ಬುದ್ಧನ ಜನ್ಮ ಸ್ಥಳದಲ್ಲಿ ಪ್ರಧಾನಿ ಮೋದಿ: ನೇಪಾಳದೊಂದಿದೆ ರಾಜತಾಂತ್ರಿಕ ಮಾತುಕತೆ

2014ರಲ್ಲಿ ಕೊಟ್ಟ ಸಸಿ ಮರವಾಗುವುದನ್ನು ಕಂಡು ಖುಷಿ ಪಟ್ಟ ಪ್ರಧಾನಿ

Team Udayavani, May 16, 2022, 3:56 PM IST

thumb 7

ಲುಂಬಿನಿ/ನವದೆಹಲಿ: ಬುದ್ಧಪೂರ್ಣಿಮೆಯ ದಿನವಾದ ಸೋಮವಾರ ಇದೇ ಮೊದಲ ಬಾರಿಗೆ ನೇಪಾಳದ ಲುಂಬಿನಿಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಗಡಿ ಬಿಕ್ಕಟ್ಟಿನಿಂದಾಗಿ ಹದಗೆಟ್ಟಿದ್ದ ಎರಡೂ ದೇಶಗಳ ನಡುವಿನ ಸಂಬಂಧವನ್ನು ಮತ್ತೆ ಬೆಸೆಯುವಲ್ಲಿ ಯಶಸ್ವಿಯಾಗಿದ್ದಾರೆ.

2014ರ ಬಳಿಕ ಪ್ರಧಾನಿ ಮೋದಿ ಅವರು 5ನೇ ಬಾರಿಯ ನೇಪಾಳ ಭೇಟಿ ಇದಾದರೂ, ಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ತೆರಳಿರುವುದು ಇದೇ ಮೊದಲು. ನೇಪಾಳ ಪ್ರಧಾನಿ ಶೇರ್‌ ಬಹಾದೂರ್‌ ದೇಬ್‌ ಅವರ ಆಹ್ವಾನದ ಮೇರೆಗೆ ನೆರೆರಾಷ್ಟ್ರಕ್ಕೆ ಪ್ರವಾಸ ಕೈಗೊಂಡ ಅವರು, ದೇಬ್‌ ಜೊತೆಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಿದ್ದಾರೆ.

ಇದೇ ವೇಳೆ, ಉನ್ನತ ಶೈಕ್ಷಣಿಕ ಸಂಸ್ಥೆಗಳ ನಡುವೆ ಸಹಕಾರ, ಜಲವಿದ್ಯುತ್‌ ಯೋಜನೆ, ಬೌದ್ಧಧರ್ಮದ ಅಧ್ಯಯನ ಸೇರಿದಂತೆ 6 ಒಪ್ಪಂದಗಳಿಗೆ ಉಭಯ ದೇಶಗಳು ಸಹಿಯನ್ನೂ ಹಾಕಿವೆ. ಭಾರತದ ಸರ್ಕಾರಿ ಸ್ವಾಮ್ಯದ ಎಸ್‌ಜೆವಿಎನ್‌ ಲಿಮಿಟೆಡ್‌ ನೇಪಾಳದಲ್ಲಿ 4,900 ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಜಲವಿದ್ಯುತ್‌ ಯೋಜನೆ ಅರುಣ್‌-4 ಅನ್ನು ಅಭಿವೃದ್ಧಿಪಡಿಸುವುದಾಗಿ ಘೋಷಿಸಿದೆ. 490 ಮೆ.ವ್ಯಾ.ನ ಈ ಯೋಜನೆ ಜಾರಿಗೆ ಸಂಬಂಧಿಸಿದ ಒಪ್ಪಂದಕ್ಕೆ ಸೋಮವಾರ ಉಭಯ ದೇಶಗಳ ಪ್ರಧಾನಿಗಳ ಸಮ್ಮುಖದಲ್ಲೇ ಸಹಿ ಹಾಕಲಾಗಿದೆ.

ಭಾರತದ ನೆರವಿಗೆ ಧನ್ಯವಾದ
ಅಂತಾರಾಷ್ಟ್ರೀಯ ಬೌದ್ಧಧರ್ಮೀಯರ ಸಮ್ಮೇಳನದಲ್ಲಿ ಮಾತನಾಡಿದ ನೇಪಾಳ ಪ್ರಧಾನಿ ಶೇರ್‌ ಬಹಾದೂರ್‌ ದೇಬಾ, “ಪರಸ್ಪರ ಗೌರವದೊಂದಿಗೆ ಭಾರತದೊಂದಿಗಿನ ಸಂಬಂಧವನ್ನು ಬಲಿಷ್ಠಗೊಳಿಸಲು ನೇಪಾಳ ಎದುರುನೋಡುತ್ತಿದೆ. ಎರಡೂ ದೇಶಗಳು ಸಮಾನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳು ಹಾಗೂ ಬಂಧದೊಂದಿಗೆ ಬೆಸೆದುಕೊಂಡಿವೆ. ನಮ್ಮ ದೇಶದ ಮೂಲಸೌಕರ್ಯ, ಸಂಪರ್ಕ ವ್ಯವಸ್ಥೆ, ಜಲ ವಿದ್ಯುತ್‌, ಕೃಷಿ, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಭಾರತದ ಸಹಕಾರಕ್ಕೆ ನಾವು ಚಿರಋಣಿಗಳು’ ಎಂದಿದ್ದಾರೆ.

