಲ ಕೊಡಿಸಿದ್ದ. ಏಳು ತಿಂಗಳಿಂದ ಇಎಂಐ ಪಾವತಿಸಿದ್ದ ರಾಯಿಲ್ ಏಪ್ರಿಲ್ ತಿಂಗಳ ಇಎಂಐ ಪಾವತಿ ಮಾಡಿರಲಿಲ್ಲ.
ಇದನ್ನೂ ಓದಿ:ಐಷಾರಾಮಿ ಜೀವನಕ್ಕಾಗಿ ಮನೆಗಳ್ಳತನ : ಇಬ್ಬರ ಬಂಧನ
ಈ ವಿಚಾರ ಸಂಬಂಧ ಗುರುವಾರ ಸಂಜೆ ಕಾಚರಕನಹಳ್ಳಿಯ ಸಿಎಂಆರ್ ಕಾಲೇಜು ಸಮೀಪದಲ್ಲಿ ಜಯಕುಮಾರ್ ಮತ್ತು ರಾಯಿಲ್ ನಡುವೆ ಗಲಾಟೆಯಾಗಿದೆ. ಅದು ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ರಾಯಿಲ್, ಚಾಕುವಿನಿಂದ ಜಯ ಕುಮಾರ್ ಎದೆಗೆ ಇರಿದು ಕೊಂದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.