ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ
Team Udayavani, May 17, 2022, 12:08 PM IST
ಪುಂಜಾಲಕಟ್ಟೆ: ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಮೇಲ್ಭಾಗದಿಂದ ಬೃಹತ್ ಬಂಡೆಕಲ್ಲೊಂದು ಉರುಳಿ ಬಿದ್ದ ಘಟನೆ ಮಂಗಳವಾರ ಸಂಭವಿಸಿದೆ.
ಬಂಡೆಕಲ್ಲು ಉರುಳಿ ಬಿದ್ದ ರಭಸಕ್ಕೆ ಮರಗಳು ಮುರಿದು ಬಿದ್ದಿದ್ದು, ದೇವಸ್ಥಾನದ ರಥಬೀದಿಯಿಂದ ಕಾರಿಂಜಬೈಲ್ ಸಂಪರ್ಕಿಸುವ ರಸ್ತೆಗೆ ಬಂಡೆಕಲ್ಲು, ಮರ ಬಿದ್ದು ರಸ್ತೆ ತಡೆಯುಂಟಾಗಿತ್ತು.
ಅರಣ್ಯ ಇಲಾಖೆಯ ಸಿಬಂದಿಗಳು ಹಾಗೂ ಗ್ರಾಮಸ್ಥರ ನೆರವಿನಿಂದ ರಸ್ತೆಯಲ್ಲಿದ್ದ ಮರಗಳನ್ನು ತೆರವು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಗುಡ್ಡದಲ್ಲಿರುವ ಕೆಲವು ಮರಗಳಿಗೆ ಹಾನಿಯಾಗಿದೆ.
ಬೆಳಗ್ಗೆ ಸುಮಾರು 9 ಗಂಟೆಗೆ ಕಾರಿಂಜೇಶ್ವರನ ಸನ್ನಿಧಿಯ ಬಲ ಭಾಗದಲ್ಲಿದ್ದ ಬೃಹತ್ ಬಂಡೆ ಕಲ್ಲು ಕೆಳಗೆ ಉರುಳಿ ಕೊಂಡು ಬಂದು ರಸ್ತೆಯ ಬದಿಯಲ್ಲಿ ಸಿಲುಕಿಕೊಂಡು ನಿಂತಿದೆ.
ಇದನ್ನೂ ಓದಿ:ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ
ಕಾರಿಂಜೇಶ್ವರನ ಸನ್ನಿಧಿಯ ಎಡಭಾಗದಲ್ಲಿತಡೆಗೋಡೆ ಕುಸಿದುಬಿದ್ದಿತ್ತು. ಕಾರಿಂಜ ದೇವಸ್ಥಾನದ ಪರಿಸರದಲ್ಲಿ ನಡೆಸುತ್ತಿದ್ದ ಗಣಿಗಾರಿಕೆ ಪರಿಣಾಮವಾಗಿ ಇಲ್ಲಿ ಕುಸಿತವಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿದ ಹೋರಾಟದಿಂದ ಗಣಿಗಾರಿಕೆ ಸ್ಥಗಿತಗೊಂಡಿದೆ. ಇದೀಗ ಮತ್ತೆ ಬಂಡೆ ಕಲ್ಲು ಕುಸಿದಿರುವುರಿಂದ ಗ್ರಾಮಸ್ಥರು ಕಾರಿಂಜೇಶ್ವರ ದೇವಸ್ಥಾನಕ್ಕೆ ಧಕ್ಕೆಯಾಗುವ ಆತಂಕದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.