![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 16, 2022, 12:52 PM IST
ಸಿದ್ದಾಪುರ: ಶಂಕರನಾರಾಯಣ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸಂತೋಷ್ಕುಮಾರ ಶೆಟ್ಟಿ ಅವರನ್ನು ಶಿಕ್ಷಣ ಇಲಾಖೆ ವರ್ಗಾವಣೆ ಮಾಡಿದ್ದು ಇದನ್ನು ಖಂಡಿಸಿ ಶಾಲಾ ಪ್ರಾರಂಭೋತ್ಸವದ ದಿನದಂದೇ ಪೋಷಕರು ಪ್ರತಿಭಟನೆ ನಡೆಸಿದರು.
ಸಂತೋಷ್ ಕುಮಾರ ಶೆಟ್ಟಿ ಅವರು ಶಂಕರನಾರಾಯಣ ಸರಕಾರಿ ಹಿ.ಪ್ರಾ. ಶಾಲೆಗೆ ಶಿಕ್ಷಕರಾಗಿ ಬರುವಾಗ 110 ವಿದ್ಯಾರ್ಥಿಗಳು ಇದ್ದಿದ್ದರು. ಕಳೆದ ಶೈಕ್ಷಣಿಕ ವರ್ಷದಲ್ಲಿ 310 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದರು. ಈ ಶೈಕ್ಷಣಿಕ ವರ್ಷದಿಂದ ಇನ್ನೂ ನೂರು ವಿದ್ಯಾರ್ಥಿಗಳು ಸೇರ್ಪಡೆಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.
ಆದರೆ ಸಂತೋಷ್ಕುಮಾರ ಶೆಟ್ಟಿ ಅವರ ವರ್ಗಾವಣೆ ಮಕ್ಕಳ ಹೆತ್ತವರಲ್ಲಿ ಹಾಗೂ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಮೇ 16ರ ಶೈಕ್ಷಣಿಕ ವರ್ಷ ಪ್ರಾರಂಭ ದಿನದಂದೇ ಪೋಷಕರು ಒಂದು ಮಕ್ಕಳನ್ನು ಕೂಡ ಶಾಲೆಗೆ ಕಳುಹಿಸದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸುತ್ತಿರುವ ಶಾಲೆಗೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಭೇಟಿ ನೀಡಿ ಮನವಿ ಸ್ವೀಕಾರ ಮಾಡಿದರು.
ಪ್ರತಿಭಟನೆಯ ಬಗ್ಗೆ ಕ್ಷೇತ್ರ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹಾಗೂ ಸಚಿವರಿಗೆ ಮತ್ತು ಶಿಕ್ಷಣ ಇಲಾಖೆಗೆ ಪೋಷಕರು ಪತ್ರ ಕೂಡ ಬರೆದಿದ್ದಾರೆ. ಗುಣಮಟ್ಟದ ಶಿಕ್ಷಣ ಹಾಗೂ ಶಾಲೆಯ ಅಭಿವೃದ್ಧಿ ಕಂಡು 13 ಗ್ರಾಮಗಳಿಂದ ಹಲವು ವಾಹನಗಳ ಮೂಲಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಉನ್ನತ ಸ್ಥಿತಿಯಲ್ಲಿರುವ ಶಾಲೆಗೆ ಶಿಕ್ಷಣ ಸಂತೋಷ್ ಕುಮಾರ ಶೆಟ್ಟಿ ಅವರ ವರ್ಗಾವಣೆ ಪ್ರತಿಭಟನೆಯ ಹಾದಿ ಹಿಡಿದಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.