ಒಂದೇ ಮಳೆಗೆ ಮಾರಲದಿನ್ನಿ ಡ್ಯಾಂ ಭರ್ತಿ!


Team Udayavani, May 21, 2022, 5:31 PM IST

15dam

ಮಸ್ಕಿ: ತಾಲೂಕಿನ ಮಾರಲದಿನ್ನಿ ಬಳಿ ಇರುವ ಮಸ್ಕಿ ನಾಲಾ ಯೋಜನೆ(ಎಂಎನ್‌ಪಿ) ಅಣೆಕಟ್ಟು ಒಂದೇ ಮಳೆಗೆ ಈ ಬಾರಿ ಭರ್ತಿಯಾಗಿದೆ. ಪ್ರತಿ ವರ್ಷ ಮುಂಗಾರು ಆರಂಭದ ಬಳಿಕ ಜುಲೈ ತಿಂಗಳ ವೇಳೆಗೆ ಭರ್ತಿಯಾಗುತ್ತಿದ್ದ ಇಲ್ಲಿನ ಜಲಾಶಯ ಈ ಬಾರಿ ಮುಂಗಾರು ಪೂರ್ವವೇ ಭರ್ತಿಯಾಗಿದ್ದು, ಅಚ್ಚುಕಟ್ಟು ವ್ಯಾಪ್ತಿ ಪ್ರದೇಶದ ರೈತರ ಸಂತಸ ಇಮ್ಮಡಿಯಾಗಿದ್ದರೆ, ಹಳ್ಳಕ್ಕೆ ಹೊಂದಿಕೊಂಡ ಹಳ್ಳಿಗರಲ್ಲಿ ಢವ-ಢವ ಶುರು ಮಾಡಿದೆ.

ಈಗಲೇ ಹೊರ ಹರಿವು: ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಗುರುವಾರದ ಅಂತ್ಯಕ್ಕೆ 25 ಅಡಿ ನೀರು ಜಲಾಶಯದ ಮಡಿಲು ಸೇರಿತ್ತು. ಆದರೆ, ಶುಕ್ರವಾರದ ವೇಳೆಗೆ 0.5 ಟಿಎಂಸಿ ಅಡಿ (29 ಅಡಿ ನೀರು ಸಂಗ್ರಹ) ಸಾಮರ್ಥ್ಯದ ಮಸ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಜಲಾಶಯದ ಎರಡು ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿದೆ.

ಸದ್ಯ 500 ಕ್ಯೂಸೆಕ್‌ನಷ್ಟು ಹಿರೇ ಹಳ್ಳಕ್ಕೆ ಬಿಡಲಾಗುತ್ತಿದೆ. ಹಳ್ಳದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುವುದರಿಂದ ಹಳ್ಳದ ದಂಡೆಯ ಗ್ರಾಮಸ್ಥರು ಹಳ್ಳದಲ್ಲಿ ಇಳಿಯದಂತೆ ಸೂಚನೆ ನೀಡಲಾಗುತ್ತಿದೆ. ಇನ್ನು ನಿರಂತರ ಮಳೆಯಿದ್ದು, ನೀರಿನ ಒಳ ಹರಿವು ಹೆಚ್ಚಿರುವ ಕಾರಣ ಜಲಾಶಯದ ಗೇಟ್‌ಗಳ ಮೂಲಕ ಹೆಚ್ಚಿನ ಪ್ರಮಾಣದ ನೀರು ಹೊರ ಹರಿಸುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಈಗಾಗಲೇ ತಾಲೂಕು ಆಡಳಿತಕ್ಕೆ ಹಾಗೂ ಹಳ್ಳದ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂಗಳಿಗೆ ಮಾಹಿತಿ ನೀಡಲಾಗಿದ್ದು, ಯಾರು ಹಳ್ಳಕ್ಕೆ ಇಳಿಯದಂತೆ ಸೂಚನೆ ನೀಡಲಾಗುತ್ತಿದೆ.

ಬೇಸಿಗೆ ವೇಳೆಗೆ ಡೆಡ್‌ ಸ್ಟೋರೇಜ್‌ ಹೊರತುಪಡಿಸಿ ಸಂಪೂರ್ಣ ಬರಿದಾಗಿದ್ದ ಮಸ್ಕಿ ನಾಲಾ ಯೋಜನೆಯ ಅಣೆಕಟ್ಟು ಈ ಬಾರಿ ಮುಂಗಾರು ಆರಂಭದ ಮುನ್ನವೇ ಸಂಪೂರ್ಣ ತುಂಬಿರುವುದು ಐತಿಹಾಸಿಕವೆನಿಸಿದೆ. ಜುಲೈ ಅಂತ್ಯದಲ್ಲಿ ಅಣೆಕಟ್ಟು ಭರ್ತಿಯಾಗಿ ಆಗಸ್ಟ್‌ ಅಂತ್ಯದ ವೇಳೆಗೆ ಬೆಳೆಗೆ ನೀರು ಹರಿಸುವುದು ಇಲ್ಲಿನ ವಾಡಿಕೆ. ಆದರೆ, ಈ ಬಾರಿ ಮುಂಗಾರು ಪೂರ್ವವೇ ಡ್ಯಾಂ ಭರ್ತಿಯಾಗಿದ್ದರಿಂದ ಅಚ್ಚುಕಟ್ಟು ವ್ಯಾಪ್ತಿಯ ಮಾರಲದಿನ್ನಿ, ಉಸ್ಕಿಹಾಳ, ಕಾಟಗಲ್‌, ಮುದಬಾಳ, ವೆಂಕಟಾಪುರ, ದಿಗ್ಗನಾಯಕನಬಾವಿ, ಬೆಲ್ಲದಮರಡಿ, ಬೆನಕಟ್ಟಿ, ವೆಂಕಟಾಪುರ ತಾಂಡ ಸೇರಿ 10 ಹಳ್ಳಿಗಳ ಸುಮಾರು 7,416 ಎಕರೆ ಜಮೀನುಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ನೀರಿನ ಬರ ನೀಗಿದಂತಾಗಿದೆ.

ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಮಸ್ಕಿ ಜಲಾಶಯದಿಂದ ನೀರು ಬಿಡಲಾಗಿದೆ. ಹಳ್ಳದ ದಂಡೆಯ ಗ್ರಾಮಸ್ಥರು ಹಳ್ಳದಲ್ಲಿ ಇಳಿಯದಂತೆ ಸೂಚನೆ ನೀಡಲಾಗಿದೆ. ತಾಲೂಕಿನಲ್ಲಿ ಮಳೆಯಿಂದಾದ ನಷ್ಟದ ಬಗ್ಗೆ ವರದಿ ತರಿಸಿಕೊಳ್ಳಲಾಗುತ್ತಿದೆ. ಕವಿತಾ ಆರ್‌., ತಹಶೀಲ್ದಾರ್‌, ಮಸ್ಕಿ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

2-manvi

Manvi: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

1-reeee

Low BP ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾ*ವು!

18-

Sindhanur: ಗುಂಪುಗಳ ನಡುವೆ ಘರ್ಷಣೆ; ಓರ್ವ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.