ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T

ವಾಣಿಜ್ಯ ಕ್ಷೇತ್ರದಲ್ಲಿ ಅವಕಾಶವಿರುವ ಅಗತ್ಯ ವೃತ್ತಿ ಮಾರ್ಗದರ್ಶನವನ್ನು ಕೊಡಲಾಗುತ್ತದೆ.

Team Udayavani, May 27, 2022, 12:14 PM IST

tat news

ಉಡುಪಿ: 2022 ರಲ್ಲಿ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ TAT ಪರೀಕ್ಷೆ  ಜೂನ್  6 ರಂದು ನಡೆಯಲಿದೆ. ಇದನ್ನು ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಾಣಿಜ್ಯ, ವಿಜ್ಞಾನ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳೆಲ್ಲಾ ಬರೆಯಬಹುದು . ಸಾಮಾನ್ಯ ಜ್ಞಾನದ ಜೊತೆಗೆ ವಾಣಿಜ್ಯ ವಿಷಯಗಳ ಅರಿವನ್ನು ಪರೀಕ್ಷಿಸುವುದರೊಂದಿಗೆ ವಿದ್ಯಾರ್ಥಿಗಳ ಸಾಮರ್ಥ್ಯ, ಬುದ್ಧಿವಂತಿಕೆಯನ್ನು ಅರಿಯಲು ಈ ಪರೀಕ್ಷೆ ಸಹಕಾರಿಯಾಗಲಿದೆ. ಪರೀಕ್ಷೆಯು ನೂರು ಅಂಕಗಳನ್ನು ಹೊಂದಿದ್ದು, ಬಹುಆಯ್ಕೆಯ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಎಂಬಿಎ ಪ್ರವೇಶ ಪರೀಕ್ಷೆ, ಐ.ಎ.ಎಸ್, ಸಿ.ಎ., ಸಿ.ಎಸ್, ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು TAT (ತ್ರಿಶಾ ಅಡ್ಮಿಷನ್ ಟೆಸ್ಟ್) ಸಹಕಾರಿಯಾಗಲಿದೆ.

ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ  ತ್ರಿಶಾ ಸಂಸ್ಥೆಯು ವಿದ್ಯಾರ್ಥಿ ವೇತನ ನೀಡಲಿದೆ ಹಾಗೂ ಪರೀಕ್ಷೆ ಬರೆದ ಅಷ್ಟೂ ವಿಧ್ಯಾರ್ಥಿಗಳಿಗೆ ಪೋಷಕರ ಸಮ್ಮುಖದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಅವಕಾಶವಿರುವ ಅಗತ್ಯ ವೃತ್ತಿ ಮಾರ್ಗದರ್ಶನವನ್ನು ಕೊಡಲಾಗುತ್ತದೆ.  ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಾದ ಕೌಶಲಗಳ ಕಲಿಕೆಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಮಾರ್ಗದರ್ಶನ ಮಾಡಲಾಗುತ್ತದೆ.

ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ ಹಾಗೂ ತ್ರಿಶಾ ಕಾಲೇಜು ಮಂಗಳೂರಿನ ಕ್ಯಾಂಪಸ್ ಗಳಲ್ಲಿ ಜೂನ್ 6, ಸೋಮವಾರದಂದು ಬೆಳಗ್ಗೆ 9.30 ಇಂದ ಮದ್ಯಾಹ್ನ 12 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷೆಯು ಒಟ್ಟು 100 ಅಂಕಗಳನ್ನು ಹೊಂದಿದ್ದು ಆಪ್ಟಿಟ್ಯೂಡ್ ಮಾದರಿಯ ಪ್ರಶ್ನೆಗಳಿರುತ್ತವೆ. ಜೊತೆಗೆ ಸರಳ ಗಣಿತ, ರೀಸನಿಂಗ್, ಇಂಗ್ಲೀಷ್,  ಅಕೌಂಟ್ಸ್ ಹಾಗೂ ಬ್ಯುಸಿನೆಸ್ ಸ್ಟಡಿಗೆ ಸಂಬಂಧಿಸಿದ ಆಯ್ಕೆ ಆಧಾರಿತ ಪ್ರಶ್ನೆಗಳಿರುತ್ತವೆ.

ಪಿಯುಸಿ ಪರೀಕ್ಷೆ ಬರೆದ  ವಿದ್ಯಾರ್ಥಿಗಳ ಪಾಲಿಗೆ ಉಜ್ವಲ ಭವಿಷ್ಯಕ್ಕೆ ಈ ಪರೀಕ್ಷೆ ಬುನಾದಿಯಾಗಲಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಉತ್ತಮ ಉದ್ಯೋಗಾವಕಾಶಗಳನ್ನು ಹೊಂದಬೇಕೆಂಬುದು ತ್ರಿಶಾ ಸಂಸ್ಥೆಯ ಉದ್ದೇಶವಾಗಿದೆ. ಈಗಾಗಲೇ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಈ ಸಂಸ್ಥೆಯು ನಡೆಸುವ ಪ್ರವೇಶ ಪರೀಕ್ಷೆಗೆ ಹೆಚ್ಚನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಈ ಮೇಲೆ ತಿಳಿಸಿದ ತ್ರಿಶಾ ಕಾಲೇಜುಗಳಲ್ಲಿ TAT ಕುರಿತ ಮಾಹಿತಿ ಕೈಪಿಡಿ ದೊರೆಯಲಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಸಂಪರ್ಕಿಸಬಹುದು. TAT ಪರೀಕ್ಷೆಗೆ ನೋಂದಾಯಿಸಲು ಈ ಲಿಂಕ್ https://tinyurl.com/TATexam ಬಳಸಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.