ನಾಮಫಲಕದ ಗಡುವು 6 ತಿಂಗಳು ವಿಸ್ತರಿಸಲು ಮನವಿ: ಶಿವಾನಂದ ಶೆಟ್ಟಿ


Team Udayavani, May 28, 2022, 11:55 AM IST

ನಾಮಫಲಕದ ಗಡುವು 6 ತಿಂಗಳು ವಿಸ್ತರಿಸಲು ಮನವಿ: ಶಿವಾನಂದ ಶೆಟ್ಟಿ

ಮುಂಬಯಿ: ಹೊಟೇಲ್‌ಗ‌ಳ ನಾಮ ಫಲಕವನ್ನು ಮರಾಠಿ ಭಾಷೆಯಲ್ಲಿ ಬರೆಯಲು ಸರಕಾರ ಆದೇಶಿಸಿದ್ದು, ಅದರ ಗಡುವನ್ನು ಆರು ತಿಂಗಳ ಕಾಲ ವಿಸ್ತರಿಸಲು ಆಹಾರ್‌ ಸರಕಾರಕ್ಕೆ ಹಾಗೂ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಎಂದು ಆಹಾರ್‌ನ ಅಧ್ಯಕ್ಷ ಶಿವಾನಂದ ಶೆಟ್ಟಿ ಅವರು ತಿಳಿಸಿದ್ದಾರೆ.

ಮೇ 24ರಂದು ಸಂಜೆ 6ಕ್ಕೆ ನಾನಾ ಚೌಕ್‌ನಲ್ಲಿರುವ ಕೃಷ್ಣ ಪ್ಯಾಲೇಸ್‌ ರೆಸಿಡೆನ್ಸಿಯ ಸಭಾಗೃಹದಲ್ಲಿ ಆಹಾರ್‌ ವಲಯ-3ರ ಪ್ರಾಯೋಜಕತ್ವದಲ್ಲಿ ನಡೆದ ನಾಲ್ಕನೇ ಮಾಸಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಧ್ಯ ಪೂರೈಕೆ ಮಾಡುವ ಹೊಟೇಲ್‌ಗ‌ಳ ದೇವರ ಹೆಸರನ್ನು ಬದಲಾಯಿಸಲು ಅಬಕಾರಿ ವಿಭಾಗ ಸುತ್ತೋಲೆಯನ್ನು ಹೊರಡಿಸಿದ್ದು, ಅದು ಕೇವಲ ನೂತನ ಹೊಟೇಲ್‌ಗ‌ಳಿಗೆ ಅನ್ವಯಿಸಬೇಕು. ಪ್ರಸ್ತುತ ಇರುವ ಹೆಸರನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಸರಕಾರಕ್ಕೆ ಮನವಿಯನ್ನು ಮಾಡಲಾಗಿದೆ. ಆಹಾರ್‌ನ ಸದಸ್ಯರಲ್ಲಿ ಕ್ರೀಡಾ ಮನೋಭಾವನೆಯನ್ನು ಮೂಡಿಸಲು ಎಪ್ರಿಲ್‌ 28ರಂದು ವಸಂತ್‌ ದಾದಾ ಪಾಟೀಲ್‌ ಕ್ರೀಡಾಂಗಣದಲ್ಲಿ ಆಹಾರ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟವನ್ನು ಯಶಸ್ವಿಯಾಗಿ ನಡೆದಿದ್ದು, ಉತ್ತಮ ಸ್ಪಂದನೆ ಲಭಿಸಿದೆ. ಇದರ ಯಶಸ್ಸಿಗೆ ಕಾರಣಕರ್ತರಾದ ಸರ್ವರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಪಾಲ್ಗೊಂಡ ಎಲ್ಲ ಕ್ರೀಡಾಳುಗಳನ್ನು ಅಭಿನಂದಿಸಿದರು.

ನಾಮಫಲಕದ ಗಡುವು ವಿಸ್ತರಣೆಗಾಗಿ ಆಹಾರ್‌ ರಾಜ್ಯ ಸರಕಾರ ಮತ್ತು ಮಹಾನಗರ ಪಾಲಿಕೆಯ ಸಂಬಂಧಿತ ಇಲಾಖೆಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿದ್ದು, ನಮ್ಮ ಮನವಿಗೆ ಪೂರಕವಾಗಿ ಸ್ಪಂದನೆ ಲಭಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ ಆಹಾರ್‌ನ ಅಧ್ಯಕ್ಷ ಶಿವಾನಂದ ಶೆಟ್ಟಿ ಅವರು, ಇತ್ತೀಚೆಗೆ ಜರಗಿದ ಥಾಮಸ್‌ ಕಪ್‌ ಡಬಲ್ಸ್‌ನ್ನು ಗೆದ್ದ ಆಹಾರ್‌ನ ಸದಸ್ಯ ಚಂದ್ರಶೇಖರ್‌ ಶೆಟ್ಟಿ ಅವರ ಪುತ್ರ ಚಿರಾಗ್‌ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಎಗ್ರಿಗೇಶನ್‌ ವಿರುದ್ಧ ಆಹಾರ್‌ ರಿಟ್‌ಫೈಲ್‌ ಮಾಡಿದ್ದು, ಅದನ್ನು ಆದಷ್ಟು ಬೇಗ ವಿಚಾರಣೆಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದರು.

