ಸದ್ಗುರುವಿಗೆ ಭವ್ಯ ಸ್ವಾಗತ : ರಾಮ್‌ ವಿಲಾಸ್‌ ಅರಮನೆಯಲ್ಲಿ ಸಮಾರಂಭ


Team Udayavani, May 30, 2022, 1:32 AM IST

ಸದ್ಗುರುವಿಗೆ ಭವ್ಯ ಸ್ವಾಗತ : ರಾಮ್‌ ವಿಲಾಸ್‌ ಅರಮನೆಯಲ್ಲಿ ಸಮಾರಂಭ

ಅಹ್ಮದಾಬಾದ್‌: “ಮಣ್ಣು ಉಳಿಸಿ’ ಅಭಿಯಾನದ ಅಂಗವಾಗಿ 26 ದೇಶಗಳನ್ನು ಸುತ್ತಿರುವ ಸದ್ಗುರು ಜಗ್ಗಿ ವಾಸುದೇವ್‌ ರವಿವಾರ ಭಾರತಕ್ಕೆ ಹಿಂದಿರುಗಿದರು. ಗುಜರಾತ್‌ನ ಜಾಮ್‌ ನಗರದ ಬಂದರಿನಲ್ಲಿ ಬಂದಿಳಿದ ಅವರನ್ನು ಭಾರತೀಯ ನೌಕಾಪಡೆ ವಿಶೇಷವಾಗಿ ಸ್ವಾಗತಿಸಿತು. ಅನಂತರ ಸದ್ಗುರು ಅವರು ಜಾಮ್‌ನಗರದಲ್ಲಿರುವ ರಾಮ್‌ ವಿಲಾಸ್‌ ಅರಮನೆಯಲ್ಲಿ ಭವ್ಯ ಸ್ವಾಗತ ಸಮಾ ರಂಭದಲ್ಲಿ ಭಾಗವಹಿಸಿದ್ದರು.

ಒಮನ್‌ ದೇಶದ ಪೋರ್ಟ್‌ ಸುಲ್ತಾನ್‌ ಕಾಬೂಸ್‌ನಿಂದ ಹೊರಟು ಸತತ ಮೂರು ದಿನಗಳ ಪ್ರಯಾಣದ ಅನಂತರ ಜಾಮ್‌ನಗರದ ಬಂದರಿಗೆ ಆಗಮಿಸಿದ ಸದ್ಗುರು ಅವರಿಗೆ, ನೌಕಾಪಡೆಯ ವಾದ್ಯ ವೃಂದ Save soil anthem ಎಂಬ ಗೀತೆ ಯನ್ನು ನುಡಿಸುವ ಮೂಲಕ ಸುಸ್ವಾ ಗತ ಕೋರಿದರು. ಬಂದರಿನಲ್ಲಿ ಸದ್ಗುರು ವನ್ನು ನೋಡಲು ಆಗಮಿಸಿದ್ದ ಅಪಾರ ಸಂಖ್ಯೆಯ ಜನರು, “ಭೂಮಾತೆಯ ಕರೆ, ಭೂಮಾತೆಯ ಸವಾಲು, ಭೂಮಾತೆಯ ಘರ್ಜನೆ, ಮಣ್ಣು ಉಳಿಸಿ- ಮರ ನೆಡಿ’ ಎಂಬ ಘೋಷಣೆಗಳೊಂದಿಗೆ ಹರ್ಷ ವ್ಯಕ್ತಪಡಿಸಿದರು. ಇದೇ ವೇಳೆ ಗುಜ ರಾತ್‌ನ ಪ್ರಶಸ್ತಿ ವಿಜೇತ ಹಾಡುಗಾರರೂ ಕೂಡ ಸದ್ಗುರುವಿಗೆ ಗೀತನಮನ ಸಲ್ಲಿಸಿ ದರು. ಸದ್ಗುರು ಅವರು ಭರತ ಭೂಮಿ ಯಲ್ಲಿ “ಮಣ್ಣು ಉಳಿಸಿ’ ಅಭಿಯಾನದ ಆರಂಭದ ದ್ಯೋತಕವಾಗಿ ಸಸಿ ಯೊಂದನ್ನು ನೆಟ್ಟರು.

