![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 28, 2022, 2:46 PM IST
ಸಾಗರ್(ಮಧ್ಯಪ್ರದೇಶ):ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನ 2ನೇ ಬಾರಿ ಪಡೆಯುವ ನಿಟ್ಟಿನಲ್ಲಿ 15 ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಕಾಂಗ್ರೆಸ್ ನ ಎನ್ ಎಸ್ ಯುಐ ಘಟಕದ ಸಂಚಾಲಕ ನೈತಿಕ್ ಚೌಧರಿ ಸಾಮೂಹಿಕ ವಿವಾಹದಲ್ಲಿ ಮತ್ತೊಮ್ಮೆ ವಿವಾಹವಾಗಲು ಯತ್ನಿಸಿದ್ದ ವೇಳೆ ಮಧ್ಯಪ್ರದೇಶದ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ!
ಇದನ್ನೂ ಓದಿ:ಮಸೀದಿಗಳಾದ 30 ಸಾವಿರ ದೇವಾಲಯಗಳಷ್ಟನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್
ವರದಿಯ ಪ್ರಕಾರ, ಎನ್ ಎಸ್ ಯುಐನ ಸಂಚಾಲಕ ನೈತಿಕ್ ಚೌಧರಿ ಹದಿನೈದು ದಿನಗಳ ಹಿಂದೆ ಹಸೆಮಣೆ ಏರಿದ್ದ. ಆದರೆ ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿ ವಿವಾಹವಾಗಲು ಸಿದ್ಧನಾಗಿ ಕುಳಿತಿದ್ದ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರು ಈತನ ಗುರುತನ್ನು ಪತ್ತೆ ಹಚ್ಚಿ, ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು.
ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ನೈತಿಕನನ್ನು ಬಂಧಿಸಿದ್ದು, ನಂತರ ಬಿಡುಗಡೆಗೊಳಿಸಲಾಯಿತು ಎಂದು ವರದಿ ತಿಳಿಸಿದೆ.
ಈ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿತ್ತು. ಮಧ್ಯಪ್ರದೇಶದ ಬಿಜೆಪಿ ಮಾಧ್ಯಮ ವಕ್ತಾರ ಲೋಕೇಂದ್ರ ಪರಾಶರ್ ಟ್ವೀಟ್ ನಲ್ಲಿ, ಎನ್ ಎಸ್ ಯುಐನ ಸಂಚಾಲಕ ಮುಖ್ಯಮಂತ್ರಿ ಕನ್ಯಾದಾನ ಯೋಜನೆ ಪಡೆಯಲು ಎರಡನೇ ಬಾರಿ ಮದುವೆಯಾಗಲು ಯತ್ನಿಸಿ ಸಿಕ್ಕಿಬಿದ್ದಿರುವ ಘಟನೆಯಾಗಿದೆ. ಈತನನ್ನು ಪೊಲೀಸರು ಬಂಧಿಸಿದ್ದು, ಈಗ ಏನು ಹೇಳುತ್ತೀರಿ ಕಮಲನಾಥಜೀ ಎಂದು ಪ್ರಶ್ನಿಸಿದ್ದರು.
यह श्रीमान एनएसयूआई के राष्ट्रीय समन्वयक हैं। मुख्यमंत्री कन्यादान योजना का लाभ लेने के लिए दूसरी बार विवाह रचाने चले थे।
खबर है कि पुलिस ने दबोच लिया है ।
क्या कहते हैं कमलनाथ जी! @NSUIMP @nsui pic.twitter.com/804Vq9z1wv— लोकेन्द्र पाराशर Lokendra parashar (@LokendraParasar) May 26, 2022
ಎಬಿಪಿ ನ್ಯೂಸ್ ವರದಿ ಪ್ರಕಾರ, ಭಾರತೀಯ ಜನತಾ ಪಕ್ಷದ ಶಾಸಕ ಶೈಲೇಂದ್ರ ಜೈನ್ ಅವರು ಸಾಗರ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕನ್ಯಾದಾನ ಯೋಜನೆಯಡಿ ಸಾಮೂಹಿಕ ವಿವಾಹ ಸಮಾರಂಭವನ್ನು ಆಯೋಜಿಸಿದ್ದರು ಎಂದು ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.