ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ


Team Udayavani, May 24, 2022, 6:00 AM IST

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

2021-22ನೇ ಹಣಕಾಸು ವರ್ಷದಲ್ಲಿ ಕರ್ನಾಟಕ ವಿದೇಶಿ ನೇರ ಬಂಡ  ವಾಳ ಆಕರ್ಷಿಸುವಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಈ ಸಾಲಿನಲ್ಲಿ ಭಾರತ ದಾಖಲೆ ಪ್ರಮಾಣದಲ್ಲಿ ಅಂದರೆ 6.48 ಲ.ಕೋ.ರೂ. ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಿದ್ದು ಈ ಪೈಕಿ 83.57 ಶತಕೋಟಿ ಡಾಲರ್‌ಗಳಷ್ಟು ನೇರ ಬಂಡವಾಳ ಕರ್ನಾಟಕಕ್ಕೆ ಹರಿದುಬಂದಿದೆ. ಅಂದರೆ ದೇಶ ಆಕರ್ಷಿಸಿದ ಒಟ್ಟಾರೆ ಎಫ್ಡಿಐ ಈಕ್ವಿಟಿ ಒಳಹರಿವಿನಲ್ಲಿ ಶೇ.53ರಷ್ಟು ಪಾಲು ಕರ್ನಾಟಕದ್ದಾಗಿದೆ ಎಂದು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಅಷ್ಟು ಮಾತ್ರವಲ್ಲದೆ ಪ್ರಸಕ್ತ ಹಣಕಾಸು ವರ್ಷದಲ್ಲೂ ಎಫ್ಡಿಐ ಆಕರ್ಷಣೆಯಲ್ಲಿ ರಾಜ್ಯ ತನ್ನ ಮುನ್ನಡೆಯನ್ನು ಕಾಯ್ದುಕೊಳ್ಳುವಲ್ಲಿ ಸಫ‌ಲವಾಗಿದೆ.

ಈ ಆಶಾದಾಯಕ ವರದಿಯ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ದಾವೋಸ್‌ಗೆ ತಲುಪಿದ್ದು ವಿವಿಧ ಕಂಪೆನಿಗಳ ಮುಖ್ಯಸ್ಥರು ಮತ್ತು ಉದ್ಯಮಿಗಳ ಜತೆ ಮಾತುಕತೆ ಪ್ರಕ್ರಿಯೆ ಆರಂಭಿಸಿದ್ದಾರೆ. ಮೊದಲ ದಿನದಂದೇ ವಿವಿಧ ಕಂಪೆನಿಗಳೊಂದಿಗೆ ಕೋಟ್ಯಂತರ ರೂ. ಮೌಲ್ಯದ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಲುಲು ಗ್ರೂಪ್‌ ಇಂಟರ್‌ನ್ಯಾಶನಲ್‌ ರಾಜ್ಯದಲ್ಲಿ 2 ಸಾವಿರ ಕೋ. ರೂ.ಗಳ ಹೂಡಿಕೆ ಮಾಡಲು ಸಮ್ಮತಿಸಿದ್ದು ಒಪ್ಪಂದಕ್ಕೆ ಅಂಕಿತ ಹಾಕಿದೆ. ಈ ಮಹತ್ತರ ಒಪ್ಪಂದದ ಫ‌ಲವಾಗಿ ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧೆಡೆ ಲುಲು ಗ್ರೂಪ್‌ ಶಾಪಿಂಗ್‌ ಮಾಲ್‌, ಹೈಪರ್‌ ಮಾರ್ಕೆಟ್‌ ಮತ್ತು ರಫ್ತು ಆಧರಿತ ಆಹಾರ ಮಳಿಗೆಗಳನ್ನು ತೆರೆಯಲಿದೆ. ಇದರಿಂದಾಗಿ ರಾಜ್ಯದಲ್ಲಿ 10,000ಕ್ಕೂ ಅಧಿಕ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.

ಹಿಟಾಚಿ ಎನರ್ಜಿ 200 ಕೋ. ರೂ. ವೆಚ್ಚದಲ್ಲಿ ರಾಜ್ಯದ ಹಲವೆಡೆ ಇವಿ ಚಾರ್ಜಿಂಗ್‌ ಮೂಲ ಸೌಕರ್ಯಗಳನ್ನು ಸ್ಥಾಪಿಸಲು ಆಸಕ್ತಿ ತೋರಿದೆ. ಇನ್ನು ಆಹಾರ ಸಂಸ್ಕರಣ ವಲಯದಲ್ಲಿ ಜ್ಯೂಬಿಲಿಯಂಟ್‌ ಗ್ರೂಪ್‌ 700 ಕೋ. ರೂ. ಹೂಡಿಕೆ ಮಾಡಲಿದೆ. ಹೀರೋ ಮೋಟೋಕಾರ್ಪ್‌, ಸೀಮನ್ಸ್‌ ಸಂಸ್ಥೆಯ ಮುಖ್ಯಸ್ಥರೊಂದಿಗೂ ಮುಖ್ಯಮಂತ್ರಿಯವರು ಸಮಾಲೋಚನೆ ನಡೆಸಿದ್ದು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳು ಮತ್ತು ಸಾಧ್ಯತೆಗಳ ಕುರಿತಂತೆ ವಿವರಿಸಿದ್ದಾರೆ. ಈ ಕಂಪೆನಿಗಳೂ ಕೂಡ ರಾಜ್ಯದಲ್ಲಿ ಹೂಡಿಕೆ ಮಾಡಲು ಒಲವು ವ್ಯಕ್ತಪಡಿಸಿವೆ.

