ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದ ಮಹಿಳೆಯ 6.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
Team Udayavani, May 14, 2022, 10:57 PM IST
ಉಡುಪಿ : ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಭಕ್ತರೊಬ್ಬರ ಚಿನ್ನಾಭರಣಗಳು ಕಳವಾದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕನಹಳ್ಳಿಯ ಷಣ್ಮುಗಂ ಅವರು ಕುಟುಂಬಸ್ಥರೊಂದಿಗೆ ಮೇ 13ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು. ಬಳಿಕ ಕೃಷ್ಣಮಠದ ವಸಂತ ಮಂಟಪದ ಬಳಿ ತೊಟ್ಟಿಲು ಸೇವೆ ನಡೆಯುತ್ತಿದ್ದು, ದೇವರ ಆರತಿಯನ್ನು ಪಡೆಯುವಾಗ ಯಾರೋ ಕಳ್ಳರು ಷಣ್ಮುಗಂ ಅವರ ಹೆಂಡತಿಯ ವ್ಯಾನಿಟಿ ಬ್ಯಾಗ್ನ ಜಿಪ್ ತೆಗೆದು, ಅದರೊಳಗಿದ್ದ ಚಿನ್ನಾಭರಣ ಹಾಕಿದ್ದ ಬಾಕ್ಸ್ ಕಳವು ಮಾಡಿದ್ದಾರೆ ಎನ್ನಲಾಗಿದೆ. ಬಾಕ್ಸ್ ನಲ್ಲಿ 58 ಗ್ರಾಂ ತೂಕದ 2 ಬಳೆಗಳು, 16 ಗ್ರಾಂ ತೂಕದ 2 ಕಿವಿಯೊಲೆ, 13 ಗ್ರಾಂ ತೂಕದ ಮಗುವಿನ ಚಿಕ್ಕ ಬಳೆ, 20 ಗ್ರಾಂ ತೂಕದ ಪೆಂಡೆಂಟ್ ಇರುವ ಚಿನ್ನದ ಸರ, 48 ಗ್ರಾಂ ತೂಕದ ದೊಡ್ಡ ಚಿನ್ನದ ಸರ ಸಹಿತ ಒಟ್ಟು 155 ಗ್ರಾಂ ತೂಕದ ಚಿನ್ನಾಭರಣಗಳಿದ್ದವು. ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 6,30,000 ರೂ. ಆಗಿದೆ.
ನಾವುಂದ: ಮನೆಯಿಂದ ಚಿನ್ನಾಭರಣ ಕಳ್ಳತನ
ಉಪ್ಪುಂದ : ಮನೆಯವರು ಬೇರೆ ಊರಿಗೆ ಹೋಗಿದ್ದ ಸಮಯದಲ್ಲಿ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ನಾವುಂದ ಗ್ರಾಮದ ಬಡಾಕೆರಿಯಲ್ಲಿ ಮೇ 12ರಂದು ನಡೆದಿದೆ.
ನಾವುಂದ ಬಡಾಕೆರೆ ನಿವಾಸಿ ಬಿ.ಎಂ. ಯೂಸುಫ್ ವೈ. ಹಾಗೂ ಕುಟುಂಬದವರು ಮೇ 11ರಂದು ಮೈಸೂರಿಗೆ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೇ 12ರಂದು ಬಂದು ನೋಡಿದಾಗ ಬೆಡ್ರೂಂನಲ್ಲಿದ್ದ ಫ್ಲೈವುಡ್ ಕಪಾಟಿನ ಬಾಗಿಲನ್ನು ಮುರಿದು ಕಪಾಟಿನಲ್ಲಿದ್ದ 2 ಚಿನ್ನದ ಉಂಗುರ ಹಾಗೂ 5 ಸಾವಿರ ರೂ. ನಗದು ಹಣವನ್ನು ಕದ್ದೊಯ್ದಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : “ಅಮೃತಕಾಲ’ದಲ್ಲಿ ದೇಶ ವಿಶ್ವಗುರು : ಟ್ಯಾಪ್ಮಿ ಘಟಿಕೋತ್ಸವದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.