ಮಂಕಿಗೇಟ್, ಕುಡಿತದ ಚಟ.. ವಿವಾದಗಳಿಂದಲೇ ಸುದ್ದಿಯಾಗಿದ್ದ ವರ್ಣರಂಜಿತ ಕ್ರಿಕೆಟರ್ ಸೈಮಂಡ್ಸ್


Team Udayavani, May 15, 2022, 2:25 PM IST

controversy of symonds

ವಿಶ್ವ ಕ್ರಿಕೆಟ್ ಕಂಡ ಅತ್ಯುತ್ತಮ ಆಲ್ ರೌಂಡರ್ ಗಳಲ್ಲಿ ಒಬ್ಬರಾದ ಕಾಂಗರೂ ನಾಡಿನ ಆ್ಯಂಡ್ರ್ಯೂ ಸೈಮಂಡ್ಸ್ ಇಂದು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್, ಆಫ್ ಸ್ಪಿನ್ ಮತ್ತು ಮಧ್ಯಮ ವೇಗದ ಬೌಲಿಂಗ್ ಎರಡೂ ಮಾಡುತ್ತಿದ್ದ ಸೈಮಂಡ್ಸ್ 1998 ರಿಂದ 2009ರವರೆಗೆ ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡಿದ್ದಾರೆ.

ಕಾಂಗರೂ ನಾಡಿನ ಪರವಾಗಿ ಸೈಮಂಡ್ಸ್, 26 ಟೆಸ್ಟ್, 198 ಏಕದಿನ ಮತ್ತು 14 ಟಿ20 ಪಂದ್ಯಗಳನ್ನಾಡಿದ್ದಾರೆ. 2008ರಿಂದ 2011ರವರೆಗೆ ಐಪಿಎಲ್ ನಲ್ಲಿ ಆಡಿರುವ ಸೈಮಂಡ್ಸ್ 39 ಪಂದ್ಯಗಳನ್ನಾಡಿದ್ದಾರೆ. ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಪರ ಸೈಮಂಡ್ಸ್ ಆಡಿದ್ದರು.

ಭಿನ್ನ ಶೈಲಿಯ ಕೇಶ ಶೈಲಿ, ಮೈದಾನದಲ್ಲಿ ಸದಾ ಅಗ್ರೆಸಿವ್ ಆಟ, ಸ್ಲೆಡ್ಜಿಂಗ್ ನಿಂದಲೇ ಸೈಮಂಡ್ಸ್ ಗಮನ ಸೆಳೆಯುತ್ತಿದ್ದರು. ಬಲಿಷ್ಠ ದೇಹಕಾಯದ ಸೈಮಂಡ್ಸ್ ಆಟಕ್ಕಿಂತ ಹೆಚ್ಚಾಗಿ ನೆನಪಾಗುವುದು ವಿವಾದಗಳಿಂದ ಎನ್ನುವುದು ಅಷ್ಟೇ ಸತ್ಯ.

ಸೈಮಂಡ್ಸ್ ವಿವಾದಗಳು

ಮಂಕಿಗೇಟ್: ಇದು ಕ್ರಿಕೆಟ್ ಜಗತ್ತು ಎಂದೂ ಮರೆಯದ ವಿವಾದ. 2008 ರ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಈ ಮಂಕಿಗೇಟ್ ಘಟನೆ ಸಂಭವಿಸಿತ್ತು. ಸಿಡ್ನಿಯಲ್ಲಿ ನಡೆದ ಟೆಸ್ಟ್‌ನಲ್ಲಿ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತನ್ನನ್ನು “ಮಂಕಿ” ಎಂದು ಕರೆದಿದ್ದಾರೆ ಎಂದು ಸೈಮಂಡ್ಸ್ ಆರೋಪಿಸಿದ್ದರು. ಇದು ವಿಶ್ವ ಕ್ರಿಕೆಟ್‌ನಲ್ಲಿ ದೊಡ್ಡ ವಿವಾದವಾಗಿ ಹರ್ಭಜನ್ ಒಂದು ಟೆಸ್ಟ್‌ಗೆ ನಿಷೇಧವನ್ನು ಎದುರಿಸಲು ಕಾರಣವಾಯಿತು.

ತಂಡದ ಸದಸ್ಯನ ಜೊತೆ ಗಲಾಟೆ: ತಂಡದ ಸಹ ಸದಸ್ಯ ಮೈಕಲ್ ಕ್ಲಾರ್ಕ್ ಜೊತೆಗೆ ಸೈಮಂಡ್ಸ್ ಕಿರಿಕ್ ಮಾಡಿಕೊಂಡಿದ್ದರು. ತಂಡದ ಉಪ ನಾಯಕ ಸ್ಥಾನಕ್ಕೆ ಮೈಕಲ್ ಕ್ಲಾರ್ಕ್ ಆಯ್ಕೆಯಾದಾಗ ಇವರಿಬ್ಬರ ನಡುವೆ ಮನಸ್ಥಾಪ ಉಂಟಾಗಿತ್ತು.

