ಅನೈತಿಕ ಸಂಬಂಧಕ್ಕೆ ಅಡ್ಡಿ : 35 ಅಡಿ ಆಳದ ಬಾವಿಗೆ ತಳ್ಳಿದರೂ ಬದುಕಿ ಬಂದ ಬಾಲಕ !
ಮಾವಿನ ಹಣ್ಣು ನೀಡುವುದಾಗಿ ಹೇಳಿ ಚಿಕ್ಕಪ್ಪನಿಂದಲೇ ಕೃತ್ಯ!
Team Udayavani, Jun 1, 2022, 6:24 PM IST
ಪಣಜಿ: ಚಿಕ್ಕಪ್ಪನು 13 ವರ್ಷದ ಬಾಲಕನ್ನು 35 ಅಡಿ ಆಳದ ಬಾವಿಗೆ ಎಸೆದಿರುವ ಘಟನೆ ಮಂಗಳವಾರ ಸಂಜೆ ಗೋವಾದ ಕುಡ್ತರಿಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡ್ತರಿ ಪೋಲಿಸರು ಆರೋಪಿ ಬಸವರಾಜ್ ಕಾಗಿ (45) ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಬಸವರಾಜ್ ಕಾಗಿ ಮಡಗಾಂವ್ ಮೋತಿಡೊಂಗರ ಪರಿಸರದಲ್ಲಿ ವಾಸಿಸುತ್ತಿದ್ದ. ಕಾಡಿನಲ್ಲಿ ಒಂದು ಮಾವಿನ ಮರಕ್ಕೆ ಭಾರಿ ಪ್ರಮಾಣದಲ್ಲಿ ಮಾವಿನ ಹಣ್ಣಿದೆ ತೋರಿಸುತ್ತೇನೆ ಎಂದು ಆರೋಪಿ ಬಸವರಾಜ ಬಾಲಕನನ್ನು ಕರೆದುಕೊಂಡು ಹೋಗಿ ಅಲ್ಲಿದ್ದ 35 ಅಡಿ ಆಳದ ಬಾವಿಗೆ ನೂಕಿ ಪರಾರಿಯಾಗಿದ್ದ.
ಅದೃಷ್ಟವಶಾತ್ ಬಾಲಕ ಬಾವಿಯಲ್ಲಿದ್ದ ಮೆಟ್ಟಿಲುಗಳ ಸಹಾಯದಿಂದ ಮೇಲಕ್ಕೆ ಹತ್ತಿ ಮಧ್ಯರಾತ್ರಿಯ ಕತ್ತಲೆಯಲ್ಲಿ ತನ್ನ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡಿದ. ನಂತರ ಮನೆಗೆ ಬಂದು ಎಲ್ಲರಿಗೂ ವಿಷಯ ತಿಳಿಸಿದ ನಂತರ ಪೋಲಿಸ್ ದೂರು ನೀಡಲಾಯಿತು.
ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಮರೆಸಿಕೊಂಡಿದ್ದ ಚಿಕ್ಕಪ್ಪನನ್ನು ಪೋಲಿಸರು ಬುಧವಾರ ಬಂಧಿಸಿದ್ದಾರೆ.
ಬಸವರಾಜ್ ಕಾಗಿಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಈ ವಿಷಯ ಬಾಲಕನಿಗೆ ತಿಳಿದಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ಸಂಬಂಧದ ವಿಷಯ ಬಯಲಾಗುವ ಭೀತಿಯಿಂದ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಕುರಿತಂತೆ ಮಾಯಣಾ ಕುಡತರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…
Contract Carriage: ಬೈಕ್ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ
World War 3…?: ಇಸ್ರೇಲ್ ಮೇಲೆ ಇರಾನ್ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ
Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು
Arvind Kejriwal: ಇನ್ನು 2 ದಿನಗಳಲ್ಲಿ ದಿಲ್ಲಿ ಸಿಎಂ ಅಧಿಕೃತ ನಿವಾಸ ತೊರೆಯಲಿರುವ ಕೇಜ್ರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್ ಕೇಸ್: ಮೂವರು ಸಿಸಿಬಿ ವಶಕ್ಕೆ
Bengaluru: ಬರ್ತ್ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ
MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ
Bengaluru: ಮ್ಯಾನೇಜರ್ಗೆ ಇರಿಯಲು ಬಂದು ಕಂಡಕ್ಟರ್ಗೆ ಇರಿದ
Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.