‘ಟ್ವೆಂಟಿ ಒನ್‌ ಅವರ್’ ಚಿತ್ರ ವಿಮರ್ಶೆ: ನಿಗೂಢ ಇಪ್ಪತ್ತೂಂದು ಗಂಟೆ


Team Udayavani, May 22, 2022, 12:40 PM IST

twenty one hours kannada movie review

ಒಂದು ಅಪರಾಧ ನಡೆದರೆ, ಆ ಘಟನೆಗೆ ಸಂಬಂಧಪಟ್ಟ ವ್ಯಕ್ತಿಗಳಲ್ಲಿ ಪ್ರತಿಯೊಬ್ಬರದ್ದು ಒಂದೊಂದು ದೃಷ್ಟಿಕೋನವಿರುತ್ತದೆ. ಸತ್ಯ -ಸುಳ್ಳಿನ ನಡುವೆ ಇರುವ ವ್ಯತ್ಯಾಸ ಕೇವಲ ಒಂದು ಸಣ್ಣ ಎಳೆಯಷ್ಟೆ. ಕಣ್ಣೆದುರಿಗೆ ಇರುವುದು ಎಲ್ಲವೂ ಸತ್ಯವಲ್ಲ, ಹಾಗೇ ಕಾಣದೇ ಇರುವ ನಿಗೂಢತೆ ಸುಳ್ಳಲ್ಲ. ಈ ಕಳ್ಳ ಪೊಲೀಸ್‌ ಆಟದಲ್ಲಿ ನಿಜವಾದ ಅಪರಾಧಿ ಯಾರು? ಇಂತಹ ಒಂದು ಹುಡುಕಾಟದ ಕಥೆಯನ್ನು ಈ ವಾರ ತೆರೆಕಂಡ “ಟ್ವೆಂಟಿ ಒನ್‌ ಅವರ್’ ಚಿತ್ರ ಹೇಳ ಹೊರಟಿದೆ.

“ಟ್ವೆಂಟಿ ಒನ್‌ ಅವರ್’ ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಚಿತ್ರದಲ್ಲಿ ಕೇರಳ ಮೂಲದ ಹುಡುಗಿಯೊಬ್ಬಳು ಬೆಂಗಳೂರಿನಲ್ಲಿ ಕಾಣೆಯಾಗಿರುತ್ತಾಳೆ. ಆ ಕಾಣೆಯಾದ ಹುಡುಗಿಯನ್ನು ಸುರಕ್ಷಿತವಾಗಿ ಕರೆತರುವ ಜವಾಬ್ದಾರಿ ಅಂಡರ್‌ ಕವರ್‌ ಆಫೀಸರ್‌ ಶ್ರೀಕಾಂತ್‌ ರದ್ದು. ಆ ಮಲೆಯಾಳಿ ಹುಡುಗಿ ಹೇಗೆ ಕಾಣೆಯಾದಳು, ಎಲ್ಲಿದ್ದಾಳೆ, ಆಕೆ ಮತ್ತೆ ವಾಪಾಸ್‌ ಆಗುತ್ತಾಳಾ? ಅನ್ನೋದೆ “ಟ್ವೆಂಟಿ ಒನ್‌ ಅವರ್’ನ ಕಥೆ. ಈ ಪ್ರಶ್ನೆಗೆ ಉತ್ತರ ಸಿಗಬೇಕೆಂದರೆ ಸಿನಿಮಾ ನೋಡಲೇಬೇಕು.

ಈ ನಾಪತ್ತೆ ಪ್ರಕರಣ ಬೇಧಿಸುವ ಹಾದಿಯಲ್ಲಿ ಬರುವ ಸಾಕಷ್ಟು ಟ್ವಿಸ್ಟ್‌ ಆ್ಯಂಡ್‌ ಟರ್ನ್ಗಳು ಚಿತ್ರವನ್ನು ಇನ್ನಷ್ಟು ಕುತೂಹಲಕಾರಿಯನ್ನಾಗಿಸಿದೆ. ಕೇವಲ ಇಪ್ಪತ್ತೂಂದು ಗಂಟೆಗಳಲ್ಲಿ ನಡೆಯುವ ಘಟನೆ ಮೇಲೆ ಇಡೀ ಚಿತ್ರ ನಿಂತಿದೆ. ಚಿತ್ರದ ಮೊದಲಾರ್ಧ ಪಾತ್ರ ಪರಿಚಯ, ಹಿನ್ನೆಲೆ ಘಟನೆಗಳಿಂದಲೇ ಸಾಗುತ್ತದೆ. ಒಬ್ಬೊಬ್ಬರ ದೃಷ್ಟಿಕೋನದಿಂದ ಕಾಣುವ ಚಿತ್ರದ ಕಥೆಯ ನಿಜವಾದ ಅಂಶ ಹಾಗೂ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಎರಡನೇ ಭಾಗದಲ್ಲಿ ದೊರೆಯುತ್ತದೆ. ಚಿತ್ರದಲ್ಲಿನ ಡೈಲಾಗ್‌ ಗಳು ಡಾಲಿ ಅಭಿಮಾನಿಗಳಿಗೆ ಕಿಕ್ಕೇರಿಸುವಂತಿದೆ.

ಇದನ್ನೂ ಓದಿ:‘ಸಕುಟುಂಬ ಸಮೇತ’ ನೋಡುವ ಸಿನಿಮಾ!

ನಿರ್ದೇಶಕ ಜೈ ಶಂಕರ್‌ ಒಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸುವ ಪ್ರಯತ್ನದಲ್ಲಿ ತಕ್ಕಮಟ್ಟಿಗೆ ಯಶಸ್ವಿಯಾಗಿದ್ದಾರೆ. ಚಿತ್ರದಲ್ಲಿನ ಖಡಕ್‌ ತನಿಖಾಧಿಕಾರಿ ಪಾತ್ರದಲ್ಲಿ ಧನಂಜಯ್‌ ಕಾಣಿಸಿಕೊಂಡಿದ್ದು, ಮಾಸ್‌-ಕ್ಲಾಸ್‌ ಡೈಲಾಗ್‌ ಹಾಗೂ ತಮ್ಮ ವಿಭಿನ್ನ ಮ್ಯಾನರಿಸಂನಿಂದಲೇ ಮಿಂಚಿದ್ದಾರೆ. ಇನ್ನು ಉಳಿದಂತೆ ಸುದೇವ್‌ ನಾಯರ್‌, ರಾಹುಲ್‌ ಮಾಧವ್‌, ಪೂರ್ಣಚಂದ್ರ, ಅಪೂರ್ವ, ದಿನೇಶ್‌ ಬಾಬು ಪಾತ್ರಗಳು ಚಿತ್ರದ ಸಸ್ಪೆನ್ಸ್‌ ಆಯಾಮಕ್ಕೆ ಪೂರಕವಾಗಿದ್ದು, ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ವಾಣಿ ಭಟ್ಟ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.