ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಪಠ್ಯಪುಸ್ತಕ ವಿವಾದಕ್ಕೆ ಸರಕಾರ ಸ್ಪಷ್ಟನೆ

Team Udayavani, May 24, 2022, 5:50 AM IST

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಬೆಂಗಳೂರು: ದೇಶದ ಇತಿಹಾಸ, ಸಂಸ್ಕೃತಿ, ಆಚಾರ-ವಿಚಾರಗಳು, ರಾಷ್ಟ್ರೀಯತೆ, ದೇಶಕ್ಕಾಗಿ ಹೋರಾಡಿದ ನಿಜವಾದ ಹೀರೋಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿದೆ. ದೇಶದ ಇತಿಹಾಸಗಳನ್ನು ಅರ್ಧಂಬರ್ಧ ತಿಳಿಸಿದ್ದ ವಿಷಯಗಳನ್ನು ಹಾಗೂ ಬೇರೆ ಧರ್ಮಗಳನ್ನು ಹೇರುವ ಪ್ರಯತ್ನ ಮಾಡಿರುವಂತಹ ಪಠ್ಯಗಳನ್ನು ಕೈಬಿಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸ್ಪಷ್ಟಪಡಿಸಿದ್ದಾರೆ.

ಪಠ್ಯಪುಸ್ತಕ ವಿವಾದ ಕುರಿತು ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಇತಿಹಾಸ ತಿರುಚಿಲ್ಲ, ಬದಲಿಗೆ ಕಾಂಗ್ರೆಸ್‌ನವರು ತಿರುಚಿ ದ್ದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಹೊಸ ತಲೆಮಾರಿನ ಮಕ್ಕಳಿಗೆ ಶಾಲೆಯಲ್ಲಿ ನಿಜವಾದ ಇತಿಹಾಸ ತಿಳಿಸುವ ಪ್ರಯತ್ನ ಮಾಡಲಾಗಿದೆ’ ಎಂದರು.

ಆರೆಸ್ಸೆಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೆವಾರ್ , ಚಕ್ರವರ್ತಿ ಸೂಲಿಬೆಲೆ ಅವರು ಕ್ರಾಂತಿಕಾರರ ಬಗ್ಗೆ ಬರೆದಿರುವ “ತಾಯಿ ಭಾರತಿಯ ಅಮರ ಪುತ್ರರು’ ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ. ಪಠ್ಯದಲ್ಲಿದ್ದ ಹಿಂದೂ, ಮಾತೃಭೂಮಿ, ತಾಯಿನಾಡು ಎಂಬ ವಿಷಯಗಳನ್ನು ಕಿತ್ತುಹಾಕುವ ಪ್ರಯತ್ನವನ್ನು ಹಿಂದೆ ಮಾಡಲಾಗಿತ್ತು. ಈ ಮೂಲಕ ಜನರಿಗೆ ದೇಶದ ಬಗ್ಗೆ ವಿಶ್ವಾಸ ಬಾರದಂತೆ ಪಠ್ಯದಲ್ಲಿ ವಿಷಯಗಳನ್ನು ಸೇರಿಸಲಾಗಿತ್ತು. ಉದಾಹರಣೆಗೆ ಕಯ್ನಾರ ಕಿಂಞಣ್ಣ ರೈಗಳು ಬರೆದಿದ್ದ “ಹಾರುತಿರುವುದು ಏರುತಿರುವುದು ದೇಶದ ಬಾವುಟ’ ಎಂಬ ಪಠ್ಯ ತೆಗೆಯಲಾಗಿತ್ತು ಎಂದರು.

ರಾವಣ ಸಂಸ್ಕೃತಿ ಬೆಳೆಸಬೇಕಾ?
ದೇಶದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದಲ್ಲಿ ರಾಮ-ರಾವಣ ಸಂಸ್ಕೃತಿ ಇಲ್ಲ. ಮೊದಲಿನಿಂದಲೂ ರಾಮರಾಜ್ಯವಾಗಬೇಕು ಎಂಬ ಸಂಸ್ಕೃತಿ ಇದೆ. ರಾಮ ಆದರ್ಶಪುರುಷನೆಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ಆದರೆ ರಾಮನ ಫೋಟೋಗೆ ಚಪ್ಪಲಿಯಲ್ಲಿ ಹೊಡೆದು ವಿರೋಧಿಯನ್ನಾಗಿ ಮಾಡಿ, ರಾವಣನ ಫೋಟೋಗೆ ಹಾರ ಹಾಕುವ ವಿಚಾರಗಳನ್ನು ನಮ್ಮ ಮಕ್ಕಳಿಗೆ ಓದಿಸಬೇಕಾ ಎಂದು ಪ್ರಶ್ನಿಸಿದರು.

