ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

ಉಲ್ಲಾಳದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

Team Udayavani, May 18, 2022, 3:05 PM IST

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರವಾಹದಿಂದಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಎತ್ತರದ ಪ್ರದೇಶದಿಂದ ಮಳೆನೀರು ಹೆಚ್ಚು ಹರಿದುಬಂದಾಗ ತಗ್ಗು ಪ್ರದೇಶಗಳಿಗೆ ನುಗ್ಗುತ್ತದೆ. ರಾಜಾಕಾಲುವೆಗಳ ಪಕ್ಕದಲ್ಲಿ ಮನೆಗಳು ಕಟ್ಟಿಕೊಂಡಿದ್ದಾರೆ. ಆದ್ದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ನೀರು ನುಗ್ಗಿರುವ ಮನೆಗಳಿಗೆ ನೀರು ತೆಗೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ರಾಜಕಾಲುವೆಗಳನ್ನು ಪೂರ್ಣಪ್ರಮಾಣದಲ್ಲಿ ನಿರ್ಮಿಸಲು ನೀರು ಹೊರಗೆ ಹರಿಯುವಂತೆ ಸಂಪರ್ಕ ಕಲ್ಪಿಸಬೇಕು. ರಾಜಕಾಲುವೆಗಳಲ್ಲಿ ನೀರು ಹರಿದುಹೋಗದೇ ಒಂದೇ ಕಡೆ ನಿಲ್ಲುತ್ತಿರುವ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ವರ್ಷದಲ್ಲಿ ಸರಾಗ ಮಳೆನೀರಿನ ಹರಿವಿಗಾಗಿ ಎಲ್ಲ ಅಡಚಣೆಗಳನ್ನು ತೆಗೆಯುವ ಕಾಮಗಾರಿಗಳಿಗೆ ಆದೇಶ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ಇರುವ ಬಾಟೆಲ್‍ನೆಕ್‍ಗಳನ್ನು ತೆಗೆಯಲು ಮೊದಲ ಪ್ರಾಶಸ್ತ್ಯ ನೀಡಲಾಗುವುದು ಎಂದರು.

ಇದನ್ನೂ ಓದಿ : ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್

ಸೆಕಂಡರಿ ಮತ್ತು ಟರ್ಷಿಯರಿ ಕಾಲುವೆಗಳನ್ನು ನಿರ್ಮಾಣಕ್ಕೆ ಕ್ರಮ:
ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಕೆರೆ ಪ್ರದೇಶಗಳನ್ನು ಒತ್ತುವರಿ ಮಾಡಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಇಂತಹ ಪ್ರದೇಶಗಳಲ್ಲಿ ಬಿಬಿಎಂಪಿ ವತಿಯಿಂದ ಸೆಕಂಡರಿ ಮತ್ತು ಟರ್ಷಿಯರಿ ಕಾಲುವೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಒಂದು ವರ್ಷದೊಳಗೆ ಮಾಡಲಾಗುವುದು ಎಂದರು.

ರಾಜಕಾಲುವೆಯ ಉಳಿದ ಕಾಮಗಾರಿ ಈ ವರ್ಷ ಪೂರ್ಣ:
ರಾಜಕಾಲುವೆ ನಿರ್ಮಾಣ ಕಾರ್ಯ ಅಪೂರ್ಣವಾಗಿ ನಿಂತುಹೋಗಿರುವ ಪ್ರದೇಶಗಳಲ್ಲಿಯೇ ನೀರು ನುಗ್ಗುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ರಾಜಕಾಲುವೆ ಸುಮಾರು 800 ಕಿಮೀ ಉದ್ದವಿದ್ದು, ಕಳೆದ ವರ್ಷ 400 ಕಿ.ಮೀ ಕಾಮಗಾರಿ ಮಾತ್ರ ಆಗಿದ್ದು, ಇನ್ನುಳಿದ ಕಾಮಗಾರಿಗಳನ್ನು ಈ ವರ್ಷ ಕೈಗೊಂಡು ಪೂರ್ಣಗೊಳಿಸಲಾಗುವುದು ಎಂದರು.

ಉಲ್ಲಾಳದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ :
ಉಲ್ಲಾಳದಲ್ಲಿ ಜಲಮಂಡಳಿಯ ಕಾಮಗಾರಿ ನಡೆಯುತ್ತಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.

ರಾಜಕಾಲುವೆ, ಕೆರೆ ಒತ್ತುವರಿ ಪ್ರದೇಶವನ್ನು ಗುರುತಿಸಲಾಗಿದ್ದು,ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಒಳಚರಂಡಿ, ಗ್ಯಾಸ್ ಲೈನ್, ನೀರು ಸರಬರಾಜು, ಟೆಲಿಕಾಂ ಕೇಬಲ್, ವಿದ್ಯುಚ್ಛಕ್ತಿ ಕೇಬಲಿಂಗ್ , ಹಲವಾರು ಕಾಮಗಾರಿಗಳು ಒಟ್ಟಿಗೆ ಪ್ರಾರಂಭವಾಗಿದೆ. ಆದ್ದರಿಂದ ಟಾಸ್ಕ್ ಫೋರ್ಸ್‍ನ್ನು ರಚಿಸಲಾಗಿದ್ದು, ಈ ಎಲ್ಲ ಕಾಮಗಾರಿಗಳು ಮುಗಿದ ನಂತರ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.