ಮಳೆ ಬಂದರೆ ಶಾಂತಮ್ಮ ಲೇಔಟ್‌ ಮಂದಿಗೆ ಭೀತಿಯೋ ಭೀತಿ!

ರಾಜಕಾಲುವೆ ಉಕ್ಕಿ ಹರಿದು ಬಡಾವಣೆಗೆ ನುಗ್ಗುವ ನೀರು

Team Udayavani, May 27, 2022, 2:29 PM IST

layout1

ಶಿವಮೊಗ್ಗ: ನಗರದ ಪ್ರತಿಷ್ಠಿತ ಬಡಾವಣೆಯಾಗಿದ್ದ ಶಾಂತಮ್ಮ ಲೇಔಟ್‌ ಈಗ ತುಂಗ ಮತ್ತು ಭದ್ರಾ ಕಾಲುವೆಗಳ ಸಂಗಮ ತಾಣವಾಗಿದೆ. ಒತ್ತುವರಿ, ಅವೈಜ್ಞಾನಿಕ ಕಾಮಗಾರಿಗಳಿಂದ ಸಣ್ಣ ಮಳೆ ಬಂದರೂ ರಾಜಕಾಲುವೆ ಉಕ್ಕಿ ಹರಿದು ಇಡೀ ಲೇಔಟ್‌ಗೆ ನೀರು ಆವರಿಸಿಕೊಳ್ಳುತ್ತದೆ. ಈ ಕುರಿತು ‘ಉದಯವಾಣಿ ‘ ನಡೆಸಿದ ಸಾಕ್ಷಾತ್‌ ವರದಿ ಇಲ್ಲಿದೆ.

ಹೊಳೆಹೊನ್ನೂರು ರಸ್ತೆಯಲ್ಲಿರುವ ಈ ಬಡಾವಣೆ ತುಂಗಾ ನದಿಗೆ ಹೊಂದಿಕೊಂಡಂತೆ ಇದೆ. 2019 ರವರೆಗೂ ಈ ಬಡಾವಣೆಗೆ ನೀರು ನುಗ್ಗಿದ್ದು ಕಂಡಿಲ್ಲ. 2019ರ ಆಗಸ್ಟ್‌ನಲ್ಲಿ ಸುರಿದ ಭೀಕರ ಮಳೆ, ತುಂಗಾ ನದಿ ಪ್ರವಾಹದಿಂದ ನೂರಾರು ಮನೆಗಳು ಜಲಾವೃತಗೊಂಡಿದ್ದವು. ತುಂಗೆಯಲ್ಲಿ 80 ಲಕ್ಷ ಕ್ಯೂಸೆಕ್‌ ನೀರು ಹೊರಬಿಟ್ಟರೆ ಈ ಬಡಾವಣೆಗೆ ನೆರೆ ಆವರಿಸುತ್ತದೆ. ತುಂಗೆ ಉಕ್ಕಿ ಹರಿದಾಗ ಮಾತ್ರ ನೀರು ನುಗ್ಗುತ್ತದೆ ಎಂಬ ಮಾತನ್ನು ಮೊನ್ನೆ ಸುರಿದ ಮಳೆ ಸುಳ್ಳಾಗಿಸಿದೆ. ಅದಕ್ಕೆ ಕಾರಣ 2018ರ ನಂತರ ನಡೆದ ಕಾಲುವೆ ಕಾಮಗಾರಿ.

 10 ಅಡಿಗೆ ಇಳಿದ ಕಾಲುವೆ

ಶಿವಮೊಗ್ಗದ ವಿದ್ಯಾನಗರ ಮೂಲಕ ಹಾದುಹೋಗುವ ತುಂಗಾ ಕಾಲುವೆ ಪುರಲೆ ಕೆರೆಗೆ ತಲುಪುತ್ತದೆ. ಅಲ್ಲಿಂದ ಅದು ಭರ್ತಿಯಾಗಿ ತುಂಗಾ ನದಿ ಸೇರುತ್ತದೆ. ಈ ಕಾಲುವೆಯು ಮೊದಲು 30 ಅಡಿಗೂ ಅಧಿ ಕ ಅಗಲವಿತ್ತು. ಎಷ್ಟೇ ನೀರು ಹರಿದುಬಂದರೂ ಸರಾಗವಾಗಿ ಹರಿದು ಹೋಗುತ್ತಿತ್ತು. 2018-19ರಲ್ಲಿ ಈ ಕಾಲುವೆಗೆ ಸಿಮೆಂಟ್‌ ತಡೆಗೋಡೆ ಮಾಡಲಾಗಿದೆ. ಅಗಲವನ್ನು 10 ಅಡಿಗೆ ಇಳಿಸಲಾಗಿದ್ದು ನೀರು ರಭಸವಾಗಿ ಹರಿದುಹೋಗದಂತೆ ಮಾಡಲಾಗಿದೆ. ಈ ಕಾಲುವೆಯಲ್ಲಿ ಎಲ್ಲ ಕಾಲದಲ್ಲೂ ಒಂದೆರೆಡು ಅಡಿ ನೀರು ಇರಲೇಬೇಕು. ಅದಕ್ಕಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಥಳೀಯರಿಗೆ ಸಬೂಬು ಹೇಳಿದ್ದಾರೆ. ವಿದ್ಯಾನಗರದಿಂದ ಪುರಲೆ ಕೆರೆ ತಲುಪುವ ಈ ಕಾಲುವೆ ನಾಲ್ಕು ಕಿ.ಮೀ ಉದ್ದ ಇದ್ದು ಈ ಕಾಲುವೆಗೆ ಹರಿಗೆ ಕೆರೆಯ ಮೂರು ಕಾಲುವೆಗಳು ಬಂದು ಸೇರುತ್ತವೆ.

