ಮದುವಣಗಿತ್ತಿಯಂತೆ ಸಜ್ಜಾದ ಉಡುಪಿ

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲ ಬ್ರಹ್ಮ ಕಲಶೋತ್ಸವ

Team Udayavani, May 31, 2022, 2:05 PM IST

kaditali

ಉಡುಪಿ: ದೇಗುಲಗಳ ನಗರಿ ಉಡುಪಿಯಲ್ಲಿ ಜೂ. 1ರಿಂದ 10ರ ತನಕ ನಡೆಯಲಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ಹೆಜಮಾಡಿಯಿಂದ ಬೈಂದೂರು, ಮಲ್ಪೆ ಸಮುದ್ರ ಕಿನಾರೆಯಿಂದ ಧರ್ಮಸ್ಥಳದವರೆಗೂ ಮತ್ತು ಜಿಲ್ಯಾದ್ಯಂತ ವಿಶಿಷ್ಟ ರೀತಿಯ ಕೊಡೆಗಳು, ಕೇಸರಿ ಧ್ವಜಗಳು, ಸ್ವಾಗತ ಕಮಾನುಗಳು, ಕೇಸರಿ ಪತಾಕೆಗಳನ್ನು ಕಟ್ಟಿ ಶೃಂಗರಿಸಲಾಗಿದೆ.

ಆಕರ್ಷಕ ಕೊಡೆಗಳ ಮೆರುಗು

ಹೆಚ್ಚಿನ ಎಲ್ಲ ದೇವಸ್ಥಾನಗಳ ಮುಂಭಾಗ ಮತ್ತು ರಸ್ತೆಗಳ ವಿಭಾಜಕಗಳಲ್ಲಿ ಬ್ರಹ್ಮಕಲಶೋತ್ಸವ ಪ್ರಚಾರದ ಕೊಡೆಗಳು ಸಾರ್ವಜನಿಕರನ್ನು ಆಕರ್ಷಿಸುತ್ತಿವೆ. ಈ ಕೊಡೆಗಳನ್ನು ಬ್ರಹ್ಮಕಲಶೋತ್ಸವದ ಅನಂತರ ಬಡವರಿಗೆ ಉಚಿತವಾಗಿ ನೀಡಲಾಗುವುದು. ನಗರಾದ್ಯಂತ ಬ್ರಹ್ಮಕಲಶೋತ್ಸವಕ್ಕೆ ಶುಭ ಹಾರೈಸುವ ಬ್ಯಾನರ್‌ಗಳು, ಕೇಸರಿ ಧ್ವಜ ಮತ್ತು ಕೇಸರಿ ಪತಾಕೆಗಳನ್ನು ಹಾಕಲಾಗಿದೆ. ಕಲ್ಸಂಕ ಜಂಕ್ಷನ್‌ನಿಂದ ಶಾರದಾ ಕಲ್ಯಾಣ ಮಂಟಪದ ವರೆಗೆ ವಿದ್ಯುದ್ದೀಪಾಲಂಕಾರದ ಚಪ್ಪರ ಕಂಗೊಳಿಸುತ್ತಿದೆ.

ರಾರಾಜಿಸುತ್ತಿರುವ ಕೇಸರಿ ಪತಾಕೆಗಳು

ಉಡುಪಿಗೆ ಪ್ರವೇಶಿಸುವ ಕರಾವಳಿ ಬೈಪಾಸ್‌ನಿಂದ ಮಣಿಪಾಲದ ತನಕ ಡಿವೈಡರ್‌ಗಳಿಗೆ ಹಾಕಿದ ಕೇಸರಿ ಬಾವುಟ ವಂತೂ ಹಿಂದೆಂದೂ ಉಡುಪಿ ನಗರ ಕಂಡಿಲ್ಲ ಎನ್ನುವಂತೆ ಭಾಸವಾಗುತ್ತಿದೆ. ನಗರದಲ್ಲಿ ಅಳವಡಿಸಲಾದ ಕೇಸರಿ ಪತಾಕೆಗಳ ವಿಶಿಷ್ಟ ರೀತಿಯ ಕಮಾನುಗಳು, ದೇಗುಲದ ಒಳಾಂಗಣದಲ್ಲಿರುವ ಸೆಣಬಿನ ಕಮಾನುಗಳನ್ನು ಬಳ್ಳಾರಿಯ ಹೊಸಪೇಟೆ ಯಿಂದ ತರಿಸಲಾಗಿದೆ. ದೇಗುಲಕ್ಕೆ ಸಾಗುವ ದಾರಿಯುದ್ದಕ್ಕೂ ರಾಜಸ್ಥಾನದಿಂದ ತರಿಸಲಾದ ಸಾಂಪ್ರದಾಯಿಕ ಕೊಡೆಗಳ ಚಪ್ಪರ ಅತ್ಯಂತ ಆಕರ್ಷಕವಾಗಿ ಮೂಡಿ ಬಂದಿದ್ದು, ಹಬ್ಬದ ವಾತಾವರಣ ಸೃಷ್ಟಿಯಾಗಿದೆ. 1,500 ವರ್ಷಗಳ ಇತಿಹಾಸ ಹೊಂದಿರುವ ಈ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ಲಕ್ಷಾಂತರ ಜನರು ಬರುವ ನಿರೀಕ್ಷೆಯಿದೆ.

