ಮೊಳಕಾಲ್ಮೂರು ಪೊಲೀಸರಿಂದ ನಾಲ್ವರು ನಿಧಿಗಳ್ಳರ ಸೆರೆ

ಬಂಧಿತ ಆರೋಪಿಗಳಿಂದ 6 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ವಶಕ್ಕೆ

Team Udayavani, May 31, 2022, 4:26 PM IST

molakalmuru

ಮೊಳಕಾಲ್ಮೂರು: ತಾಲೂಕಿನ ಕೆಳಗಳಹಟ್ಟಿ- ಬೊಮ್ಮಲಿಂಗನಹಳ್ಳಿ ರಸ್ತೆ ವ್ಯಾಪ್ತಿಯ ಪ್ರದೇಶದಲ್ಲಿ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಬಳಸಿ ನಿಧಿ ಹುಡುಕುತ್ತಿದ್ದ ನಿಧಿಗಳ್ಳರನ್ನು ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂಧಿಸಿ ಅವರಿಂದ 6 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಕೆಳಗಳಹಟ್ಟಿ- ಬೊಮ್ಮಲಿಂಗನಹಳ್ಳಿ ವ್ಯಾಪ್ತಿ ಪ್ರದೇಶದಲ್ಲಿ ಅಪರಿಚಿತರು ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಬಳಸಿ ಭೂಮಿಯನ್ನು ಶೋಧಿಸುತ್ತಿರುವ ಬಗ್ಗೆ ಸ್ಥಳೀಯರು ಅನುಮಾನಗೊಂಡು ಪೊಲೀಸ್‌ ಠಾಣೆಗೆ ದೂರು ನೀಡಿದರು. ಖಚಿತ ಮಾಹಿತಿ ಆಧಾರದ ಮೇರೆಗೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ಪೊಲೀಸ್‌ ವೃತ್ತ ನಿರೀಕ್ಷಕ ಸತೀಶ್‌ ನೇತೃತ್ವದಲ್ಲಿ ಪಿಎಸ್‌ಐ ಪಾಂಡುರಂಗ ಮತ್ತು ಸಿಬ್ಬಂದಿಗಳು ಸೋಮವಾರ ಮಧ್ಯಾಹ್ನ ದಾಳಿ ನಡೆಸಿ ನಿಧಿಗಳರನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಟೌನ್‌ನ ವಿನಾಯಕ ವಾಟರ್‌ ಪ್ಲಾಂಟ್‌ ಮಾಲೀಕ ಶ್ರೀನಿವಾಸಲು, ಹೈದರಾಬಾದ್‌ ಬಾಪುನಗರ್‌ ಚಿಕ್ಕಡಪಲ್ಲಿಯ ರಾಜಸಂಗಮೇಶ್ವರ ಶರ್ಮ, ಹೈದರಾಬಾದ್‌ನ ವೆಂಕಟಗಿರಿ, ಯೂಸೂಫ್‌ ಗುಡ, ಜೂಬ್ಲಿಹಿಲ್ಸ್ ನ ಬಹದ್ದೂರ್‌ ಧನ್‌, ಕರ್ನೂಲ್‌ ಟೌನ್‌ ಅಮ್ಮ ಆಸ್ಪತ್ರೆಯ ಹತ್ತಿರದ ಮೀನಪ್ಪ ಬಂಧಿತ ಆರೋಪಿಗಳು. ಈ ನಾಲ್ಕು ಜನರು ಕಾರಿನಲ್ಲಿ ಬಂದು ಭೂಮಿಯೊಳಗೆ ದೊರೆಯಬಹುದಾದ ಪುರಾತನ ನಿಧಿ, ಶಾಸನ, ವಿಗ್ರಹಗಳನ್ನು ಕಳುವು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಕಳ್ಳತನ ಮಾಡಲು ಪ್ರಯತ್ನಿಸುತ್ತಿದೇವೆಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಗಳಿಂದ 4 ಲಕ್ಷ ರೂ. ಬೆಲೆಯ ಒಂದು ನಿಸ್ಸಾನ್‌ ಕಾರು, 20 ಸಾವಿರ ರೂ.ಬೆಲೆಯ 6 ಗ್ರಾಂ ತೂಕದ ಬಂಗಾರದ 2 ಓಲೆಗಳು, 2 ಗ್ರಾಂ ತೂಕದ 10 ಸಾವಿರ ರೂ. ಬೆಲೆಯ ಬಂಗಾರದ ಬಿಸ್ಕತ್ತುಗಳು, 8 ಗ್ರಾಂ ತೂಕದ 500 ರೂ. ಬೆಲೆ ಬಾಳುವ ಬೆಳ್ಳಿಯ ಬಿಸ್ಕತ್ತು, 1.5 ಗ್ರಾಂ ತೂಕದ 100 ರೂ ಬೆಲೆಯ ಬೆಳ್ಳಿಯ ಚೂರುಗಳು, ನಿಧಿಯನ್ನು ಶೋಧಿಸುವ ಒಂದು ಲಕ್ಷ ರೂ.ಮೌಲ್ಯದ ಎಲೆಕ್ಟ್ರಾನ್‌ ಉಪಕರಣ, 70 ಸಾವಿರ ರೂ. ಬೆಲೆಯ ಡೈಮಂಡ್‌ ಡಿಟೆಕ್ಟರ್‌, 200 ರೂ. ಬೆಲೆ ಬಾಳುವ ಹೆಡ್‌ಲೈಟ್‌ಗಳು, ಒಂದು ಸಾವಿರ ರೂ. ಮೌಲ್ಯದ ಸೋಲಾರ್‌ಲೈಟ್‌ಗಳು, 20 ಸಾವಿರ ರೂ. ಬೆಲೆ ಬಾಳುವ ಮೊಬೈಲ್‌ ಸೇರಿದಂತೆ ಒಟ್ಟು 6,21,900 ರೂ. ಮೌಲ್ಯದ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ಈ ದಾಳಿಯಲ್ಲಿ ಪೊಲೀಸ್‌ ವೃತ್ತ ನಿರೀಕ್ಷಕ ಎನ್‌. ಸತೀಶ್‌, ಪಿಎಸ್‌ಐ ಜಿ.ಪಾಂಡುರಂಗ, ಎಎಸ್‌ಐ ತಿಮ್ಮಣ್ಣ, ಸಿಬ್ಬಂದಿಗಳಾದ ಆರ್‌. ರಮೇಶ್‌, ಇ.ಎಂ. ಬಾಷಾ, ಎಚ್‌.ಪಿ. ಶಿವಕುಮಾರ್‌ ನಾಯ್ಕ, ವಿ. ವೀರಣ್ಣ, ಭೀಮಣ್ಣ, ಲಕ್ಷ್ಮೀಪತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

CTD-Vanivilasa

Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.