ರೈತ ಸಂಘ-ಹಸಿರು ಸೇನೆಗೆ ಎಚ್.ಆರ್. ಬಸವರಾಜಪ್ಪ ನೂತನ ಅಧ್ಯಕ್ಷ

ರೈತ ಸಂಘ ಹಸಿರು ಸೇನೆ ರಾಜ್ಯ ಸಮಿತಿ ತುರ್ತು ಸಭೆಯಲ್ಲಿ ನಿರ್ಣಯ

Team Udayavani, Jun 1, 2022, 5:30 PM IST

hasiru

ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ರಾಜ್ಯಾಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಸತ್ಯಶೋಧನಾ ಸಮಿತಿ ರಚಿಸಿದ್ದು ಆರೋಪ ಸಾಬೀತಾದರೆ ಕೋಡಿಹಳ್ಳಿ ಅವರನ್ನು ಸಂಘಟನೆಯಿಂದಲೇ ಉಚ್ಛಾಟಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ನಗರದ ರೈತ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ರಾಜ್ಯ ಸಮಿತಿ ತುರ್ತು ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈವರೆಗೂ ಸಂಘದ ಗೌರವಾಧ್ಯಕ್ಷರಾಗಿದ್ದ ಎಚ್.ಆರ್. ಬಸವರಾಜಪ್ಪ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಭೆ ಬಳಿಕ ಸಂಘದ ನೂತನ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇನ್ನು ಮುಂದೆ ಕೋಡಿಹಳ್ಳಿ ಚಂದ್ರಶೇಖರ್‌ ಹೊರಗಿಟ್ಟು ಸಂಘಟನೆ ಬಲಪಡಿಸಲಾಗುವುದು. ಎಲ್ಲಾ ರೈತ ಸಂಘಗಳು ಒಂದಾಗಿ ಮಾತುಕತೆಗೆ ಬಂದಲ್ಲಿ ನಾನು ಅಧ್ಯಕ್ಷ ಸ್ಥಾನ ತ್ಯಜಿಸಲೂ ಸಿದ್ಧ ಎಂದರು.

ರೈತ ಸಂಘದ ಅಧ್ಯಕ್ಷರಾಗಿದ್ದ ಕೋಡಿಹಳ್ಳಿ ವಿರುದ್ಧ ಭ್ರಷ್ಟಾಚಾರದ ಗುರುತರ ಆರೋಪ ಕೇಳಿ ಬಂದಿದೆ. ಹಸಿರು ಟವೆಲ್‌ ಹಾಕಿಕೊಂಡು ಓಡಾಡುವುದು ಕಷ್ಟ ಎನ್ನುವಂತಹ ಪರಿಸ್ಥಿತಿ ಇದೆ. ನಿನ್ನೆ ಕೆಲವು ಕಾರ್ಯಕರ್ತರು ಟವೆಲ್‌ ಬೈಕ್‌ನಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದಾರೆ. ಇದೆಲ್ಲಾ ಬೆಂಗಳೂರಲ್ಲಿ ಕುಳಿತವರಿಗೆ ಅರ್ಥವಾಗಲ್ಲ. ಕೋಡಿಹಳ್ಳಿ ಚಂದ್ರಶೇಖರ್‌ಗೆ ಕರೆ ಮಾಡಿದರೆ ಸ್ವೀಕರಿಸಲಿಲ್ಲ. ನಮ್ಮ ಸಂಘಟನೆ ಇದುವರೆಗೆ ರಾಜ್ಯಮಟ್ಟದ ಸದಸ್ಯರಿಗೆ ವಾಟ್ಸ್‌ಆ್ಯಪ್‌ ಮೂಲಕವೇ ಸಂದೇಶ ಕಳುಹಿಸಿ ಮೀಟಿಂಗ್‌ ಕರೆಯಲಾಗುತ್ತದೆ. ಅದೇ ರೀತಿ ನಾನೇ ಮೀಟಿಂಗ್‌ ಕರೆದಿದ್ದೆ. ಆ ಸಭೆಗೆ ಯಾರೂ ಹೋಗದಂತೆ ಹೇಳಲಾಗಿತ್ತು. 18 ಜಿಲ್ಲೆಗಳ ಶೇ.75ರಷ್ಟು ಪದಾ ಧಿಕಾರಿಗಳು ಬಂದಿದ್ದಾರೆ ಎಂದರು. ತಮ್ಮ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪವನ್ನು ಕೋಡಿಹಳ್ಳಿ ಅಲ್ಲಗಳೆಯಲಿಲ್ಲ. ಅದರಲ್ಲಿ ನಾನಿಲ್ಲ ಎಂದು ಅವರು ಸ್ಪಷ್ಟಪಡಿಸಬೇಕಿತ್ತು. ಆದರೆ ಅವರು ತನಗೆ ಮೋಸ ಮಾಡಲಾಗಿದೆ ಎಂದು ಹೇಳಿದ್ದು, ಈ ಮೂಲಕ ಅದೆಲ್ಲವೂ ಸತ್ಯ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಈಗ ತನಿಖೆಗೆ ಒತ್ತಾಯಿಸಿದ್ದಾರೆ. ಮೇಲ್ನೋಟಕ್ಕೆ ಹಣ ವರ್ಗಾವಣೆ ಆಗಿರುವುದು ಕಂಡು ಬಂದಿದೆ. ರಾಜ್ಯ ಸರ್ಕಾರ ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿ ಸತ್ಯಾಂಶ ಹೊರತರಬೇಕು ಎಂದು ಆಗ್ರಹಿಸಿದರು.

