ಮಾದರಿ ವ್ಯಕ್ತಿತ್ವ, ಶಿಸ್ತಿನ ಸಿಪಾಯಿ ಯಶೋವರ್ಮ ಸರ್ ಗೆ ನಮನ….


Team Udayavani, May 24, 2022, 11:29 AM IST

news 2 yashowarma

ಯಶೋವರ್ಮ ಎಂಬ ಹೆಸರಲ್ಲೇ ಯಶಸ್ಸನ್ನು ಸೂಚಿಸುವ ಇವರು ಇವರ ಯಶಸ್ಸಿನ ಜೊತೆ ಜೊತೆ ವಿದ್ಯಾರ್ಥಿಗಳ, ಉಪನ್ಯಾಸಕರ, ಹಾಗೂ ತನ್ನ ಜೊತೆಗಾರರ ಯಶಸ್ಸಿಗೂ ಕಾರಣಿಕರ್ತರಾದವರು. ಆದರೆ ಇಂದೇಕೋ ಅವರ ಬಗ್ಗೆ ಹೇಳಲು ಮನ ಅಳುಕುತ್ತಿದೆ  ಇದಕ್ಕೆ ಕಾರಣ ಇಂದು ಅವರು ನಮ್ಮನ್ನೆಲ್ಲ ಅಗಲಿರುವುದೇ.

ಎಸ್. ಡಿ. ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ, ಇದೀಗ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ  ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರ ವ್ಯಕ್ತಿತ್ವ ನಮಗೆಲ್ಲರಿಗೂ ಮಾದರಿ. ಮುಗ್ದ ಮನಸ್ಸು, ಮಗುವಿನಂತ ನಗು, ಉದರ ಮನೋಭಾವ, ಶಿಸ್ತಿನ ಸಿಪಾಯಿ ಹೀಗೆ ಜಗತ್ತಿನ ಎಲ್ಲಾ ಒಳ್ಳೆಯ ಗುಣಗಳನ್ನು ತನ್ನಲ್ಲಿ ರೂಢಿಸಿಕೊಂಡದ್ದ ವ್ಯಕ್ತಿ ಇವರು.

ಯಶೋವರ್ಮ ಸರ್ ಬಂದರು  ಎಂದರೆ ನಮಗೆ ಮನದೊಳಗೆ ಭಯ, ಸುತ್ತಲೂ ಮೌನ, ಎಲ್ಲರ ಕಣ್ಣು ಅವರನ್ನು ನೋಡಲು, ಅವರಿಗೆ ಕೈಯೆತ್ತಿ ನಮಸ್ಕರಿಸಲು ಕಾಯುತ್ತಿರುತ್ತದೆ. ಆಗಾಗ ಕಾಲೇಜಿನ ರೌಂಡಿಗ್ ಗೆ ಬರುವ ಇವರು ಯಾರಿಗೂ ಸೂಚನೆ ನೀಡದೆ ತರಗತಿಗೂ ಬರುತ್ತಿದ್ದರು. ತರಗತಿಗೆ ಬಂದರೆ ಹತ್ತಾರು ಪ್ರಶ್ನೆ ಕೇಳಿ ನಮ್ಮನೆ ಒಮ್ಮೆ ಗೊಂದಲಕ್ಕೆ ಸಿಲುಕಿಸಿ, ಕೊನೆಗೆ ನಮಗೆ ಧೈರ್ಯ ಹೇಳಿ ಹೋಗುತ್ತಿದ್ದರು.

ಒಮ್ಮೆ ನಾನು ಗ್ರಂಥಾಲಯದಲ್ಲಿ ಕುಳಿತು ಪುಸ್ತಕ ಓದುತ್ತಿರುವಾಗ ಒಮ್ಮೆಲ್ಲೇ ಹತ್ತಿರ ಬಂದು ನೀನು ಯಾವ ತರಗತಿ? ನಿನ್ನ ಊರು ಯಾವುದು? ನೀನು ಯಾವ ಕಾರಣಕ್ಕೆ ನಮ್ಮ ಕಾಲೇಜಿಗೆ ಬಂದೆ? ಹೀಗೆ ಒಂದರ ಹಿಂದೆ ಒಂದು ಬಾಣಗಳಂತೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದರು. ಅವರ ಆ ಗತ್ತು ಹಾಗೂ ಸದಾ ಮುಖದಲ್ಲಿ ಇರುವ ಮಂದಹಾಸ ನಮ್ಮಲ್ಲಿನ ಭಯವನ್ನು ದೂರಮಾಡಿ ನಮ್ಮವರ ಜೊತೆಗೆ ನಾವು ಮಾತನಾಡುತ್ತಿದ್ದೇವೆ ಎಂಬ ಭಾವನೆ ನಮ್ಮಲ್ಲಿ ಮೂಡಿಸಿತ್ತು.

ಅವರ ಗಟ್ಟಿತನ ಹಾಗೂ ಸಮಯಪ್ರಜ್ಞೆ ನಮ್ಮಲ್ಲಿ ನಾವು ರೂಡಿಸಿಕೊಳ್ಳಬೇಕಾದ ಮೊದಲ ಅಂಶವಾಗಿದೆ.  ಅವರಿಡುವ ಪ್ರತಿಯೊಂದು ಹೆಜ್ಜೆಯು ನಮಗೆ ಆದರ್ಶಪ್ರಾಯವಾದದ್ದು. ಶಿಕ್ಷಣ ಸಂಸ್ಥೆಯ ಜೊತೆ ಜೊತೆಗೆ ಅವರಿಗಿದ್ದ ಪರಿಸರ ಕಾಳಜಿ, ಪರಿಸರ ಪ್ರೀತಿ ನಮಗೆಲ್ಲ ಒಂದು ಒಳ್ಳೆಯ ಸಂದೇಶವಾಗಿತ್ತು. ತಮ್ಮ ಕೊನೆಯ ಉಸಿರು ಇರುವವರೆಗೂ ಶಿಕ್ಷಣ ಸಂಸ್ಥೆಯ ಬಗೆಗೆ ಹೊಂದಿದ್ದ ಒಲವು ನಮಗೆ ಜೀವನ  ಪಾಠವನ್ನು ಕಲಿಸಿದೆ.

ಯಶೋವರ್ಮ ಸರ್ ಪ್ರತಿ ಬಾರಿ ಸಿಕ್ಕಾಗವೂ, ಅವರ ಮಾತು, ಭಾಷಣ ಕೇಳಿದಾಗವೂ ಮನದ ಒಂದು ಮೂಲೆಯಲ್ಲಿ ಆದರೆ ಅವರ ತರ ಆಗಬೇಕು ಅನ್ನಿಸುತ್ತಿತ್ತು. ವಿದ್ಯಾರ್ಥಿಸ್ನೇಹಿ ಆಗಿದ್ದ ಅವರು ಎಲ್ಲಾ ವಿದ್ಯಾರ್ಥಿಗಳಿಗೂ ಮಾದರಿ ವ್ಯಕ್ತಿ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸದಾ ಶ್ರಮಿಸುತ್ತಿದ್ದ ಅವರು ನಮ್ಮನ್ನು ಅಗಲಿದ್ದು ನಮಗೆಲ್ಲ ತುಂಬಲಾರದ ನಷ್ಟವೇ ಸರಿ…

ಮಧುರ ಎಲ್ ಭಟ್ಟ

ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರ

ಟಾಪ್ ನ್ಯೂಸ್

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.