ನೇಪಾಳದಿಂದ ನೇರವಾಗಿ ಖುಷಿನಗರಕ್ಕೆ
ತಮ್ಮ ಒಂದು ದಿನದ ನೇಪಾಳ ಪ್ರವಾಸ ಮುಗಿಸಿ ಸೋಮವಾರ ಸಂಜೆ ಸ್ವದೇಶಕ್ಕೆ ವಾಪಸಾದ ಪ್ರಧಾನಿ ಮೋದಿ ಅವರು ನೇರವಾಗಿ ಉತ್ತರಪ್ರದೇಶದ ಖುಷಿನಗರಕ್ಕೆ ತೆರಳಿದ್ದಾರೆ. ಇಲ್ಲಿರುವ ಮಹಾಪರಿನಿರ್ವಾಣ ದೇವಾಲಯಕ್ಕೆ ಭೇಟಿ ನೀಡಿದ ಅವರು ಬುದ್ಧಪೂರ್ಣಿಮೆಯ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಲಕ್ನೋದಲ್ಲಿ ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರ ನಿವಾಸಕ್ಕೆ ತೆರಳಿ ಭೋಜನಕೂಟದಲ್ಲಿ ಪಾಲ್ಗೊಂಡಿದ್ದಾರೆ. ಜತೆಗೆ, ರಾಜ್ಯದ ಸಚಿವರೊಂದಿಗೂ ಮಾತುಕತೆ ನಡೆಸಿದ್ದಾರೆ.

ಸರಣಿ ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ
ಒಂದೇ ದಿನದ ಪ್ರವಾಸವಾಗಿದ್ದರೂ ಪ್ರಧಾನಿ ಮೋದಿ ಅವರು ನೇಪಾಳದಲ್ಲಿ ಬೆಳಗ್ಗಿನಿಂದ ಸಂಜೆವರೆಗೂ ಬಿಡುವಿಲ್ಲದೇ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಪ್ರಧಾನಿ ದೇಬಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗೂ ಮುನ್ನ ಅವರು ಲುಂಬಿನಿಯಲ್ಲಿ ಪವಿತ್ರ ಮಾಯಾದೇವಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಅವರಿಗೆ ಪ್ರಧಾನಿ ದೇಬಾ ಮತ್ತು ಅವರ ಪತ್ನಿ ಡಾ.ರಾಣಾ ದೇಬಾ ಕೂಡ ಸಾಥ್‌ ನೀಡಿದರು. ದೇಗುಲದ ಆವರಣದಲ್ಲಿ ಬುದ್ಧ ಹುಟ್ಟಿದ ನಿಖರ ಸ್ಥಳ ಎಂದು ಹೇಳಲಾದ ಮರ್ಕರ್‌ ಶಿಲೆಯ ದರ್ಶನ ಮಾಡಿ ಗೌರವ ಸಲ್ಲಿಸಿದರು.

2014ರಲ್ಲಿ ಪ್ರಧಾನಿ ಮೋದಿ ಅವರು ಲುಂಬಿನಿಗೆ ಉಡುಗೊರೆಯಾಗಿ ನೀಡಿದ್ದ ಬುದ್ಧಗಯಾದ ಸಸ್ಯವನ್ನು ಅಲ್ಲೇ ನೆಡಲಾಗಿದ್ದು, ಸೋಮವಾರ ಉಭಯ ಪ್ರಧಾನಿಗಳು ಆ ಸಸ್ಯಕ್ಕೆ ನೀರುಣಿಸಿದರು. ಇದಾದ ಬಳಿಕ ಮೋದಿ ಅವರು ಲುಂಬಿನಿ ಮೊನಾಸ್ಟಿಕ್‌ ವಲಯದಲ್ಲಿ ಇಂಡಿಯಾ ಇಂಟರ್‌ನ್ಯಾಷನಲ್‌ ಸೆಂಟರ್‌ ಫಾರ್‌ ಬುದ್ಧಿಸ್ಟ್‌ ಕಲ್ಚರ್‌ ಆ್ಯಂಡ್‌ ಹೆರಿಟೇಜ್‌ಗೆ ಶಿಲಾನ್ಯಾಸ ನೆರವೇರಿಸಿದರು.

 

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.