ಬೆಳಗ್ಗೆ ಹೋಟೆಲ್‌ ಕೆಲಸ, ರಾತ್ರಿ ಮನೆಗಳ್ಳತನ: ಹೈಫೈ ಗ್ರಾಹಕರ ಜೀವನ ಶೈಲಿ ಅನುಸರಿಸಲು ಕೃತ್ಯ


Team Udayavani, May 31, 2022, 3:42 PM IST

ಬೆಳಗ್ಗೆ ಹೋಟೆಲ್‌ ಕೆಲಸ, ರಾತ್ರಿ ಮನೆಗಳ್ಳತನ: ಹೈಫೈ ಗ್ರಾಹಕರ ಜೀವನ ಶೈಲಿ ಅನುಸರಿಸಲು ಕೃತ್ಯ

ಬೆಂಗಳೂರು: ಹೋಟೆಲ್‌ಗೆ ಬರುವ ಗ್ರಾಹಕರ ಹೈಫೈ ಜೀವನ ಶೈಲಿ ಕಂಡು ತಾನೂ ಅದೇ ರೀತಿ ಇರಬೇಕೆಂದು ರಾತ್ರಿ ವೇಳೆ ಮನೆ ಕಳವು ಮಾಡುತ್ತಿದ್ದ ಆರೋಪಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿ.ಟಿ. ಮಾರ್ಕೆಟ್‌ನ ಮೊಹಮ್ಮದ್‌ ಸಾದಿಕ್‌(31) ಬಂಧಿತ. ಆರೋಪಿಯಿಂದ 18 ಲಕ್ಷ ರೂ. ಮೌಲ್ಯದ330 ಗ್ರಾಂ ತೂಕದ ಚಿನ್ನಾಭರಣಗಳು, 2 ಕೆ.ಜಿ. 619ಗ್ರಾಂ ತೂಕದ ಬೆಳ್ಳಿ ಸಾಮಗ್ರಿಗಳು, ಎರಡು ಮೊಬೈಲ್‌ ಗಳನ್ನು ಜಪ್ತಿ ಮಾಡಲಾಗಿದೆ.

ಮೊಹಮ್ಮದ್‌ ಸಾದಿಕ್‌ ಕಳೆದ ಶುಕ್ರವಾರ ಟಾಟಾ ಸಿಲ್ಕ್ ಫಾರಂ, 1ನೇ ಅಡ್ಡರಸ್ತೆಯ ದಿವ್ಯ ರಿಜೆನ್ಸಿ ಅಪಾರ್ಟ್ ಮೆಂಟ್‌ನ ರಾಮಚಂದ್ರ ಕೌಲಗಿ ಎಂಬವರ ಫ್ಲ್ಯಾಟ್‌ ನಲ್ಲಿ ಕಿಟಕಿ ಮೂಲಕ ಕೈ ಹಾಕಿ ಬಾಗಿಲ ಲಾಕ್‌ ತೆಗೆದು ಒಳ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನಾಭರಣ ಹಾಗೂಬೆಳ್ಳಿ ಆಭರಣಗಳು ಹಾಗೂ ಮೊಬೈಲ್‌ ಕಳವು ಮಾಡಿಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರು: ತರಕಾರಿ ಕತ್ತರಿಸುವ ಚಾಕುವಿಗಾಗಿ ಶುರುವಾದ ಅಡುಗೆ ಭಟ್ಟರ ಜಗಳ ಕೊಲೆಯಲ್ಲಿ ಅಂತ್ಯ

ಬೆಳಗ್ಗೆ ಹೋಟೆಲ್‌ನಲ್ಲಿ ಕೆಲಸ: ಮಂಗಳೂರಿನ ಕಂಕೆನಂಗಡಿ ಮೂಲದ ಆರೋಪಿ ಸಾದಿಕ್‌ ಅವಿದ್ಯಾವಂತ. 18 ವರ್ಷದ ಹಿಂದೆ ಪೋಷಕರು ಮೃತರಾಗಿದ್ದಾರೆ. ಐದಾರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಆರೋಪಿ, ಸಿಟಿ ಮಾರುಕಟ್ಟೆಯಲ್ಲಿರುವ ಹೋಟೆಲ್‌ವೊಂದರಲ್ಲಿ ಕ್ಲೀನಿಂಗ್‌ ಕೆಲಸ ಮಾಡುತ್ತಿದ್ದ. ಇದರೊಂದಿಗೆ ದುಶ್ಚಟಗಳ ದಾಸನಾಗಿದ್ದ. ಜತೆಗೆ ಹೋಟೆಲ್‌ಗೆ ಬರುವ ಹೈಫೈ ಜನರ ವರ್ತನೆಗಳು, ಜೀವನ ಶೈಲಿ ಕಂಡು ತಾನೂ ಅದೇ ರೀತಿ ಜೀವನ ನಡೆಸಬೇಕು ಎಂದು ನಿರ್ಧರಿಸಿದ್ದನು. ಹೀಗಾಗಿ ಬೆಳಗ್ಗೆ ಹೊತ್ತು ಹೋಟೆಲ್‌ನಲ್ಲಿ ಕೆಲಸ ಮುಗಿಸಿಕೊಂಡು ರಾತ್ರಿ ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದು, ಆ ವಸ್ತುಗಳನ್ನು ಮಾರಾಟ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದ.

ಈತ ಈ ಹಿಂದೆ ಕುಮಾರಸ್ವಾಮಿ ಲೇಔಟ್‌, ಕೆ.ಆರ್‌. ಮಾರುಕಟ್ಟೆ, ಬನಶಂಕರಿ ಹಾಗೂ ಬಸವನಗುಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದ ಬಳಿಕವೂ ಅಪರಾಧ ಕೃತ್ಯ ಎಸಗುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.