ಹತ್ಯೆಗೈದ ಗೋ ಸಾಗಣೆ: ಐವರು ಆರೋಪಿಗಳ ಬಂಧನ


Team Udayavani, Jun 1, 2022, 3:43 PM IST

Untitled-1

ಚನ್ನಪಟ್ಟಣ: ಹಸುವನ್ನು ಕೊಂದು ಸಾಗಿಸುವ ಸಂದರ್ಭದಲ್ಲಿ ಪುರ ಪೊಲೀಸರು ಹಸುವಿನ ದೇಹವನ್ನು ವಶಪಡಿಸಿಕೊಂಡು ಐದು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾತನೂರು ಸರ್ಕಲ್‌ ನಲ್ಲಿರುವ ಇಂದಿರಾ ಕಾಟೇಜ್‌ನಲ್ಲಿ ನಡೆದಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ್‌ಬಾಬು, ತಾಲೂಕು ಪೊಲೀಸ್‌ ಉಪಭಾಗಾಧಿಕಾರಿ ಕೆ.ಎನ್‌.ರಮೇಶ್‌ ಹಾಗೂ ನಗರ ವೃತ್ತ ನಿರೀಕ್ಷಕ ದಿವಾಕರ್‌ಮಾರ್ಗದರ್ಶನದಲ್ಲಿ ನಗರ ಪೊಲೀಸ್‌ ಠಾಣೆಯಪಿ.ಎಸ್‌.ಐ.ಹರೀಶ್‌, ಎ.ಎಸ್‌.ಐ ಸಿದ್ದರಾಜು ಹಾಗೂಸಿಬ್ಬಂದಿ ಸುನೀಲ್‌, ಪವನ್‌ಕುಮಾರ್‌, ಕಾರ್ತಿಕ್‌,ಚಂದ್ರಶೇಖರ್‌, ರವಿಕುಮಾರ್‌, ಕಿರಣ್‌ಕುಮಾರ್‌, ಅವಿನಾಶ್‌, ಎ.ಎಸ್‌.ಬೀರಯ್ಯ, ದಯಾನಂದ್‌, ಸತ್ಯಪ್ಪ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದರು.

ಕೆಲ ದಿನಗಳ ಹಿಂದೆ ಇದೇ ಇಂದಿರಾ ಕಾಟೇಜ್‌ನಲ್ಲಿ ಗೋಮಾಂಸದ ಅಂಗಡಿಯನ್ನು ಚಿತ್ರೀಕರಣ ಮಾಡುತ್ತಿದ್ದ ಗೋ ರಕ್ಷಣ ಸಮಿತಿಯ ಸದಸ್ಯರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಈ ಘಟನೆ ರಾಜ್ಯಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗೋಮಾಂಸವನ್ನು ನಿಷೇಧಿಸುವಂತೆ ಜಿಲ್ಲಾಡಳಿತ ಆದೇಶ ನೀಡಿತ್ತು. ಅದರಲ್ಲೂ ನಗರದಲ್ಲಿ ಈ ಘಟನೆ ನಡೆದಿದ್ದರಿಂದ ನಗರ ಪೊಲೀಸರು ಭಾರಿ ಕಟ್ಟೆಚ್ಚರ ವಹಿಸಲಾಗಿತ್ತು.

ಪೊಲೀಸರು ದಿನದ 24 ತಾಸುಗಳು ಕೂಡ ನಗರದಲ್ಲಿ ನಡೆಯುತ್ತಿದ್ದ ಗೋಮಾಂಸದ ಅಂಗಡಿಗಳು ಹಾಗೂ ಹೋಟೆಲ್‌ಗ‌ಳ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಮಧ್ಯರಾತ್ರಿಯ ಸಂದರ್ಭದಲ್ಲಿ ಗೋವಧೆಯ ಬಗ್ಗೆ ಮಾಹಿತಿ ಪಡೆದ ಠಾಣೆಯ ಪಿ.ಎಸ್‌ .ಐ.ಹರೀಶ್‌ ತಮ್ಮ ಸಿಬ್ಬಂದಿ ಜೊತೆ ದಾಳಿ ಮಾಡಿದ್ದರು.

250 ಕೆ.ಜಿ ತೂಗುವ ಹಸುನ ದೇಹ ವಶ: ಬಂಧಿತ ಆರೋಪಿಗಳು ಬಾಬುಸಾಹೇಬ್‌ ಎಂಬುವರ ಮಗ ರೆಹಮಾನ್‌, ಕಾಸಿಮ್‌ ಸಾಹೇಬ್‌ ಎಂಬುವರ ಮಗ ಪೈಯಾಜ್‌ ಅಹಮ್ಮದ್‌, ಸಿದ್ದಿಕ್‌, ಮುಮ್ತಾಜ್‌ಎಂಬುವರ ಮಗ ಫ‌ರೀದ್‌ ಅಹಮ್ಮದ್‌, ಇಬ್ರಾಂ ಎಂದು ತಿಳಿದು ಬಂದಿದ್ದು, ಇವರೆಲ್ಲಾ ಇಂದಿರಾ ಕಾಟೇಜ್‌ನವರು ಎಂದು ಹೇಳಲಾಗಿದೆ. ಇಂದಿರಾ ಕಾಟೇಜ್‌ನ ನಿವಾಸದ ಕಸಾಯಿ ಖಾನೆಯಲ್ಲಿ ಅರ್ಧ ಚರ್ಮ ಸುಲಿದ ಸುಮಾರು 250 ಕೆ.ಜಿ ತೂಗುವ ಹಸುವಿನ ದೇಹವನ್ನು ವಶಕ್ಕೆ ಪಡೆದ ಪೊಲೀಸರು, ತಮ್ಮ ಮೇಲಾಧಿಕಾರಿಗಳ ಆದೇಶದ ಅನುಗುಣವಾಗಿ ಹಸುವಿನ ದೇಹವನ್ನು ನಗರಸಭೆ ವಶಕ್ಕೆ ನೀಡಿದ್ದಾರೆ.

ಈ ಪ್ರಕರಣದ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐದು ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಠಾಣಾ ವ್ಯಾಪ್ತಿಯಲ್ಲಿ ಗೋಮಾಂಸ ನಿಷೇಧದ ಬಗ್ಗೆ ಬಹಳ ಎಚ್ಚಕೆ ವಹಿಸಿ, ತಮ್ಮ ಕರ್ತವ್ಯ ಪಾಲನೆ ಮಾಡುತ್ತಿರುವ ಠಾಣೆಯ ಪಿ.ಎಸ್‌.ಐ ಹರೀಶ್‌ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.