![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 19, 2022, 2:13 PM IST
ಸಿದ್ಧಾರ್ಥ್ ಮಹೇಶ್ ನಾಯಕನಾಗಿ ಅಭಿನಯಿಸಿರುವ ಗರುಡ ಚಿತ್ರ ಮೇ 20ರಂದು ರಾಜ್ಯಾದ್ಯಂತ ತೆರೆಗೆ ಕಾಣಲು ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು , ಈ ಸಮಯದಲ್ಲಿ ಚಿತ್ರತಂಡ ಅದ್ಧೂರಿಯಾಗಿ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆಸಿದೆ.
ಪ್ರಿ ರಿಲೀಸ್ ಇವೆಂಟ್ನಲ್ಲಿ ಮಾತನಾಡಿದ ನಿರ್ದೇಶಕ ಧನಕುಮಾರ ಕೆ, “ಇಂದು ನಾನು ಇಲ್ಲಿಯವರೆಗೆ ಬರಲು 24 ವರ್ಷಗಳೇ ಆದವು. ಅದೆಷ್ಟೋ ನಿರ್ದೇಶಕರು, ನಿರ್ಮಾಪಕರು, ಕಲಾವಿದರ ಬಳಿ ಸಾಕಷ್ಟು ಕಲಿತು ಅವರ ಸಹಕಾರದಿಂದ ಇಷ್ಟರಮಟ್ಟಿಗೆ ಬಂದು ನಿಂತಿದ್ದೇನೆ. ಇದೇ 20 ರಂದು ನಮ್ಮ ಶ್ರಮ, ಕನಸು ಸಂತೋಷ ಎಲ್ಲವೂ ಅದ ಗರುಡ ತೆರೆಕಾಣಲಿದೆ’ ಎಂದರು.
ಚಿತ್ರದ ಸಂಗೀತ ನಿರ್ದೇಶಕ ರಘು ದೀಕ್ಷಿತ್, “ಈ ಮೊದಲು ಜಾನಪದ ಹಾಗೂ ಪ್ರೀತಿ-ಪ್ರೇಮದ ಹಾಡುಗಳನ್ನು ಮಾಡಿದ್ದ ನನಗೆ, ಒಂದು ಕಮರ್ಷಿಯಲ್ ಚಿತ್ರಕ್ಕೆ ಸಂಗೀತ ನೀಡಲು ಅವಕಾಶ ಸಿಕ್ಕಿದ್ದು ಇದೆ ಮೊದಲು. ಈ ಚಿತ್ರದ ಸಂಗೀತ ಸಂಯೋಜನೆ ಸಮಯದಲ್ಲಿ ಸಾಕಷ್ಟು ವಿಷಯಗಳನ್ನು ಸಹ ಕಲಿತೆ. ವಿಶೇಷ ಅಂದರೆ ಸಂಗೀತದ ಜೊತೆಗೆ ಚಿತ್ರದಲ್ಲಿ ಭದ್ರತೆ ಸಲಹೆಗಾರನಾಗಿ ಸಣ್ಣ ಪಾತ್ರವನ್ನು ಮಾಡಿದ್ದೇನೆ’ ಎಂದರು ಕಾರ್ಯಕ್ರಮದಲ್ಲಿ ವಿನೋದ್ ಪ್ರಭಾಕರ್ ಅಥಿತಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು.
ಇದನ್ನೂ ಓದಿ:ಶಿವನಿಗೆ ದೇಗುಲ ರಚನೆಯ ಅಗತ್ಯವಿಲ್ಲ, ಅವನು ಪ್ರತಿ ಕಣದಲ್ಲೂ ನೆಲೆಸಿದ್ದಾನೆ: ಕಂಗನಾ ರಣಾವತ್
ಚಿತ್ರದ ನಾಯಕರು ಸಿದ್ಧಾರ್ಥ ಮಹೇಶ್, ಶ್ರೀನಗರ್ ಕಿಟ್ಟಿ, ನಾಯಕಿಯರಾದ ಆಶಿಕಾ ರಂಗನಾಥ್, ಐಂದ್ರಿತಾ ರೇ, ಪ್ರಿ ರಿಲೀಸ್ ಇವೆಂಟ್ಗೆ ಮೆರಗು ಹೆಚ್ಚಿಸಿದರು.
ಚಿತ್ರದಲ್ಲಿ ಸಿದ್ಧಾರ್ಥ್ ಮಹೇಶ್ ಜೊತೆ ಶ್ರೀನಗರ ಕಿಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕಾಮ್ನಾ ಜೇಠ್ಮಲಾನಿ, ಆಶಿಕಾ ರಂಗನಾಥ್, ಐಂದ್ರಿತಾ ರೇ, ರಮೇಶ್ ಭಟ್, ರಂಗಾಯಣ ರಘು, ಆದಿ ಲೊಕೇಶ್, ರಾಜೇಶ್ ನಟರಂಗ, ರವಿ ಶಂಕರ್ ಗೌಡ, ಗಿರಿ, ಸುಜಯ್ ಶಾಸ್ತ್ರಿ, ಸುನೇತ್ರಾ ಪಂಡಿತ್, ಮೈಕೋ ನಾಗರಾಜ್, ಜಹಾಂಗೀರ್, ಮುಂತಾದ ಕಲಾವಿದರು ತಾರಾ ಬಳಗದಲ್ಲಿದ್ದಾರೆ.
“ಆರೆಂಜ್ ಪಿಕ್ಸೆಲ್ ಫಿಲ್ಮಂ ಫ್ಯಾಕ್ಟರಿ’ ಅಡಿಯಲ್ಲಿ ಬಿ ಕೆ ರಾಜ ರೆಡ್ಡಿ, ಕಿಶೋರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.