ಮತಗಟ್ಟೆಗಳಲ್ಲಿ ‘ಮದ್ಯ ಪರೀಕ್ಷೆ’ ಕಡ್ಡಾಯಗೊಳಿಸಿ!

ಚುನಾವಣಾ ಆಯೋಗಕ್ಕೆ ನಾಗರಿಕರ ವಿಶಿಷ್ಟ ಸಲಹೆ

Team Udayavani, May 15, 2022, 2:47 PM IST

drinks

ದಾವಣಗೆರೆ: ಭಾರತದ ಸಂವಿಧಾನ ನಾಗರಿಕರಿಗೆ ನೀಡಿದ ಅಮೂಲ್ಯವಾದ ಮತದಾನದ ಹಕ್ಕು ಹೆಂಡದ ಹಾವಳಿಯಿಂದ ಯೋಗ್ಯ ರೀತಿಯಲ್ಲಿ ಚಲಾವಣೆಯಾಗುತ್ತಿಲ್ಲ. ಇದಕ್ಕೆ ಪರಿಹಾರವಾಗಿ ಚುನಾವಣಾ ಆಯೋಗ, ಎಲ್ಲ ಮತಗಟ್ಟೆಗಳಲ್ಲಿ ಉಸಿರು ಪರೀಕ್ಷಾ ಯಂತ್ರ (Breath analyzer tester) ಅಳವಡಿಸಬೇಕು ಹಾಗೂ ಮದ್ಯ ಸೇವಿಸಿ ಬಂದವರಿಗೆ ಮತದಾನ ಹಕ್ಕು ನಿಷೇಧಿಸಬೇಕು ಎಂಬ ಸಲಹೆ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಪ್ರತಿಯೊಬ್ಬ ನಾಗರಿಕ ಸಾಕಷ್ಟು ಆಲೋಚಿಸಿ, ಪರಾಮರ್ಶಿಸಿ ತನ್ನ ಹಕ್ಕು ಚಲಾಯಿಸಬೇಕು. ಮತ ಚಲಾಯಿಸುವಾಗ ಮತದಾರ ಯಾವುದೇ ನಶೆಯಲ್ಲಿರದೇ ಸ್ವಚ್ಛ ಮನಸ್ಸಿನಿಂದ ಆಲೋಚಿಸಿ ಮತ ಚಲಾಯಿಸಬೇಕು. ಜತೆಗೆ ಮತದಾನ ಸಂದರ್ಭದಲ್ಲಿ ಮದ್ಯದ ಆಮಿಷಕ್ಕೆ ಯಾರೂ ಒಳಗಾಗಬಾರದು ಎಂದು ಚುನಾವಣಾ ಆಯೋಗ ಮತದಾನದ ಮುನ್ನ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡುತ್ತದೆ. ಆದರೂ ಹಲವೆಡೆ ಹಂಚಿಕೆಯಾದ ಉಚಿತ ಮದ್ಯ ಕುಡಿದು, ನಶೆಯಲ್ಲೇ ಮತ ಚಲಾಯಿಸುವುದು ಮಾಮೂಲು ಆಗಿರುವುದು ಕಟು ಸತ್ಯ.

ಮದ್ಯ ಕುಡಿದು ಮತಗಟ್ಟೆಗೆ ಬಂದು ಮತ ಚಲಾಯಿಸುವುದನ್ನು ತಡೆಯಲು ಎಲ್ಲ ಮತಗಟ್ಟೆಗಳಲ್ಲಿ ಉಸಿರು ತಪಾಸಣೆ ಮಾಡುವ (ಕುಡಿದು ವಾಹನ ಚಾಲನೆ ಮಾಡುವರನ್ನು ಪತ್ತೆ ಹಚ್ಚಲು ಪೊಲೀಸರು ಉಸಿರು ಪರೀಕ್ಷೆ ಮಾಡುವಂತೆ) ವ್ಯವಸ್ಥೆಯಾಗಬೇಕು. ತನ್ಮೂಲಕ ಮತದಾನದಲ್ಲಿ ಒಂದಿಷ್ಟು ಸುಧಾರಣೆ ತರಬಹುದು ಎಂಬುದು ಈ ಸಲಹೆಯ ಹಿಂದಿನ ಉದ್ದೇಶವಾಗಿದೆ.