ತಮ್ಮ ವಿರುದ್ಧದ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಕೋಡಿಹಳ್ಳಿ ಸ್ಪಷ್ಟಪಡಿಸಬೇಕಿತ್ತು. ಅವರೇ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಇದು ಮಾನಹಾನಿಯಂತಹ ಪ್ರಕರಣವಲ್ಲ. ಅತಿದೊಡ್ಡ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ. ಹೀಗಾಗಿ ಕೋಡಿಹಳ್ಳಿ ಅವರನ್ನು ವಜಾಗೊಳಿಸಲಾಗಿದೆ. ಇದೇ ಮೊದಲ ಬಾರಿಗೆ ರೈತ ಸಂಘದ ಅಧ್ಯಕ್ಷರೊಬ್ಬರನ್ನು ವಜಾ ಮಾಡಲಾಗಿದೆ. ಸತ್ಯಶೋಧನಾ ಸಮಿತಿ ತನಿಖೆ ನಂತರ ಆರೋಪ ಸಾಬೀತಾದರೆ ಸಂಘಟನೆಯಿಂದಲೇ ಅವರನ್ನು ಉಚ್ಛಾಟನೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಸತ್ಯಶೋಧನಾ ಸಮಿತಿ ರಚನೆ ಮಾಡಲಾಗಿದೆ. ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೊಸ ಪದಾ ಧಿಕಾರಿಗಳನ್ನು ನೇಮಿಸಿ ರೈತ ಸಂಘಟನೆ ಬೆಳೆಸುತ್ತೇವೆ. ಮೂಲ ಸ್ಥಾಪಕರಾದ ಎಚ್‌. ಎಸ್.ರುದ್ರಪ್ಪ, ಡಾ| ಚಿಕ್ಕಸ್ವಾಮಿ, ಕಡಿದಾಳ್‌ ಶಾಮಣ್ಣ, ಎನ್‌.ಡಿ.ಸುಂದರೇಶ್‌, ಪ್ರೊ| ನಂಜುಂಡಸ್ವಾಮಿ ತತ್ವ-ಸಿದ್ಧಾಂತಗಳ ಅಡಿಯಲ್ಲಿ ಈ ಹಿಂದಿನಂತೆಯೇ ಸಂಘಟನೆ ಮುನ್ನಡೆಯಲಿದೆ. ಇನ್ನು ಮುಂದೆ ನಮ್ಮ ಯಾವುದೇ ಬ್ಯಾನರ್‌ಗಳಲ್ಲಿ ಅಧ್ಯಕ್ಷರ ಫೋಟೋ ಇರುವುದಿಲ್ಲ. ಸಂಘಟನೆ ಸ್ಥಾಪಿಸಿದ ಹಿರಿಯರ ಫೋಟೋ ಮಾತ್ರ ಬಳಸಲಾಗುವುದು ಎಂದರು.

