ಗೋಶಾಲೆ ನಿರ್ಮಾಣಕ್ಕೆ ಶೀಘ್ರ ಭೂಮಿ ಮಂಜೂರು

ಜಾನುವಾರುಗಳಿಗೆ ರಕ್ಷಣೆ ನೀಡದಿದ್ರೆ ಸಹಾಯಧನ ನೀಡಲ್ಲ: ಡಿಸಿ ಕವಿತಾ

Team Udayavani, May 19, 2022, 1:18 PM IST

dc

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಗೆ 4 ಗೋಶಾಲೆಗಳ ಅವಶ್ಯಕತೆಯಿದ್ದು, ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿಯಲ್ಲಿ ಒಂದು ಗೋಶಾಲೆ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ 3 ಹೊಸ ಗೋಶಾಲೆಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ತೆರೆಯಲಾಗುವುದು. ಅಗತ್ಯವಿರುವ ಭೂಮಿಯನ್ನು ಒಂದು ವಾರದಲ್ಲಿ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧುವಾರ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ಅಮೃತ ಕಾವಲು ಪ್ರದೇಶ ಒತ್ತುವರಿಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಉತ್ಛ ನ್ಯಾಯಾಲಯ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿದೆ. ರೇಖಲಗೆರೆ ಕಾವಲು ಪ್ರದೇಶವನ್ನು ನೆಡುತೋಪಾಗಿ ಪರಿವರ್ತಿಸಲು ಸರ್ಕಾರ ಮಂಜೂರು ಮಾಡಿದೆ. ಅನ್ಯ ಕಾರ್ಯಗಳಿಗೆ ಕಾವಲು ಪ್ರದೇಶವನ್ನು ಬಳದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಖಾಸಗಿ ಗೋಶಾಲೆ ನಡೆಸುವವರು ಗೋಹತ್ಯಾ ನಿಷೇಧ ಕಾಯ್ದೆಯಡಿ ರಕ್ಷಿಸಿದ ಜಾನುವಾರುಗಳಿಗೆ ಆಶ್ರಯ ಒದಗಿಸಬೇಕು. ಇಲ್ಲವಾದರೆ ಖಾಸಗಿ ಗೋಶಾಲೆಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ತಡೆ ಹಿಡಿಯಲಾಗುವುದು ಎಂದು ಎಚ್ಚರಿಕೆ ನೀಡಿದರು.

ಚಿತ್ರದುರ್ಗ ತಾಲೂಕು ಸಿಂಗಾಪುರ ಬಳಿ 35 ಎಕರೆ ಜಮೀನು ಇದೆ. ಇದರಲ್ಲಿ ಒಂದು ಗೋಶಾಲೆ ತೆರೆಯಲು ಅಗತ್ಯವಿರುವ 10 ಎಕರೆ ಜಾಗವನ್ನು ಸಂಬಸಿದ ತಹಶೀಲ್ದಾರ್‌ ಹಾಗೂ ಪಶು ಇಲಾಖೆ ಉಪನಿರ್ದೇಶಕರು ಜಂಟಿಯಾಗಿ ಪರಿಶೀಲನೆ ನಡೆಸಿ ವರದಿ ನೀಡಿ. ಮೊಳಕಾಲ್ಮೂರು ಹಾಗೂ ಹಿರಿಯೂರು ತಾಲೂಕುಗಳಲ್ಲಿ ಗೋಶಾಲೆಗೆ ಜಮೀನು ಗುರುತಿಸುವ ಕೆಲಸವಾಗಬೇಕು. ಬರಗಾಲಕ್ಕೆ ತುತ್ತಾಗುವ ಪ್ರದೇಶದಲ್ಲಿ ಗೋಶಾಲೆ ತೆರೆಯಲು ಅಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳಿಗೆ ಸಂಬಂಧ ಪಟ್ಟ ತಹಶೀಲ್ದಾರರು ಸಹ ಜಾಗ ಗುರುತಿಸಿ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

ಕಾತ್ರಾಳ್‌ ಕೆರೆ ಬಳಿಯ ಆದಿಚುಂಚನಗಿರಿ ಗೋಶಾಲೆಯ ನಿರ್ವಾಹಕರಾದ ನಿರಂಜನ್‌ ಮೂರ್ತಿ ಮಾತನಾಡಿ, ಸರ್ಕಾರ ಎನ್‌.ಡಿ.ಆರ್. ಎಫ್‌ ಮಾರ್ಗಸೂಚಿ ಅನುಸಾರ ಪ್ರತಿ ಜಾನುವಾರುವಿಗೆ ನೀಡುತ್ತಿರುವ ಸಹಾಯಧನ ಹೆಚ್ಚಿಸಲು ಮನವಿ ಮಾಡಿದರು.

ಕೋವಿಡ್‌ ಸಂದರ್ಭದಲ್ಲಿ ಗೋಶಾಲೆಗಳಿಗೆ ಯಾವುದೇ ಸಹಾಯಧನ ಬಂದಿರುವುದಿಲ್ಲ. ಬಾಕಿ ಸಹಾಯಧನವನ್ನು ಸಹ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಪಶು ಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ| ಎಸ್‌. ಕಲ್ಲಪ್ಪ ಮಾತನಾಡಿ, ಎನ್‌.ಡಿ.ಆರ್.ಎಫ್‌ ಅಡಿ ನೀಡುತ್ತಿರುವ ಸಹಾಯಧನ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಸದ್ಯ ಎನ್‌ಡಿಆರ್‌ ಎಫ್‌ ಮಾರ್ಗಸೂಚಿ ಅನುಸಾರ ದಿನ ಒಂದಕ್ಕೆ ಪ್ರತಿ ಜಾನುವಾರಿಗೆ 70 ರೂಪಾಯಿಗಳನ್ನು ನಿರ್ವಹಣೆ ವೆಚ್ಚವೆಂದು ನಿಗದಿಪಡಿಸಲಾಗಿದೆ. ಇದರಲ್ಲಿ ಶೇ. 25ರಷ್ಟು ಹಣವನ್ನು ಖಾಸಗಿ ಗೋಶಾಲೆಗಳಿಗೆ ಜಾನುವಾರು ಸಂಖ್ಯೆ ಆಧರಿಸಿ ಸಹಾಯಧನವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಪ್ರಸಕ್ತ ವರ್ಷಕ್ಕೆ 10 ಗೋಶಾಲೆಗಳಿಗೆ ಸಹಾಯಧನ ನೀಡಲು ಅನುಮೋದನೆ ನೀಡಲಾಯಿತು. ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಪಾಲಿ ಕ್ಲಿನಿಕ್‌ ಉಪನಿರ್ದೇಶಕ ಡಾ.ಪ್ರಸನ್ನ, ತಹಶೀಲ್ದಾರ್‌ ಸತ್ಯನಾರಾಯಣ, ವಕೀಲರು ಹಾಗೂ ಜಿಲ್ಲಾ ಪ್ರಾಣಿ ಕಲ್ಯಾಣ ಅಧಿಕಾರಿ ದೇವಿಪ್ರಸಾದ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.