ಭದ್ರಾ ನೀರು ಸೇರ್ಪಡೆ

ಇನ್ನು ತುಂಗಾ ನದಿಗೆ ಭದ್ರಾ ಕಾಲುವೆ ನೀರು ಹರಿಗೆ ಕೆರೆ ತುಂಬಿ ಕೋಡಿ ಬಿದ್ದು ಪುರಲೆ ಬಳಿ ಸೇರುತ್ತದೆ. ಹರಿಗೆ ಕೆರೆ ಒಟ್ಟು ಮೂರು ಕಾಲುವೆಗಳಿದ್ದು ಒಂದು ಪುರಲೆ ಕೆರೆಗೆ, ಇನ್ನೊಂದು ಖಾಸಗಿ ಲೇಔಟ್‌ ಮೂಲಕ ತುಂಗಾ ಕಾಲುವೆಗೆ, ಇನ್ನೊಂದು ತೋಟ, ಗದ್ದೆಗಳ ಮೂಲಕ ತುಂಗಾ ಕಾಲುವೆ ಸೇರುತ್ತದೆ. ಭದ್ರಾದಿಂದ ಬರುವ ಎಲ್ಲ ನೀರು ತುಂಗಾ ಕಾಲುವೆ ಮೂಲಕವೇ ಪುರಲೆ ಕೆರೆ ಸೇರಿ ಅಲ್ಲಿಂದ ನದಿಗೆ ಹೋಗುತ್ತದೆ. ಮೂರು ಕಾಲುವೆಗಳ ಪೈಕಿ ಎರಡು ಕಾಲುವೆಗಳು ಒತ್ತುವರಿಯಾಗಿ ಕಿರಿದಾಗಿದೆ. ಲೇಔಟ್‌ದಾರರು, ಅಕ್ರಮ ಚಟುವಟಿಕೆಗಳಿಂದ ಕಾಲುವೆ ಕಿರಿದಾಗಿದೆ. ಮೂರನೇ ಕಾಲುವೆ ಮೂಲಕ ಭಾರೀ ಪ್ರಮಾಣದಲ್ಲಿ ತುಂಗಾ ಕಾಲುವೆಗೆ ಸೇರುವ ನೀರು ಮುಂದೆ ಹರಿಯಲು ಆಗದೆ ಕಾಲುವೆ ಮುಂದೆ ಉಕ್ಕಿ ಶಾಂತಮ್ಮ ಲೇಔಟ್‌ ಮೂಲಕ ಹೋಗುವ ಎರೆ ಕಾಲುವೆಗೆ ಸೇರುತ್ತದೆ. ಈ ಎರೆ ಕಾಲುವೆ ಸಹ ಕಿರಿದಾಗಿದ್ದು ನೀರು ಉಕ್ಕಿ ಬಡಾವಣೆಗೆ ನುಗ್ಗುತ್ತದೆ.

ಕಾಲುವೆ ಅಗಲ ಮಾಡಿ

ಕಾಂಕ್ರೀಟ್‌ ವಾಲ್‌ ನಿರ್ಮಿಸುವ ಮೊದಲು ಕಾಲುವೆ 25 ರಿಂದ 30 ಅಡಿ ಅಗಲವಿತ್ತು. ಎಂತಹ ದೊಡ್ಡ ಮಳೆಯಾದರೂ ಸೇತುವೆ ಹಂತದವರೆಗೂ ನೀರು ಬರುತ್ತಿತ್ತು. ಈಗ ಕಾಲುವೆ ಅಗಲ 10ಅಡಿಗೆ ಇಳಿಸಲಾಗಿದೆ. ಇದರಿಂದ ನೀರು ಮುಂದೆ ಹರಿಯಲಾಗದೆ ಉಕ್ಕಿ ಶಾಂತಮ್ಮ ಲೇಔಟ್‌ ಮೂಲಕ ಹೋಗುವ ಕಾಲುವೆಗೆ ಹೋಗುತ್ತಿದೆ. ಕಾಂಕ್ರೀಟ್‌ ವಾಲ್‌ಗ‌ಳನ್ನು ಕಿತ್ತು ನೀರು ಸರಾಗವಾಗಿ ಹರಿಯುವಂತೆ ಮಾಡದಿದ್ದರೆ ವಿದ್ಯಾನಗರ, ಶಾಂತಮ್ಮ ಲೇಔಟ್‌ನ ನೂರಾರು ಮನೆಗಳು ಮುಳುಗುತ್ತವೆ. ಈ ಬಗ್ಗೆ ಶಾಸಕರಿಗೆ ಅನೇಕ ಬಾರಿ ಸ್ಥಳಕ್ಕೆ ಕರೆದು ತಿಳಿಹೇಳಿದ್ದೇವೆ. ಮಳೆಗಾಲಕ್ಕೂ ಮುನ್ನ ಕ್ರಮಕೈಗೊಳ್ಳದಿದ್ದರೆ ಈ ವರ್ಷ ಇನ್ನೆಷ್ಟು ಬಾರಿ ನೀರು ನುಗ್ಗುತ್ತದೆ ಗೊತ್ತಿಲ್ಲ ಎನ್ನುತ್ತಾರೆ ವಾರ್ಡ್‌ ಕಾರ್ಪೋರೇಟರ್‌ ಹಾಗೂ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.