ಬಸ್ ತಂಗುದಾಣದಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ
5 ಕಡೆಗಳಲ್ಲಿ ಘಟಕ; ಮತ್ತಷ್ಟು ಕಡೆ ಅಳವಡಿಕೆಗೆ ಚಿಂತನೆ
Team Udayavani, May 29, 2022, 11:39 AM IST
ಬಂಟ್ಸ್ಹಾಸ್ಟೆಲ್: ಬದಲಾಗುತ್ತಿರುವ ಮಂಗಳೂರಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಆಟೋಮೊಬೈಲ್ ಆ್ಯಂಡ್ ಟಯರ್ ಡೀಲರ್ ಅಸೋಸಿಯೇಶನ್ ವತಿಯಿಂದ ಮಂಗ ಳೂರು ಪಾಲಿಕೆ ಸಹಕಾರದೊಂದಿಗೆ ನಗರದ ಐದು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ದ.ಕ. ಆಟೋಮೊಬೈಲ್ ಆ್ಯಂಡ್ ಟಯರ್ ಡೀಲರ್ ಅಸೋಸಿಯೇಶನ್ ವತಿ ಯಿಂದ ಮಹಾನಗರ ಪಾಲಿಕೆ ಸಹಯೋಗ ದೊಂದಿಗೆ ಬಂಟ್ಸ್ಹಾಸ್ಟೆಲ್ ಬಸ್ ತಂಗು ದಾಣದಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ನಗರ ಬೆಳೆಯುತ್ತಿದ್ದು, ದಿನನಿತ್ಯ ನೂರಾರು ಮಂದಿ ಸಿಟಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಕುಡಿಯುವ ನೀರಿಗಾಗಿ ಹಣ ಕೊಟ್ಟು ನೀರು ಪಡೆಯಬೇಕಾದ ಪರಿಸ್ಥಿತಿ ಇದೆ. ಹೀಗಿದ್ದಾಗ ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಆರಂಭ ಉತ್ತಮ ನಿರ್ಧಾರ. ಈ ನಿಟ್ಟಿನಲ್ಲಿ ಅಸೋಸಿಯೇಶನ್ ಪ್ರಮುಖರು ಪಾಲಿಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಇದೇ ಪ್ರೇರಣೆ ಪಡೆದು ಈ ರೀತಿಯ ಉತ್ತಮ ಕಾರ್ಯಗಳಲ್ಲಿ ಕೈಜೋಡಿಸಲು ಮತ್ತಷ್ಟು ಸಂಘ – ಸಂಸ್ಥೆ ಗಳು ಮುಂದೆ ಬರಬೇಕಾಗಿದೆ. ಮುಂದಿನ ದಿನಗಳಲ್ಲಿ ನಗರದ ಮತ್ತಷ್ಟು ಬಸ್ ತಂಗುದಾಣವನ್ನು ಗುರುತಿಸಿ ಪಾಲಿಕೆ ಸಹಕಾರ ದೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ನೀರಿನ ಘಟಕ ಸ್ಥಾಪನೆಗೆ ಒತ್ತು
ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಉದಯವಾಣಿ ಸುದಿನದಲ್ಲಿ ಪ್ರಕಟಗೊಂಡ ವರದಿಯಂತೆ ನಗರದ ಬಸ್ ತಂಗುದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಒತ್ತು ನೀಡಲಾಗಿದೆ. ಘಟಕ ಸ್ಥಾಪನೆ ಮತ್ತು ನಿರ್ವಹಣೆಯ ಜವಾ ಬ್ದಾರಿಯನ್ನು ದ.ಕ. ಆಟೋಮೊಬೈಲ್ ಆ್ಯಂಡ್ ಟಯರ್ ಡೀಲರ್ ಅಸೋಸಿಯೇಶನ್ ಮುಂದೆ ಬಂದಿದ್ದು, ನಗರದ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದರು.
ಸ್ಥಳೀಯ ಮನಪಾ ಸದಸ್ಯ ಕದ್ರಿ ಮನೋಹರ ಶೆಟ್ಟಿ, ದ.ಕ. ಆಟೋಮೊಬೈಲ್ ಆ್ಯಂಡ್ ಟಯರ್ ಡೀಲರ್ ಅಸೋಸಿಯೇಶನ್ ಅಧ್ಯಕ್ಷ ಕಸ್ತೂರಿ ಪ್ರಭಾಕರ ಪೈ, ಕೋಶಾಧಿಕಾರಿ ಶಶಿಧರ ಪೈ ಮಾರೂರು, ಕಾರ್ಯದರ್ಶಿ ವಿಲಾಸ್ ಕುಮಾರ್, ಸಹ ಕಾರ್ಯದರ್ಶಿ ಆತ್ಮಿಕಾ ಅಮೀನ್, ಪದಾಧಿಕಾರಿಗಳಾದ ರತ್ನಾಕರ ಪೈ, ಲಕ್ಷ್ಮೀನಾರಾಯಣ ನಾಯಕ್, ಕಿಶೋರ್ ರಾವ್ ಆರೂರು, ಸಂತೋಷ್ ರೋಡ್ರಿಗಸ್ ಮತ್ತಿತರರಿದ್ದರು.
ಸುದಿನ ವರದಿಗೆ ಸ್ಪಂದನೆ
‘ಬಸ್ ತಂಗುದಾಣಗಳಲ್ಲಿ ನೆರಳಿದೆ- ನೀರಿರಲಿ’ ಎಂಬ ಶೀರ್ಷಿಕೆಯೊಂದಿಗೆ ಉದಯವಾಣಿ ‘ಸುದಿನ’ ಎ. 8ರಂದು ವಿಶೇಷ ವರದಿಯನ್ನು ಪ್ರಕಟಿಸಿತ್ತು. ನಗರದ ವಿವಿಧ ಬಸ್ ತಂಗುದಾಣಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಅಳವಡಿಸಬೇಕು ಎಂಬ ನೆಲೆಯಲ್ಲಿ ವರದಿ ಪ್ರಕಟವಾಗಿತ್ತು. ದ.ಕ. ಆಟೋಮೊಬೈಲ್ ಆ್ಯಂಡ್ ಟಯರ್ ಡೀಲರ್ ಅಸೋಸಿಯೇಶನ್ ನೇತೃತ್ವದಲ್ಲಿ ಮಹಾನಗರ ಪಾಲಿಕೆಯ ಸಹಕಾರದಿಂದ ಲೇಡಿಗೋಶನ್ ಮುಂಭಾಗದ ಬಸ್ನಿಲ್ದಾಣ, ಹಂಪನಕಟ್ಟೆ ವಿ.ವಿ. ಕಾಲೇಜಿನ ಮುಂಭಾಗ, ಬಂಟ್ಸ್ಹಾಸ್ಟೆಲ್ ಬಸ್ ನಿಲ್ದಾಣ, ಎಂ.ಜಿ. ರಸ್ತೆಯ ಟಿಎಂಎ ಪೈ ಸಭಾಂಗಣ ಮುಂಭಾಗ, ಪಾಲಿಕೆ ಕಚೇರಿ ಮುಂಭಾಗ ಈ ವ್ಯವಸ್ಥೆಯನ್ನು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.