ನಿಯಮ ಬಾಹಿರ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ

ವಾಣಿಜ್ಯ ಬಂದರು ವಿರೋಧಿ ಹೋರಾಟಗಾರರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

Team Udayavani, May 22, 2022, 2:17 PM IST

7

ಕಾರವಾರ: ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ, ಕಡಲಾಮೆಗಳು ಮೊಟ್ಟೆ ಇಡುವ ತಾಣಗಳಲ್ಲಿ ಒಂದಾದ ಕಾಸರಕೋಡ ಟೊಂಕದ ಕಡಲತೀರದಲ್ಲಿ ನಿಯಮ ಬಾಹಿರವಾಗಿ ಬಲವಂತದಿಂದ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಮೀನುಗಾರರ ಸಂಘಟನೆ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಕೊಚರೇಕರ ಆರೋಪಿಸಿದರು.

ಇಲ್ಲಿನ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ರಸ್ತೆ ಕೆಲಸ ನಡೆಸುತ್ತಿರುವುದನ್ನು ಪ್ರಶ್ನಿಸಿದ ಕಾಸರಕೋಡ ವಾಣಿಜ್ಯ ಬಂದರು ವಿರೋಧಿ ಹೋರಾಟಗಾರರ ಮೇಲೆ ಮತ್ತು ಸ್ಥಳೀಯರ ಮೇಲೆ ಹಲ್ಲೆಗೆ ಯತ್ನಿಸಿ ದಬ್ಟಾಳಿಕೆ ನಡೆಸುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ನಿಯಮಬಾಹಿರ ಕಾಮಗಾರಿ ನಡೆಸುವುದನ್ನು ತಡೆಹಿಡಿಯಬೇಕು. ಇಂತಹ ನಿಯಮ ಬಾಹಿರ ಕಾಮಗಾರಿಗೆ ಉತ್ತೇಜನ ನೀಡುವುದನ್ನು ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತ ಕೈಬಿಡಬಿಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಮತ್ತು ಜನಪ್ರತಿನಿಧಿಗಳು ನಮ್ಮ ಬೇಡಿಕೆಯನ್ನು ಈಡೇರಿಸಲಿಲ್ಲ ಎಂದು ವಿಷಾದಿಸಿದರು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ, ಉಚ್ಚ ನ್ಯಾಯಾಲಯದ ನಿರ್ದೇಶನಕ್ಕೆ ವಿರುದ್ಧವಾಗಿ ಸಿಆರ್‌ಝೆಡ್‌ ಮತ್ತು ಪರಿಸರ ಇಲಾಖೆಯ ಪರವಾನಗಿ ಪಡೆಯದೇ ಇಲ್ಲಿನ ಕಡಲತೀರದಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು, ಕೆಂಪು ಕಲ್ಲು, ಜಲ್ಲಿಕಲ್ಲನ್ನು, ಧೂಳು ಮಿಶ್ರಿತ ಜಲ್ಲಿ ಪುಡಿ ಸುರಿದು ಕಚ್ಚಾ ರಸ್ತೆ ದುರಸ್ತಿ ನೆಪದಲ್ಲಿ ಸುಮಾರು 4 ಕಿ.ಮೀ. ಉದ್ದದ ಪಕ್ಕಾರಸ್ತೆ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ರಸ್ತೆ ಮತ್ತು ರೈಲು ಮಾರ್ಗ ನಿರ್ಮಾಣಕ್ಕೆ ಸಿಆರ್‌ಝೆಡ್‌ ಪರಿಸರ ಮತ್ತು ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಪರವಾನಿಗೆ ದಿ ಹೊನ್ನಾವರ ಪೋರ್ಟ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯವರು ಅರ್ಜಿ ಸಲ್ಲಿಸಿದ್ದಾರೆ.

ಆದರೆ ಬಂದರು ನಿರ್ಮಾಣ ಕಂಪನಿಯ ಕೋರಿಕೆಗೆ ಸ್ಥಳೀಯರು ಲಿಖೀತ ಆಕ್ಷೇಪಣೆ ಸಲ್ಲಿಸಿದ್ದು ಸಿಆರ್‌ಝೆಡ್‌ ವ್ಯಾಪ್ತಿಯ ಕಡಲ ತೀರದಲ್ಲಿ ರಸ್ತೆ ನಿರ್ಮಿಸಲು ಬಂದರು ನಿರ್ಮಾಣ ಕಂಪನಿಗೆ ಈವರೆಗೆ ಯಾವುದೇ ಪರವಾನಗಿ ಸಿಕ್ಕಿರುವುದಿಲ್ಲ. ವಿವಾದಿತ ವಾಣಿಜ್ಯ ಬಂದರು ವಿಚಾರದಲ್ಲಿ ಉಚ್ಚ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಸ್ಥಳೀಯರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅಹವಾಲು ಸರ್ಕಾರದ ಮುಂದೆ ವಿಚಾರಣೆಗೆ ಬಾಕಿ ಇದೆ. ಹೀಗಿರುವಾಗ ವಾಣಿಜ್ಯ ಬಂದರು ನಿರ್ಮಾಣ ಕಂಪನಿಯವರ ಪ್ರಭಾವ ಮತ್ತು ಪ್ರಲೋಭನೆಗೆ ಒಳಗಾಗಿ ಗುತ್ತಿಗೆದಾರರು ಮತ್ತು ಕೆಲವು ಅಧಿಕಾರಿಗಳು ಸೇರಿ ಇಲ್ಲಿನ ಕಡಲತೀರದಲ್ಲಿ ಕಚ್ಚಾ ರಸ್ತೆ ಸುಧಾರಣೆ ಹೆಸರಿನಲ್ಲಿ ಉದ್ದೇಶಿತ ವಾಣಿಜ್ಯ ಬಂದರು ಯೋಜನಾ ಪ್ರದೇಶದವರೆಗೆ ಪಕ್ಕಾ ರಸ್ತೆ ನಿರ್ಮಿಸಲು ಹೊರಟಿರುವ ಕ್ರಮಕ್ಕೆ ಸ್ಥಳೀಯರ ತೀವ್ರ ವಿರೋಧವಿದ್ದು ಪ್ರತಿಭಟನೆ ನಡೆಸಲು ಸ್ಥಳೀಯ ಹೋರಾಟ ಸಮಿತಿ ಸನ್ನದ್ಧವಾಗಿದೆ ಎಂದರು.

ವಾಣಿಜ್ಯ ಬಂದರು ವಿರೋಧ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಜಿ. ತಾಂಡೇಲ, ರಾಷ್ಟ್ರೀಯ ಮೀನುಗಾರರ ಸಂಘಟನೆ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಕೊಚರೇಕರ, ಹಸಿಮೀನು ವ್ಯಾಪರಸ್ಥರ ಸಂಘದ ಅಧ್ಯಕ್ಷ ಗಣಪತಿ ಈಶ್ವರ ತಾಂಡೇಲ್‌, ಕಡಲ ವಿಜ್ಞಾನಿ ಡಾ| ಪ್ರಕಾಶ ಮೇಸ್ತ, ಮೀನುಗಾರರ ಕಾರ್ಮಿಕರ ಸಂಘದ ಕಾರ್ಯದರ್ಶಿ ಆರ್‌. ತಾಂಡೇಲ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.