ಆಹಾರ್‌ನ ಸದಸ್ಯ ಹೊಟೇಲಿಗರಿಗೆ ಮಾನ್ಸೂನ್‌ ಶೆಡ್‌ ನಿರ್ಮಿಸಲಿಕ್ಕಿದ್ದಲ್ಲಿ ಕೂಡಲೇ ಮಹಾನಗರ ಪಾಲಿಕೆಯ ವಿವಿಧ ವಾರ್ಡ್‌ನ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ನೀಡಿದ ಅಧ್ಯಕ್ಷರು, ಪ್ರಶಿಕ್ಷಣ್‌ ಸಂಸ್ಥೆಯಿಂದ ಆರೋಗ್ಯಕರ ರೇಟಿಂಗ್‌ ಹಾಗೂ ಆಹಾರದ ಅಡಿಟ್‌ ಅನ್ನು ಮಾಡಿ ಪ್ರಮಾಣ ಪತ್ರವನ್ನು ಪಡೆಯಬಹುದು ಎಂದು ಸದಸ್ಯ ಬಾಂಧವರಿಗೆ ಮನವಿ ಮಾಡಿದರು.

ಮಾಸಿಕ ಮಹಾಸಭೆಯ ಪ್ರಾಯೋಜಕರಾದ ಆಹಾರ್‌ ವಲಯ ಮೂರರ ಉಪಾಧ್ಯಕ್ಷ ಸುರೇಶ್‌ ಜಿ. ಶೆಟ್ಟಿ ಅವರು ಸ್ವಾಗತಿಸಿದರು. ಉಪಸಮಿತಿಯ ಪ್ರೊಮೋಷನ್‌ ವಿಭಾಗದ ಅಧ್ಯಕ್ಷ ಮಹೇಶ್‌ ಶೆಟ್ಟಿ, ಕಾನೂನು ವಿಭಾಗದ ಅಧ್ಯಕ್ಷ ಗುರುಪ್ರಸಾದ್‌ ಶೆಟ್ಟಿ ಮತ್ತು ಕಮಲಾಕರ್‌ ಶೆಣೈ ತಮ್ಮ ಉಪ ಸಮಿತಿಗಳ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಲಹೆಗಾರರಾದ ಸಂತೋಷ್‌ ರಾಮಣ್ಣ ಶೆಟ್ಟಿ, ಸಂತೋಷ್‌ ರಾಜು ಶೆಟ್ಟಿ ಸಲಹೆಗಳನ್ನಿತ್ತು ಸಹಕರಿಸಿ ದರು. ಪ್ರದರ್ಶನ ಮಳಿಗೆಯಲ್ಲಿ ಭಾಗವಹಿ ಸಿದ ವಿವಿಧ ಕಂಪೆನಿ ಹಾಗೂ ಮುಖ್ಯಸ್ಥರನ್ನು ಗೌರವ ಜತೆ ಕಾರ್ಯದರ್ಶಿ ಪ್ರಮೋದ್‌ ಕಾಮತ್‌ ಅವರು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ್‌ ಟಿ. ಶೆಟ್ಟಿ ಅವರು ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಸಂಸ್ಥೆಯ ಸಾಧನೆಗಳಿಗೆ ಬಂದ ಪ್ರಶಂಸಾ ಪತ್ರಗಳನ್ನು ಓದಿದರು.

ವಲಯ ಒಂದರ ಉಪಾಧ್ಯಕ್ಷ ಸಂಕರ್ಷಣ್‌ ನಾಯಕ್‌, ವಲಯ ಎರಡರ ಉಪಾಧ್ಯಕ್ಷ ನಿರಂಜನ್‌ ಶೆಟ್ಟಿ, ವಲಯ ಮೂರರ ಉಪಾಧ್ಯಕ್ಷ ಸುರೇಶ್‌ ಜಿ. ಶೆಟ್ಟಿ, ವಲಯ ನಾಲ್ಕರ ಉಪಾಧ್ಯಕ್ಷ ಶಶಿಧರ ಶೆಟ್ಟಿ, ವಲಯ ಐದರ ಉಪಾಧ್ಯಕ್ಷ ಸುರೇಶ್‌ ವಿ. ಶೆಟ್ಟಿ, ವಲಯ ಆರರ ಉಪಾಧ್ಯಕ್ಷ ಸುನಿಲ್‌ ಪಾಟೀಲ್‌, ವಲಯ ಏಳರ ಉಪಾಧ್ಯಕ್ಷ ಡಾ| ಸಂತೋಷ್‌ ರೈ, ವಲಯ ಎಂಟರ ಉಪಾಧ್ಯಕ್ಷ ಭುಜಂಗ ಶೆಟ್ಟಿ, ವಲಯ ಒಂಭತ್ತರ ಉಪಾಧ್ಯಕ್ಷ ಜಯದೀಪ್‌ ದೇವಾಡಿಗ, ವಲಯ ಹತ್ತರ ಉಪಾಧ್ಯಕ್ಷ ಡಾ| ಸತೀಶ್‌ ಶೆಟ್ಟಿ ತಮ್ಮ ವಲಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.

ವಲಯ 3ರ ವತಿಯಿಂದ ಅಧ್ಯಕ್ಷ ಶಿವಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷ ಸುರೇಶ್‌ ಜಿ. ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ್‌ ಟಿ. ಶೆಟ್ಟಿ ಅವರು ವಂದಿಸಿದರು. ಆಹಾರ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯ ಬಾಂಧವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.