ಹಾಡಹಗಲೇ ರಿಯಲ್​ ಎಸ್ಟೇಟ್​ ಉದ್ಯಮಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ


Team Udayavani, May 28, 2022, 6:01 PM IST

ಹಾಡಹಗಲೇ ರಿಯಲ್‌ ಎಸ್ಟೇಟ್‌ ವ್ಯಾಪಾರಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ

ಬದಿಯಡ್ಕ: 80 ಲಕ್ಷ ರೂ. ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ತರ್ಕದ ಹಿನ್ನೆಲೆಯಲ್ಲಿ ರಿಯಲ್‌ ಎಸ್ಟೇಟ್‌ ವ್ಯಾಪಾರಿ ಬದಿಯಡ್ಕ ಗೋಳಿಯಡ್ಕದ ಮೊದೀನ್‌ ಕುಂಞಿ (49) ಅವರನ್ನು ಬದಿಯಡ್ಕ ಪೇಟೆಯಿಂದ ಹಾಡಹಗಲೇ ತಂಡವೊಂದು ಅಪಹರಿಸಿದ ಘಟನೆ ನಡೆದಿದೆ.

ವಿಷಯ ತಿಳಿದು ತತ್‌ಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ನಿಮಿಷಗಳೊಳಗೆ ಅಪಹರಣ ಮಾಡಿದ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆಂಗಳ ನಾಲ್ಕನೇ ಮೈಲು ನಿವಾಸಿಗಳಾದ ಶರೀಫ್‌, ಅಬ್ದುಲ್‌ ಹಕೀಂ, ಚಟ್ಟಂಚಾಲ್‌ ನಿವಾಸಿ ನಿಜಾಮುದ್ದೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೆ ಬಳಸಿದ ಕಪ್ಪು ಬಣ್ಣದ ಮಾರುತಿ 800 ಕಾರನ್ನು ಪೊಲೀಸರು ವಶಪಡಿಸಿದ್ದಾರೆ.

ಮೇ 27ರಂದು ಸಂಜೆ 4 ಗಂಟೆಗೆ ಸ್ಕೂಟರ್‌ನಲ್ಲಿ ಬದಿಯಡ್ಕ ಪೇಟೆಗೆ ಬಂದು ಹೊಟೇಲೊಂದರಲ್ಲಿ ಚಹಾ ಸೇವಿಸಿ ಹೊರಗೆ ಬರುತ್ತಿದ್ದ ಮೊದೀನ್‌ ಕುಂಞಿ ಅವರನ್ನು ಹೊರಗೆ ಕಾದು ನಿಂತಿದ್ದ ತಂಡ ಬಲವಂತವಾಗಿ ಹಿಡಿದು ಕಾರಿಗೆ ಹತ್ತಿಸಿ ಅಪಹರಿಸಿದೆ. ಈ ವೇಳೆ ಬೊಬ್ಬೆ ಕೇಳಿ ಸ್ಥಳೀಯರು ಅಲ್ಲಿಗೆ ತಲುಪುವಷ್ಟರಲ್ಲಿ ಕಾರು ವೇಗದಲ್ಲಿ ಪರಾರಿಯಾಗಿತ್ತು.

ವಿಷಯ ತಿಳಿದು ಎಸ್‌ಐ ಪಿ.ಕೆ. ವಿನೋದ್‌ ಕುಮಾರ್‌, ಪೊಲೀಸರಾದ ಇಸ್ಮಾಯಿಲ್‌, ಜಯಪ್ರಕಾಶ್‌, ಮನು ನೇತೃತ್ವದಲ್ಲಿ ತಲುಪಿದ ಪೊಲೀಸರ ತಂಡ ಕಾರನ್ನು ಹಿಂಬಾಲಿಸಿತು. ಮಾನ್ಯ ರಸ್ತೆಗೆ ತಲುಪಿದಾಗ ಪೊಲೀಸ್‌ ಜೀಪನ್ನು ಕಾರಿಗೆ ಅಡ್ಡಿವಿರಿಸಿ ಅಪಹರಣಕಾರರನ್ನು ಬಂಧಿಸಿದರು.

ಕಾರಿನೊಳಗೆ ಮೊದೀನ್‌ ಕುಂಞಿ ಅವರಿಗೆ ಚಾಕುನಿಂದ ಬೆರಳುಗಳಿಗೆ ಇರಿದು ತಂಡ ಗಾಯಗೊಳಿಸಿತ್ತು. ಮೊದೀನ್‌ ಕುಂಞಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಹರಣ ನಡೆಸಿದ ತಂಡದಲ್ಲಿದ್ದ ವ್ಯಕ್ತಿಯೋರ್ವನ ಮಧ್ಯೆ ಸೊತ್ತು ವ್ಯವಹಾರ ನಡೆದಿತ್ತು. ಈ ಸಂಬಂಧ ಮೊದೀನ್‌ ಕುಂಞಿ 80 ಲಕ್ಷ ರೂ. ನೀಡಲು ಇದೆಯೆಂದು ದೂರಲಾಗಿದೆ.

ಈ ವಿಷಯವಾಗಿ ಹಲವು ಬಾರಿ ಚರ್ಚೆ ನಡೆಸಿದ್ದರೂ ಪರಿಹಾರವುಂಟಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೊದೀನ್‌ ಕುಂಞಿ ಅವರನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.