ಆಯೋಗಕ್ಕೆ ಪತ್ರ

ದಾವಣಗೆರೆಯ ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಚನ್ನಗಿರಿ ಅವರು ಈ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗವು ಮತದಾನದ ಹಿಂದಿನ 48 ಗಂಟೆ ಅವಧಿ ಎಲ್ಲ ತರಹದ ಮದ್ಯದ ಅಂಗಡಿ, ಬಾರ್‌ ಮತ್ತು ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿದರೂ ಅಕ್ರಮವಾಗಿ ಮದ್ಯ ಶೇಖರಿಸಿ ಮತದಾರರಿಗೆ ಸರಬರಾಜು ಮಾಡುವ ಪ್ರಕ್ರಿಯೆ ನಡೆಯುತ್ತಲೇ ಇರುವುದು ಗುಟ್ಟಾಗಿ ಉಳಿದಿಲ್ಲ.

ಆದ್ದರಿಂದ ಆಯೋಗ ಮತದಾನ ಮಾಡುವ ಸಂದರ್ಭದಲ್ಲಿ ವ್ಯಕ್ತಿ ಮದ್ಯಪಾನ ಮಾಡಿರಬಾರದು ಎಂಬ ನಿಯಮ ಜಾರಿಗೆ ತರಬೇಕು. ಎಲ್ಲ ಮತಗಟ್ಟೆಗಳಲ್ಲಿ ಮತದಾರರ ಉಸಿರು ಪರೀಕ್ಷೆ ಮಾಡುವ ವ್ಯವಸ್ಥೆ ಮಾಡಬೇಕು. ಮದ್ಯ ಸೇವಿಸಿ ಬಂದವರಿಗೆ ಮತದಾನದ ಹಕ್ಕು ನಿರ್ಬಂಧಿಸಬೇಕು. ಇದರಿಂದ ಮತದಾನ ವಿವೇಚನೆಯಿಂದ ಮಾಡಲು ಸಾಧ್ಯವಾಗುತ್ತದೆ. ಕುಡಿದು ಗಲಾಟೆ ಮಾಡುವುದು ನಿಯಂತ್ರಣಕ್ಕೆ ಬರುತ್ತದೆ. ಮತದಾನ ಯೋಗ್ಯರೀತಿಯಲ್ಲಿ ನಡೆದು ಯೋಗ್ಯ ವ್ಯಕ್ತಿ ಆಯ್ಕೆಗೆ ಸಹಕಾರಿಯಾಗಬಹುದು ಎಂದು ಸಲಹೆ ನೀಡಿದ್ದಾರೆ. ಸಾರ್ವಜನಿಕರು ನೀಡುತ್ತಿರುವ ಈ ಸಲಹೆಯನ್ನು ಚುನಾವಣಾ ಆಯೋಗ ಕಾನೂನು ವ್ಯಾಪ್ತಿಯಲ್ಲಿ ಪರಿಶೀಲಿಸಿ, ಸ್ವೀಕರಿಸುತ್ತದೆಯೋ ನಿರಾಕರಿಸುತ್ತದೆಯೋ ಕಾದು ನೋಡಬೇಕಿದೆ.

ಮತದಾನ ಹಕ್ಕು ಮಹತ್ವದ್ದಾಗಿದ್ದು ಇದನ್ನು ಚಲಾಯಿಸುವಾಗ ವ್ಯಕ್ತಿ ಯಾವುದೇ ನಶೆಯಲ್ಲಿರಬಾರದು. ಪ್ರತಿ ಮತಗಟ್ಟೆ ದ್ವಾರದಲ್ಲಿ ಉಸಿರು ತಪಾಸಣೆ ಯಂತ್ರ ಅಳವಡಿಸುವ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರಿಗೆ ಪತ್ರ ಬರೆದಿದ್ದೇನೆ. ಆಯೋಗ ಏನು ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕುತೂಹಲ ಕೆರಳಿಸಿದೆ. -ಚಂದ್ರಶೇಖರ್‌ ಚನ್ನಗಿರಿ, ಸಾಮಾಜಿಕ ಕಾರ್ಯಕರ್ತ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.