ಸಾವಿನಲ್ಲೂ ಭೇದಭಾವ ಸರಿಯಲ್ಲ: ಸ್ವಾಮೀಜಿ
ಒಂದೇ ಕುಟುಂಬದ 11 ಜನ ಮೃತಪಟ್ಟ ಘಟನೆ ಘೋರ ದುರಂತವಾಗಿದೆ.
Team Udayavani, Jun 1, 2022, 5:38 PM IST
ಹುಬ್ಬಳ್ಳಿ: ಸಾವಿನಲ್ಲಿ ಬೇಧಭಾವ ಮಾಡುವುದು ಸರಿಯಲ್ಲ. ಎರಡು ದಿನದ ಅಂತರದಲ್ಲಿ ಇದೇ ರಸ್ತೆಯಲ್ಲಿ ನಡೆದ ಎರಡು ದುರಂತಗಳ ಪೈಕಿ ಒಂದರಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಇನ್ನೊಂದು ದುರಂತದಲ್ಲಿನ ಮೃತಪಟ್ಟವರ ಕುಟುಂಬಸ್ಥರಿಗೆ ಇಂದಿಗೂ ಪರಿಹಾರ ನೀಡುವ ಕೆಲಸ ಆಗಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
ಇತ್ತೀಚೆಗೆ ಧಾರವಾಡದ ಬಾಡಾ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಮಂಗಳವಾರ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಒಂದೇ ಕುಟುಂಬದ 11 ಜನ ಮೃತಪಟ್ಟ ಘಟನೆ ಘೋರ ದುರಂತವಾಗಿದೆ. ಸರಕಾರ ಘೋಷಿಸಿದ ಪರಿಹಾರ ಇಂದಿಗೂ ಬಿಡುಗಡೆಯಾಗಿಲ್ಲ.
ಆದರೆ ಇದಾದ ಎರಡು ದಿನದಲ್ಲಿ ಇನ್ನೊಂದು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಡಿ ಪರಿಹಾರ ಚೆಕ್ ನೀಡಲಾಯಿತು. ಮನುಷ್ಯತ್ವ, ಮಾನವೀಯತೆ ಇದ್ದರೆ ಸಾವಿನಲ್ಲಿ ಯಾರೂ ಬೇಧಭಾವ ಮಾಡಬಾರದು. ಯಾವುದೇ ಸಮಾಜದಲ್ಲಿ ಸಾವು ಸಂಭವಿಸಿದರೂ ಅದು ಸಾವು ಎಂಬುದನ್ನು ಮರೆಯಬಾರದು.
ಅಪಘಾತದಲ್ಲಿ ಉಳಿದುಕೊಂಡು ಚಿಕಿತ್ಸೆ ಪಡೆಯುತ್ತಿರುವವರ ಬದುಕು ಕೂಡ ದೊಡ್ಡ ದುರಂತವೇ ಸರಿ. ಮುಂದೆ ಅವರು ದುಡಿದು ಜೀವನ ನಡೆಸಲು ಅಸಾಧ್ಯ. ಹೀಗಾಗಿ ಪ್ರಧಾನ ಮಂತ್ರಿಗಳು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಮೃತ ಕುಟುಂಬ ಸದಸ್ಯರಿಗೆ 15 ಲಕ್ಷ ರೂ. ಪರಿಹಾರ ನೀಡಬೇಕು. ಒಂದು ವೇಳೆ ಪರಿಹಾರ ನೀಡದಿದ್ದರೆ ಧಾರವಾಡದ ಜನತೆ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್ ಕುಮ್ಮಕ್ಕು: ಅರವಿಂದ್ ಬೆಲ್ಲದ
BJP: ಹೈಕಮಾಂಡ್ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ
By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ
PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.