ಕೆಲವರು ರೈತ ಸಂಘದ ಇತಿಹಾಸವನ್ನೇ ಮರೆ ಮಾಚಲು ಹೊರಟಿದ್ದರು. ಅದಕ್ಕೆ ನಾವು ಅವಕಾಶ ಕೊಡಲ್ಲ. ಸಂಘಟನೆ ವೈಭವ ಮತ್ತೆ ಮರುಕಳಿಸುತ್ತದೆ. ರೈತ ಸಂಘ ನಾಶ ಮಾಡಿದವರು ಮುಖಂಡರೇ ಹೊರತು ರೈತರಲ್ಲ. ರೈತ ಸಂಘಟನೆ ಕಟ್ಟಲು ನನ್ನ ಎಲ್ಲಾ ಶ್ರಮ ಹಾಕಿ, ಸಂಘಟನೆಯಿಂದ ದೂರವಾದವರನ್ನು ಮತ್ತೆ ಕರೆ ತಂದು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಸಂಘಟನೆ ಬಲಪಡಿಸಲಾಗುವುದು ಎಂದರು.

ಹಿಂದೆ ರಾಜಕಾರಣಿಗಳು ತಮ್ಮ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಟ್ಟಿದ್ದರು. ಇವರು ಕೂಡ ಅದೇ ರೀತಿ ಆರೋಪ ಕೇಳಿ ಬಂದಾಗ ರಾಜೀನಾಮೆ ಕೊಡಬೇಕಿತ್ತು. ನಾವು ಮರ್ಯಾದೆ ಉಳಿಸಿಕೊಳ್ಳುವ ಉದ್ದೇಶದಿಂದ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದೇವೆ. ಬೇರೆ ಬೇರೆ ರೈತ ಸಂಘಟನೆಯವರನ್ನು ಭೇಟಿ ಮಾಡಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಸಂಘಟನೆ ಒಟ್ಟುಗೂಡಿಸಿಕೊಂಡು ಬಲಪಡಿಸುತ್ತೇವೆ. ರೈತ ನಾಯಕ ರಾಕೇಶ್‌ ಟಿಕಾಯತ್‌ ಮೇಲೆ ಮಸಿ ಬಳಿದು ಹಲ್ಲೆಗೆ ಯತ್ನಿಸಿರುವುದು ಖಂಡನೀಯ. ಸರ್ಕಾರ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಡಾ|ಚಿಕ್ಕಸ್ವಾಮಿ, ಹಿಟ್ಟೂರು ರಾಜು, ಶಶಿಕಾಂತ್‌ ಪಡಸಲಗಿ, ಸಿದ್ಧವೀರಪ್ಪ, ಕುರುವ ಗಣೇಶ್‌, ಟಿ.ಎಂ. ಚಂದ್ರಪ್ಪ, ನಿಂಗಪ್ಪ, ಸಿದ್ಧವೀರಪ್ಪ, ಸುಭಾಷ್‌, ಬಸವನಗೌಡ ಪಾಟೀಲ್‌, ದುಗ್ಗಪ್ಪಗೌಡ, ಅಗ್ನಿ ಶಿವಪ್ಪ ಮೊದಲಾದವರಿದ್ದರು.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.