ವೋಟ್‌ ಬ್ಯಾಂಕ್‌ಗಾಗಿ ಟಿಪ್ಪು ಬಳಕೆ
2014ರಲ್ಲಿ ಪರಿಷ್ಕರಣೆಯಾಗಿದ್ದ ಪಠ್ಯಪುಸ್ತಕವನ್ನು 2017ರಲ್ಲಿ ಹಿರಿಯ ಸಾಹಿತಿ ಪ್ರೊ| ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಮತ್ತೊಮ್ಮೆ ಪರಿಷ್ಕರಿಸಲಾಗಿತ್ತು. ಆಗ ಕೈಬಿಟ್ಟಿರುವ ವಿಚಾರಗಳ ಬಗ್ಗೆ ಯಾರೊಬ್ಬರು ಪ್ರಶ್ನಿಸಲಿಲ್ಲ. ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಮೈಸೂರು ರಾಜಮನೆತನದ ಒಡೆಯರ್‌ ಬಗ್ಗೆ 5 ಪುಟಗಳ ಪಾಠವನ್ನು ಕೇವಲ 4 ಸಾಲುಗಳಿಗೆ ಇಳಿಸಲಾಗಿತ್ತು. ಜತೆಗೆ ಟಿಪ್ಪು ಪಾಠ ಹೆಚ್ಚಿಸಿದ್ದು, ಇದು ವೋಟ್‌ ಬ್ಯಾಂಕ್‌ ರಾಜಕೀಯವಲ್ಲವೇ ಎಂದು ಸಚಿವರು ಪ್ರಶ್ನಿಸಿದರು.

ಟಿಪ್ಪು ಹೋರಾಟದ ಬಗ್ಗೆ ಮಾತ್ರ ತಿಳಿಸಿದ್ದ ಬರಗೂರು ಸಮಿತಿ ಆತ ಕೊಡಗು, ಕಾಸರಗೋಡಿನಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರಿಸುತ್ತಿದ್ದ ವಿಚಾರ ಹಾಗೂ ಮೈಸೂರು ಮಹಾರಾಜರನ್ನು ಜೈಲಿನಲ್ಲಿಟ್ಟು ಆಡಳಿತ ಮಾಡಿದ್ದನ್ನು ಮರೆಮಾಚಿತ್ತು. ನಾವು ಬರಗೂರು ಸಮಿತಿಯಲ್ಲಿ ಸೇರಿಸಿರುವ ಉತ್ತಮ ವಿಚಾರಗಳನ್ನು ಉಳಿಸಿಕೊಂಡಿದ್ದೇವೆ ಎಂದರು.

ನಾರಾಯಣ ಗುರು ಪಾಠವನ್ನು 10ನೇ ತರಗತಿಯ ಇತಿಹಾಸದಿಂದ ತೆಗೆದು ಕನ್ನಡದಲ್ಲಿ ಸೇರಿಸಲಾಗಿದೆ. ಭಗತ್‌ ಸಿಂಗ್‌ ಜತೆಗೆ ಕ್ರಾಂತಿಕಾರಿ ಹೋರಾಟಗಾರರಾಗಿದ್ದ ಚಂದ್ರಶೇಖರ್‌ ಆಜಾದ್‌, ರಾಜ್‌ಗುರು ಸುಖದೇವ್‌ ಪಠ್ಯವನ್ನು ಸೇರಿಸಲಾಗಿದೆ. ಕುವೆಂಪು ಪಠ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಅವಹೇಳನ ಮಾಡಿಲ್ಲ. ಟಿಪ್ಪು ಬಗೆಗಿನ ವೈಭವೀ ಕರಣವನ್ನು ಕೈಬಿಡಲಾಗಿದೆ.
– ಬಿ.ಸಿ. ನಾಗೇಶ್‌,
ಶಿಕ್ಷಣ ಸಚಿವ

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.