ವಿವಿಧ ರಾಜ್ಯಗಳಿಂದ ಬಂದು ಸೇರಿದ್ದ ಸಾವಿರಾರು ಉತ್ಸಾಹಿಗಳ ಮುಗಿಲು ಮುಟ್ಟುವ ಘೋಷಣೆಗಳ ಕಲರವ, ಮೈನವಿರೇಳಿಸುವ ಡೋಲು ವಾದನ ಮತ್ತು ರೋಮಾಂಚಕ ಜಾನಪದ ಪ್ರದರ್ಶನಗಳ ನಡುವೆ ಸದ್ಗುರು ಅವರು ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿ, “ಮಣ್ಣು ಉಳಿಸಿ’ ಅಭಿ ಯಾನದ ತೀವ್ರಗತಿಯನ್ನು ಕಾಪಾಡಿ ಮುಂದುವರಿಸುವಂತೆ ಕರೆಕೊಟ್ಟರು. “ಕೊನೇಪಕ್ಷ ಮುಂದಿನ 30 ದಿನಗಳ ಕಾಲ ನೀವು ನಿಮ್ಮ ಧ್ವನಿಯನ್ನು ಮುಗಿಲು ಮುಟ್ಟುವಂತೆ ಏರಿಸಬೇಕು. ಕೇವಲ ಒಂದು ದಿನದ ಘೋಷಣೆ ಕೂಗುವುದಲ್ಲ. ಜಗತ್ತಿನ ಎಲ್ಲ ಸರಕಾರಗಳೂ ಮಣ್ಣಿನ ಪುನರುಜ್ಜೀವನ ಮಾಡಲು ನೀತಿ-ನಿರೂ ಪಣೆಯ ಬದಲಾವಣೆ ಮಾಡಿದೆ ಎಂದು ತಿಳಿದು ಬರುವ ತನಕ, ನಿರಂತರವಾಗಿ ಈ ಅಭಿಯಾನದ ಘೋಷವನ್ನು ಪ್ರತೀ ದಿನ 15-20 ನಿಮಿಷಗಳ ಕಾಲ ಎಲ್ಲ ರಿಗೂ ಕೇಳುವಂತೆ ಮಾಡಿ’ ಎಂದು ಕರೆ ನೀಡಿದರು. ಅಲ್ಲದೆ ನಿಮ್ಮ ಕೈಯ್ಯಲ್ಲಿರುವ ಮೊಬೈಲ್‌ಗ‌ಳನ್ನು ಬಳಸಿ, ಸಾಮಾಜಿಕ ಜಾಲತಾಣಗಳಲ್ಲಿ ಮಣ್ಣಿನ ಬಗ್ಗೆ ಮಾತನಾಡಬೇಕು ಎಂದರು.

ಜೂ. 21ರ ವರೆಗೆ 10 ಕಡೆ ಕಾರ್ಯಕ್ರಮ
“ಮಣ್ಣು ಉಳಿಸಿ’ ಅಭಿಯಾನದ ಅಂಗವಾಗಿ, ಯೂರೋಪ್‌, ಏಷ್ಯಾದ ಕೇಂದ್ರ ಭಾಗ, ಮಧ್ಯಪ್ರಾಚ್ಯ ಪ್ರಾಂತ್ಯಕ್ಕೆ ಸೇರಿದ ಸುಮಾರು 26 ದೇಶಗಳನ್ನು ಸುತ್ತಾಡಿರುವ ಅವರು ತಮ್ಮ ಅಭಿಯಾನದ ಕಡೆಯ ಹಂತವನ್ನು ಭಾರತದಲ್ಲಿ ಮುಂದುವರಿಸಲಿ ದ್ದಾರೆ. ಇಲ್ಲಿಯೂ ಮೇ 29ರಿಂದ ಜೂ. 21ರ ವರೆಗೆ 10 ಕಡೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.