ಇದನ್ನೂ ಓದಿ:ಆಸೀಸ್ ಗೆ ಮತ್ತೊಂದು ಆಘಾತ; ಮಾಜಿ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತಕ್ಕೆ ಬಲಿ

2008 ರಲ್ಲಿ ಡಾರ್ವಿನ್‌ ನಲ್ಲಿ ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಸಭೆಯಲ್ಲಿ ಪಾಲ್ಗೊಳ್ಳುವ ಬದಲು ಸೈಮಂಡ್ಸ್ ಫಿಶಿಂಗ್ ಮಾಡಲು ಹೋಗಿದ್ದರು. ಇದರಿಂದ ಅವರನ್ನು ಸರಣಿಯಿಂದ ಮನೆಗೆ ಕಳುಹಿಸಲಾಗಿತ್ತು. ವರ್ಷಗಳ ನಂತರ, ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡುತ್ತಾ ಈ ಘಟನೆಯನ್ನು ಮೆಲುಕು ಹಾಕಿದ್ದ ಸೈಮಂಡ್ಸ್, ಐಪಿಎಲ್ ನಲ್ಲಿ ಪಡೆದ ದೊಡ್ಡ ಮಟ್ಟದ ಹಣವು ಅವರ ಬದಲಾದ ಸಂಬಂಧದ ಹಿಂದೆ ಕಾರಣವಾಗಿರಬಹುದು ಎಂದು ಬಹಿರಂಗಪಡಿಸಿದರು. ಆ ವರ್ಷ ಸೈಮಂಡ್ಸ್ ಡೆಕ್ಕನ್ ಚಾರ್ಜರ್ಸ್‌ ತಂಡಕ್ಕೆ 5.40 ಕೋಟಿ ರೂ. ಗೆ ಮಾರಾಟವಾಗಿದ್ದರು.

ಮದ್ಯ ಸೇವನೆ: 2005ರಲ್ಲಿ ಕಾರ್ಡಿಫ್‌ನಲ್ಲಿ ಬಾಂಗ್ಲಾದೇಶದ ವಿರುದ್ಧದ ತ್ರಿಕೋನ ಸರಣಿಯ ಪಂದ್ಯಕ್ಕೆ ಮುನ್ನ ಸೈಮಂಡ್ಸ್‌ರನ್ನು ಆಸ್ಟ್ರೇಲಿಯನ್ ತಂಡದಿಂದ ಕೈಬಿಡಲಾಯಿತು. ಹಿಂದಿನ ಸಂಜೆ ಅವರು ಮದ್ಯ ಸೇವಿಸಿದ್ದರಿಂದ ಈ ನಿರ್ಧಾರಕ್ಕೆ ಬರಲಾಯಿತು.

ವಿಶ್ವಕಪ್ ನಿಂದ ಔಟ್: 2009ರ ಜೂನ್ ನಲ್ಲಿ, ಆಂಡ್ರ್ಯೂ ಸೈಮಂಡ್ಸ್ ಅವರು ಆಸ್ಟ್ರೇಲಿಯನ್ ತಂಡದಲ್ಲಿದ್ದಾಗ ಶಿಸ್ತಿನ ಮೂರನೇ ಪ್ರಮುಖ ಉಲ್ಲಂಘನೆಯ ನಂತರ ಟ್ವೆಂಟಿ20 ವಿಶ್ವಕಪ್‌ನಿಂದ ಮನೆಗೆ ಕಳುಹಿಸಲಾಗಿತ್ತು.

ಅವರ ಈ ಮನಸ್ಥಿತಿಯೇ ಬೃಹತ್ ಕ್ರಿಕೆಟ್ ಪ್ರತಿಭೆಯನ್ನು ದುರ್ಬಲಗೊಳಿಸಿತು ಎಂದೇ ಹೇಳಬಹುದು. ಸೈಮಂಡ್ಸ್ ಕ್ರಿಕೆಟ್ ಜಗತ್ತಿನಲ್ಲಿ ಅವರ ವೃತ್ತಿಜೀವನದ ಸಮಯದಲ್ಲಿ ಹಲವಾರು ವಿವಾದಗಳನ್ನು ಹೊಂದಿದ್ದರೂ, ಅವರ ಹೆಸರು ವಿಶ್ವದ ಶ್ರೇಷ್ಠ ಆಲ್-ರೌಂಡರ್‌ಗಳಲ್ಲಿ ಒಂದಾಗಿದೆ.

ಆಂಡ್ರ್ಯೂ ಸೈಮಂಡ್ಸ್ ಆಸ್ಟ್ರೇಲಿಯಾ ಪರ 26 ಟೆಸ್ಟ್, 198 ಏಕದಿನ ಮತ್ತು 14 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ 1462 ರನ್, ಟೆಸ್ಟ್‌ನಲ್ಲಿ 5088 ಮತ್ತು ಟಿ20ಯಲ್ಲಿ 337 ರನ್ ಗಳಿಸಿದ್ದಾರೆ. ಆಂಡ್ರ್ಯೂ ಸೈಮಂಡ್ಸ್ 39 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.