ರಾಜ್ಯಕ್ಕೆ ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಲು ರಾಜ್ಯ ಸರಕಾರ ನಡೆಸುತ್ತಿರುವ ಪ್ರಯತ್ನ ಮತ್ತು ಅದರ ಫ‌ಲಶ್ರುತಿ ರಾಜ್ಯದ ಪ್ರಗತಿಯ ದೃಷ್ಟಿಯಿಂದ ಧನಾತ್ಮಕ ಬೆಳವಣಿಗೆಯೇ. ಈಗ ಮಾಡಿಕೊಂಡಿರುವ ಒಪ್ಪಂದದ ಅನುಷ್ಠಾನಕ್ಕೂ ಸರಕಾರ ಅಷ್ಟೇ ಆಸಕ್ತಿ ತೋರಬೇಕು. ಒಪ್ಪಂದ ಕೇವಲ ಕಡತಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳುವಂತಾಗಲು ಈ ಕಂಪೆನಿಗಳಿಗೆ ರಾಜ್ಯದಲ್ಲಿ ಅಗತ್ಯ ಜಮೀನು, ನೀರು, ರಸ್ತೆ ಮತ್ತಿತರ ಮೂಲ ಸೌಕ ರ್ಯಗಳನ್ನು ಒದಗಿಸುವ ಹೊಣೆಗಾರಿಕೆ ರಾಜ್ಯ ಸರಕಾರದ್ದಾಗಿದೆ. ಬಂಡವಾಳ ಹೂಡಿಕೆಯಿಂದ ಆರ್ಥಿಕ ಪ್ರಗತಿಯ ಜತೆಜತೆಯಲ್ಲಿ ವಿದ್ಯಾವಂತ ಯುವಜನತೆಗೆ ಉದ್ಯೋಗಾವಕಾಶವೂ ಸೃಷ್ಟಿಯಾಗುವುದರಿಂದ ಇತ್ತ ಸರಕಾರ ಗಂಭೀರ ಲಕ್ಷ್ಯ ಹರಿಸಬೇಕು. ಇದೇ ವೇಳೆ ವಿದೇಶಿ ಕಂಪೆನಿಗಳು ಮತ್ತು ಉದ್ಯಮಿಗಳಿಗೆ ಮಣೆ ಹಾಕುವ ಭರದಲ್ಲಿ ದೇಶೀಯ ಮತ್ತು ಸ್ಥಳೀಯ ಕಂಪೆನಿಗಳು ಮತ್ತು ಉದ್ಯಮಿಗಳ ಬೆಳವಣಿಗೆಗೆ ಅಡ್ಡಿಯಾಗ ದಂತೆ ಎಚ್ಚರವಹಿಸಬೇಕು. ಹಾಗಾದಾಗ ಮಾತ್ರ ರಾಜ್ಯ ಸರಕಾರದ ಈ ಎಲ್ಲ ಪ್ರಯತ್ನಗಳು ನಿರೀಕ್ಷಿತ ಫ‌ಲಿತಾಂಶವನ್ನು ನೀಡಲು ಸಾಧ್ಯ.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಔಷಧಗಳ ಗುಣಮಟ್ಟ ಕಠಿನ ಮಾರ್ಗಸೂಚಿ ಅಗತ್ಯ

ಔಷಧಗಳ ಗುಣಮಟ್ಟ ಕಠಿನ ಮಾರ್ಗಸೂಚಿ ಅಗತ್ಯ

et the state government encourage the strengthening of panchayats

Editorial; ಪಂಚಾಯತ್‌ಗಳ ಬಲವರ್ಧನೆಗೆ ರಾಜ್ಯ ಸರಕಾರ ಚಿತ್ತ ಹರಿಸಲಿ

ARMY (2)

Kashmir ಚುನಾವಣೆ,ರಾಜ್ಯ ಸ್ಥಾನಮಾನ: ಕೇಂದ್ರದ ದಿಟ್ಟ ನಡೆ

27

ತ.ನಾಡು ಕಳ್ಳಭಟ್ಟಿ ದುರಂತ: ಸರಕಾರದ ಘೋರ ವೈಫ‌ಲ್ಯ

Recruitment of Marathi teachers: Government should intervene

Editorial; ಮರಾಠಿ ಶಿಕ್ಷಕರ ನೇಮಕ: ಸರಕಾರ ಮಧ್ಯಪ್ರವೇಶಿಸಲಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.