ಉತ್ತರ ಪ್ರದೇಶದಲ್ಲಿ ಅಪಘಾತ ಕರ್ನಾಟಕದ 8 ಮಂದಿ ಸಾವು : ಹುಟ್ಟೂರಲ್ಲಿ ಸಾಮೂಹಿಕ ಅಂತ್ಯಕ್ರಿಯೆ

ಸುಲ್ತಾನಪೂರ, ಅಷ್ಟೂರನಲ್ಲಿ ಅಂತ್ಯಕ್ರಿಯೆ

Team Udayavani, May 30, 2022, 8:12 PM IST

ಉತ್ತರ ಪ್ರದೇಶದಲ್ಲಿ ಅಪಘಾತ ಕರ್ನಾಟಕದ 8 ಮಂದಿ ಸಾವು : ಹುಟ್ಟೂರಲ್ಲಿ ಸಾಮೂಹಿಕ ಅಂತ್ಯಕ್ರಿಯೆ

ಬೀದರ್ : ಉತ್ತರ ಪ್ರದೇಶದ ಬಹ್ರೇಚನ್‌ನ ನೌನಿಹಾ ಮಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 8 ಜನರ ಪೈಕಿ ಒಂದೇ ಕುಟುಂಬದ 6 ಮಂದಿಯ ಅಂತ್ಯಕ್ರಿಯೆ ಸೋಮವಾರ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನೆರವೇರಿಸಲಾಯಿತು. ಇನ್ನಿಬ್ಬರ ಅಂತ್ಯಸಂಸ್ಕಾರ ತಾಲೂಕಿನ ಅಷ್ಟೂರ ಮತ್ತು ಕಲ್ಬುರ್ಗಿ ಜಿಲ್ಲೆಯ ಆಳಂದದಲ್ಲಿ ನಡೆಸಲಾಯಿತು. ನೂರಾರು ಜನರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.

ಪುಣ್ಯ ಕ್ಷೇತ್ರ ಆಯೋಧ್ಯೆಗೆ ತೆರಳುತ್ತಿದ್ದ ಬೀದರನ ಗಣೇಶ ನಗರದ ಒಂದೇ ಕುಟುಂಬದ 16 ಜನರಿದ್ದ ಟೆಂಪೋ ಟ್ರಾವೆಲರ‍್ಸ್ (ಟಿಟಿ) ಮತ್ತು ಟ್ರಕ್ ನಡುವೆ ರವಿವಾರ ಬೆಳಿಗ್ಗೆ ಡಿಕ್ಕಿ ಸಂಭವಿಸಿ ಚಾಲಕ ಸೇರಿ 8 ಜನರು ಸಾವನ್ನಪ್ಪಿದ್ದರು. ನಗರದ ಗಾಂಧಿಗಂಜ್‌ನ ಉದ್ಯಮಿ ವಿಜಯಕುಮಾರ ಪಾಟೀಲ ಅವರ ಪತ್ನಿ, ಮಕ್ಕಳು, ಮೊಮ್ಮಕ್ಕಳು ಸೇರಿ ಒಟ್ಟು 16 ಜನರು ವಿವಿಧ ತೀರ್ಥ ಕ್ಷೇತ್ರಗಳ ಪ್ರವಾಸ ಮುಗಿಸಿ ಆಯೋದ್ಯೇಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ಅಸುನೀಗಿದ್ದ ಅನೀಲ ಪಾಟೀಲ (30), ಅವರ ಪತ್ನಿ ಶಿವಾನಿ (25), ತಾಯಿ ಜಗದೇವಿ (52), ಭಾವ ಸಂತೋಷ ಕಾಶಿನಾಥ (30), ಸಂಬಂಧಿಗಳಾದ ಶಶಿಕಲಾ (38) ಮತ್ತು ಮನ್ನಥ (36) ಅವರ ಅಂತ್ಯಕ್ರಿಯೆ ಸುಲ್ತಾನಪೂರದಲ್ಲಿ, ಅನೀಲ ಅವರ ಅತ್ತೆ ಸರಸ್ವತಿ ಜಗನ್ನಾಥ (47) ಅಷ್ಟೂರ ಗ್ರಾಮದಲ್ಲಿ ಮತ್ತು ಚಾಲಕ ವಿಠಲ್ ಅಂಬಾರಾಯ ಅವರ ಅಂತ್ಯಕ್ರಿಯೆ ಆಳಂದದಲ್ಲಿ ಸಾಯಂಕಾಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನೆರವೇರಿಸಲಾಯಿತು.

ಉತ್ತರ ಪ್ರದೇಶದ ವಿಶೇಷ ವಿಮಾನದ ಮೂಲಕ 8 ಮಂದಿ ಪಾರ್ಥಿವ ಶರೀರಗಳನ್ನು ಮತ್ತು ಗಾಯಳುಗಳನ್ನು ಹೈದ್ರಾಬಾದ್‌ಗೆ ರವಾನಿಸಲಾಗಿತ್ತು. ಅಲ್ಲಿಂದ ಅಂಬುಲೆನ್ಸ್‌ಗಳ ಮೂಲಕ ಬೀದರಗೆ ಕರೆತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮೃತ ದೇಹಗಳು ತರುತ್ತಿದ್ದಂತೆ ಸಂಬಂಧಿಕರು ಮತ್ತು ಆಪ್ತರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಕುಟುಂಬದವರನ್ನು ಕಳೆದುಕೊಂಡ ಅನೀಲ ಅವರ ತಂದೆ ವಿಜಯಕುಮಾರ ಆಕಾಶವೇ ಕಳಚಿ ಬಿದ್ದಂತೆ ರೋಧಿಸುತ್ತಿದ್ದ ದೃಶ್ಯ ಕರುಳು ಹಿಂಡುವಂತಿತ್ತು.

ಬೀದರಗೆ ಮೃತದೇಹಗಳು ಬರುತ್ತಿದ್ದಂತೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮತ್ತು ಎಸ್‌ಪಿ ಕಿಶೋರಬಾಬು ಅವರು ಜಿಲ್ಲಾಡಳಿತದ ಪರವಾಗಿ ಪುಷ್ಪ ಮಾಲೆ ಅರ್ಪಿಸಿದರು. ಶಾಸಕ ಬಂಡೆಪ್ಪ ಕಾಶೆಂಪುರ್, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮತ್ತು ಕಾಂಗ್ರೆಸ್ ಮುಖಂಡ ಚಂದ್ರಾಸಿಂಗ್ ಇನ್ನಿತರ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.