![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 1, 2022, 6:30 AM IST
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಜೂನ್ 5ರಂದು ದಿಲ್ಲಿಯಲ್ಲಿ ಸೇರಲಿದ್ದಾರೆ.
ಸರಣಿಯ ಮೊದಲ ಪಂದ್ಯ ಜೂನ್ 9ರಂದು ದಿಲ್ಲಿಯಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ತಂಡವು ಜೂನ್ 2ರಂದು ದಿಲ್ಲಿಗೆ ಆಗಮಿಸಲಿದೆ.
ಸರಣಿಯ ಇನ್ನುಳಿದ ಪಂದ್ಯಗಳು ಅನುಕ್ರಮವಾಗಿ ಕಟಕ್ (ಜೂ. 12), ವಿಶಾಖಪಟ್ಟಣ (ಜೂ. 14), ರಾಜ್ಕೋಟ್ (ಜೂ. 17) ಮತ್ತು ಬೆಂಗಳೂರಿನಲ್ಲಿ ಜೂ. 19ಂದು ನಡೆಯಲಿದೆ. ಆಸ್ಟ್ರೇಲಿಯ ಆತಿಥ್ಯದಲ್ಲಿ ನಡೆಯುವ 2022ರ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಇದೊಂದು ಮಹತ್ವದ ಸರಣಿಯಾ ಗಿದೆ ಎಂದು ಡಿಡಿಸಿಎ ಜಂಟಿ ಕಾರ್ಯದರ್ಶಿ ರಾಜನ್ ಮಂಚಂಡ ಹೇಳಿದ್ದಾರೆ.
ಈ ಸರಣಿ ವೇಳೆ ಪಂದ್ಯ ವೀಕ್ಷಿಸಲು ಪ್ರೇಕ್ಷಕರ ಸಂಖ್ಯೆಯಲ್ಲಿ ಯಾವುದೇ ನಿರ್ಬಂಧ ಇರುವುದಿಲ್ಲ ಮತ್ತು ಸರಣಿ ಬಯೋಬಬಲ್ ಮುಕ್ತ ವಾತಾವರಣದಲ್ಲಿ ನಡೆಯ ಲಿದೆ. ಆದರೆ ಆಟಗಾರರನ್ನು ಕೋವಿಡ್ಗಾಗಿ ಆಗಾಗ್ಗೆ ಪರೀಕ್ಷೆ ನಡೆಸಲಾಗುತ್ತದೆ.
2 ತಿಂಗಳ ಸುದೀರ್ಘ ಅವಧಿಯ ವರೆಗೆ ಐಪಿಎಲ್ ನಡೆದ ಕಾರಣ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ.
ಇದರಿಂದಾಗಿ ಭಾರತೀಯ ತಂಡವನ್ನು ಕೆ.ಎಲ್. ರಾಹುಲ್ ಮುನ್ನಡೆಸಲಿದ್ದಾರೆ. ಕೊಹ್ಲಿ, ಜಸ್ಪ್ರೀತ್ ಬುಮ್ರಾ ಜತೆ ನಾಯಕ ರೋಹಿತ್ ಶರ್ಮ ಅವರಿಗೆ ವಿಶ್ರಾಂತಿ ನೀಡಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.