ಕೊರಟಗೆರೆ: ಕೆನರಾ ಬ್ಯಾಂಕಿನ ಸಿಸಿಟಿವಿಯೇ ಮಾಯ; ಕಳ್ಳತನಕ್ಕೆ ಯತ್ನ

ಬ್ಯಾಂಕಿನ ಆವರಣದಲ್ಲಿ ಕಸ ಕಡ್ಡಿಯಿಂದ ದುರ್ವಾಸನೆ

Team Udayavani, May 25, 2022, 2:47 PM IST

1-sdfff

ಕೊರಟಗೆರೆ: ಕೆನರಾ ಬ್ಯಾಂಕಿನ ಕಚೇರಿ ಮತ್ತು ಆವರಣದ ಸಿಸಿ ಟಿವಿಯೇ ಮಾಯವಾಗಿದ್ದು, ಬ್ಯಾಂಕಿನ ಕಟ್ಟಡಕ್ಕೆ ಕಾಂಪೌಂಡು ಮತ್ತು ಕಿಟಿಕಿಯೇ ಇಲ್ಲದಾಗಿದೆ.

ಎಟಿಎಂ ಕೇಂದ್ರಕ್ಕೆ ಕಾವಲುಗಾರನ ಭದ್ರತೆಯ ಜತೆ ಬಾಗಿಲು ಇಲ್ಲದಿರುವ ಪರಿಣಾಮ ರಾತ್ರೋರಾತ್ರಿ ಕಳ್ಳನೋರ್ವ ಎಟಿಎಂ ಕೇಂದ್ರದೊಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

ಬೈರೇನಹಳ್ಳಿ ಗ್ರಾಮದ ಕೆನರಾ ಬ್ಯಾಂಕಿನ ಕಟ್ಟಡವು ಶಿಥಿಲವಾಗಿದ್ದು, ಕೌಂಪೌಂಡು ಒಡೆದು ವರ್ಷಗಳು ಕಳೆದಿವೆ. ಬ್ಯಾಂಕಿನ ಕಿಟಕಿಗಳು ಮುರಿದು ಬಿದ್ದಿವೆ. ಇನ್ನೂ ಬ್ಯಾಂಕಿನ ಸುತ್ತಮುತ್ತ ಗಿಡಗಳು ಬೆಳೆದುನಿಂತಿವೆ. ಬ್ಯಾಂಕಿನ ಆವರಣದಲ್ಲಿ ಕಸ ಕಡ್ಡಿಯಿಂದ ದುರ್ವಾಸನೆ ಬೀರುತ್ತಿದ್ದರೂ ಸಹ ಗ್ರಾ. ಪಂ. ಮತ್ತು ಬ್ಯಾಂಕಿನ ಅಧಿಕಾರಿವರ್ಗ ಮೌನವಹಿಸಿವೆ.

ಕೆನರಾ ಬ್ಯಾಂಕಿನ ಆವರಣದಲ್ಲಿಯೇ ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರವಿದೆ. ಎಟಿಎಂ ಕೇಂದ್ರಕ್ಕೆ ಬಾಗಿಲು ಮತ್ತು ಭದ್ರತೆ ಎರಡು ಇಲ್ಲದಾಗಿದೆ. ಬ್ಯಾಂಕಿನ ಹೊರಗಡೆಯ ಸಿಸಿಟಿವಿ ಕೆಟ್ಟುಹೋಗಿದೆ. ಕಳ್ಳತರ ತಂಡವು ಇದನೆಲ್ಲ ನೋಡಿಯೇ ಬ್ಯಾಂಕಿನ ಹಿಂಬದಿಯಿಂದ ವಿದ್ಯುತ್ ಕೇಬಲ್ ಮತ್ತು ಸಿಸಿಟಿವಿಯನ್ನು ಒಡೆದು ಕಳ್ಳತನಕ್ಕೆ ಯತ್ನಿಸಿದ್ದಾರೆ.

ಬೈರೇನಹಳ್ಳಿ ಕೆನರಾ ಬ್ಯಾಂಕಿನ ವ್ಯವಸ್ಥಾಪಕ ಮಂಜುನಾಥ ಮಾತನಾಡಿ, ಎಟಿಎಂ ಜವಾಬ್ದಾರಿ ಎಪ್‌ಎಸ್‌ಎಸ್ ಕಂಪನಿಗೆ ನೀಡಲಾಗಿದೆ. ಏನೇ ಸಮಸ್ಯೆ ಆದರೂ ಅದಕ್ಕೆ ಅವರೇ ಹೋಣೆ. ಬಾಗಿಲು ಮತ್ತು ಕಾವಲುಗಾರ ಇಲ್ಲದೇ ಸಮಸ್ಯೆ ಸೃಷ್ಟಿಯಾಗಿದೆ. ನಮ್ಮ ಬ್ಯಾಂಕಿನ ಕೌಂಪೌಂಡು ಮತ್ತು ಕಿಟಿಕಿ ರಿಪೇರಿಯ ಬಗ್ಗೆ ಕಟ್ಟಡದ ಮಾಲೀಕರಿಗೆ ತಿಳಿಸಿದ್ದೇನೆ. ಬ್ಯಾಂಕಿನ ಹೊರಗಡೆಯ ಸಿಸಿಟಿವಿ ಕ್ಯಾಮರಾ ವನ್ನು ತಕ್ಷಣ ಸರಿಪಡಿಸುತ್ತೇವೆ ಎಂದು ಹೇಳಿದರು.

ಸ್ಥಳಕ್ಕೆ ಕೊರಟಗೆರೆ ಪಿಎಸೈ ನಾಗರಾಜು, ಮಂಜುಳ, ಎಎಸೈ ಗೋವಿಂದನಾಯ್ಕ ನೇತೃತ್ವದ ಪೊಲೀಸರ ತಂಡ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲನೆ ನಡೆಸಿದ್ದಾರೆ. ನಂತರ ತುಮಕೂರು ಜಿಲ್ಲೆಯ ಶ್ವಾನದಳದ ತಂಡ ಭೇಟಿ ನೀಡಿದೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.