ಸ್ವಯಂಸೇವಕರ ದಂಡು

ಸುಮಾರು 200 ಮಂದಿ ಸ್ವಯಂಸೇವಕರು 5 ತಂಡಗಳನ್ನಾಗಿ ರಚಿಸಿಕೊಂಡು ರಾತ್ರಿ 8 ಗಂಟೆಯಿಂದ ಮುಂಜಾನೆ 6ರ ತನಕ ನಗರದಾದ್ಯಂತ ಅಲ್ಲಲ್ಲಿ ಕೇಸರಿ ಚಪ್ಪರಗಳನ್ನು ಹೊದಿಸುತ್ತಿದ್ದಾರೆ. ಪುರ ಶೃಂಗಾರಗೊಳಿಸುವ ನೆಲೆಯಲ್ಲಿ ಹಿಂದೂ ಸಮಾಜೋತ್ಸವವನ್ನು ನೆನಪಿಸುವಂತೆ ಬ್ಯಾನರ್‌ಗಳು, ಕೇಸರಿ ಧ್ವಜ ಮತ್ತು ಕೇಸರಿ ಪತಾಕೆಗಳನ್ನು ಸ್ವಯಂಸೇವಕರು ತಮ್ಮ ಸ್ವಂತ ಖರ್ಚಿನಿಂದಲೇ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕಾಗಿ ದೇಗುಲದಿಂದ ಯಾವುದೇ ವೆಚ್ಚ ಭರಿಸುತ್ತಿಲ್ಲ.

ಪಾರ್ಕಿಂಗ್‌ ವ್ಯವಸ್ಥೆ

ದೇಗುಲಕ್ಕೆ ಆಗಮಿಸುವ ಎಲ್ಲ ದ್ವಿಚಕ್ರವಾಹನಗಳು ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿ (ಬಿಜೆಪಿ ಕಚೇರಿ) ಮತ್ತು ಕಾರುಗಳಿಗೆ ಎಂಜಿಎಂ ಮೈದಾನದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಎಂಜಿಎಂ ಮೈದಾನದಿಂದ ದೇಗುಲಕ್ಕೆ ಬರಲು ಉಚಿತವಾಗಿ ಎಲೆಕ್ಟ್ರಿಕ್‌ ರಿಕ್ಷಾ ಮತ್ತು ಕಾರಿನ ಸೇವೆ ಒದಗಿಸಲಾಗುವುದು ಎಂದು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ಮಾಹಿತಿ ನೀಡಿದರು.

ಕಡಿಯಾಳಿಗೆ ಸಿಎಂ

ಕಡಿಯಾಳಿ ದೇಗುಲದಲ್ಲಿ ಆಕರ್ಷಕ ವಾಗಿ ಮೂಡಿ ಬಂದ ರಾಜ್ಯದಲ್ಲಿಯೇ ಪ್ರಥಮವೆನಿಸಿದ ಕಾಷ್ಠಶಿಲ್ಪದ ಅತ್ಯಾಕರ್ಷಕ ಸ್ವಯಂಚಾಲಿತ ತಿರುಗುವ ಮುಚ್ಚಿಗೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೂನ್‌ 1ರ ಬೆಳಗ್ಗೆ 9ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಪಿ.ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

kalla

Siddapura: ಅಂಪಾರು ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು

manipal-marathon

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

KOTA-2

Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.