ಬುದ್ದಿ ಜೀವಿಗಳು ಸಮಾಜದತ್ತ ನೋಡಲ್ಲ: ಕಾಂತಾ ಕಳವಳ
Team Udayavani, May 16, 2022, 10:46 AM IST
ಕಲಬುರಗಿ: ಬುದ್ಧಿ ಜೀವಿಗಳು, ಹೆಚ್ಚು ತಿಳಿವು ಉಳ್ಳವರು ಮತ್ತು ಪ್ರಗತಿಪರ ಮನಸ್ಸಿನವರು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕೆಲಸಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ತುಂಬಾ ಜಾಣ್ಮೆಯಿಂದ ದೂರವೇ ಇರುತ್ತಾರೆ. ಇಂತಹವರ ಕುರಿತೇ ಬಾಬಾ ಸಾಹೇಬರು ಕಟುವಾಗಿ ಟೀಕಿಸಿದ್ದಾರೆ ಎಂದು ಮಾಜಿ ಕಾರ್ಮಿಕ ಸಚಿವ ಎಸ್. ಕೆ.ಕಾಂತಾ ಹಳಹಳಿಸಿದರು.
ನಗರದ ಕನ್ನಡ ಭವನದಲ್ಲಿ ರವಿವಾರ ಕನ್ನಡ ಜನಶಕ್ತಿ ಕೇಂದ್ರ ಹಮ್ಮಿಕೊಂಡಿದ್ದ ಕೆರೆಯ ಚಂದಮ್ಮ ಅವರಿಗೆ 24ನೇ ವರ್ಷದ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಿಳಿವು ಪಡೆದವರ ಸಮಾಜವಾದ ಎಂಬುದು ಪುಸ್ತಕ, ಭಾಷಣದಲ್ಲಿ ಉಳಿದಿದೆ. ಆದರೆ, ಕೃತಿಯಲ್ಲಿ ಇಲ್ಲ. ಈ ವಿಷಯದಲ್ಲಿ ಪ್ರಶಸ್ತಿ ಪಡೆದ ಕೆರೆ ಚಂದಮ್ಮ ಅವರಿಂದ ಹೆಚ್ಚು ಕಲಿಯುವುದಿದೆ. ಹೆಣ್ಣುಮಕ್ಕಳಲ್ಲಿ ನಿಷ್ಠೆ ಪ್ರಾಮಾಣಿಕತೆಯಿದೆ. ಡಾಕ್ಟರೇಟ್ ಗಿಂತ ಹೆಚ್ಚಿನ ಜ್ಞಾನ ಅವರಲ್ಲಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಚಂದಮ್ಮ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ ಗುವಿವಿ ಕನ್ನಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ| ಎಚ್.ಟಿ.ಪೋತೆ ಮಾತನಾಡಿ, ಸಾಮಾಜಿಕ ಪ್ರಜಾಪ್ರಭುತ್ವ ಬಹಳ ಮುಖ್ಯವಾದದ್ದು, ಇದು ಇರದಿದ್ದರೆ ಸಮಾಜ ಅಶಾಂತಿಯಲ್ಲಿ ತೇಲಾಡುತ್ತದೆ. ಪ್ರಗತಿಪರವಾಗಿ ಆಲೋಚನೆ ಮಾಡಿ ಸಮಾಜಮುಖೀಯಾಗಿ ದೇಶವನ್ನು ಕಟ್ಟಲು ಹೊರಟವರಲ್ಲಿ ಶಾಂತವೇರಿ ಗೋಪಾಲಗೌಡರೂ ಒಬ್ಬರು ಎಂದರು.
ಜಿಲ್ಲಾ ಕಸಾಪ ಮಾಜಿ ಕೋಶಾಧ್ಯಕ್ಷರಾದ ಡಾ| ಸೂರ್ಯಕಾಂತ ಪಾಟೀಲ, ಡಾ| ಪ್ರಭು ಖಾನಾಪುರೆ ಮಾತನಾಡಿದರು. ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷರಾದ ಸಿ.ಕೆ. ರಾಮೇಗೌಡ ಪ್ರಾಸ್ತಾವಿಕ ಮಾತನಾಡಿ ದರು. ಎಂ.ಎಲ್.ರಾಮಕೃಷ್ಣ, ಎಂ.ಕೆ. ರಂಗಪ್ಪ, ಸಿ.ಆರ್.ವಿನಯಕುಮಾರ, ಸಿ.ಕೆ.ದಾಸಪ್ಪ ಮತ್ತಿತರರು ಇದ್ದರು. ಕನ್ನಡ ಹೋರಾಟಗಾರ ನಂ.ವಿಜಯಕುಮಾರ ನಿರೂಪಿಸಿದರು. ಜಗದೇವಿ ತಂಡ ದವರು ಪ್ರಾರ್ಥಿಸಿದರು. ಲೇಖಕ ಡಾ| ಚಂದ್ರಶೇಖರ ದೊಡ್ಡಮನಿ ಸ್ವಾಗತಿಸಿ, ನಿರೂಪಿಸಿದರು ಹಾಗೂ ಸಿ.ಪುಟ್ಟರಾಜ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.