ಅನಾಥ ಸ್ತ್ರೀಯರಿಗೆ ಆಶ್ರಮ ಆರಂಭಿಸಲು ಸಿದ್ಧತೆ

ಮೊಗರ್ನಾಡಿನಲ್ಲಿ ಜೆ.ಕೆ.ಸೇವಾ ಟ್ರಸ್ಟ್‌ ಮೂಲಕ ಸ್ಥಾಪಿಸಲು ಮುಂದಾದ ಮಹಿಳೆ

Team Udayavani, Jun 2, 2022, 10:04 AM IST

orphan

ಬಂಟ್ವಾಳ: ಅನಾಥ ಹೆಣ್ಣು ಮಕ್ಕಳು-ಮಹಿಳೆಯರಿಗೆ ಆಶ್ರಯ ಕಲ್ಪಿಸುವ ದೃಷ್ಟಿಯಿಂದ ಪಾಣೆ ಮಂಗಳೂರಿನ ಮಹಿಳೆಯೊಬ್ಬರು ಉಚಿತವಾಗಿ ಆಶ್ರಮ ನಿರ್ಮಾಣಕ್ಕೆ ಮುಂದಾಗಿದ್ದು, ನರಿಕೊಂಬು ರಸ್ತೆಯ ಮೊಗರ್ನಾಡಿನಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ.

ಪಾಣೆಮಂಗಳೂರಿನ ಕುಮುದಾ ಜೆ.ಕುಡ್ವ ಆಶ್ರಮ ನಿರ್ಮಾಣಕ್ಕೆ ಮುಂದಾಗಿರುವ ಮಹಿಳೆ. ಸುಮಾರು 10 ವರ್ಷಗಳ ಹಿಂದೆಯೇ ಆಶ್ರಮ ನಿರ್ಮಾಣ ಮಾಡಬೇಕು ಎಂಬ ಇಚ್ಛೆ ಯೊಂದಿಗೆ 2011ರಲ್ಲಿ ಜೆ.ಕೆ.ಸೇವಾ ಟ್ರಸ್ಟ್‌ ಸ್ಥಾಪಿಸಿದ್ದರು. ಆದರೆ ಹಲವು ಕಾರಣಕ್ಕೆ ಆಶ್ರಮ ನಿರ್ಮಾಣ ಸಾಧ್ಯ ವಾಗಿರಲಿಲ್ಲ. ಪ್ರಸ್ತುತ ಆರಂಭಿಸುವ ಆಶ್ರಮದಲ್ಲಿ ಗರಿಷ್ಠ ಅಂದರೆ 100 ಮಂದಿಗೆ ಅವಕಾಶ ನೀಡುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

ಮೊಗರ್ನಾಡಿನಲ್ಲಿ ತಮ್ಮ 53 ಸೆಂಟ್ಸ್‌ ಜಮೀನಿನಲ್ಲಿ ಆಶ್ರಮಕ್ಕಾಗಿ ಸುಸಜ್ಜಿತ ವಸತಿ ವ್ಯವಸ್ಥೆ, ಶೌಚಾಲಯ, ನೀರು, ವಿದ್ಯುತ್‌ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಇದೇ ತಿಂಗಳಲ್ಲಿ ಆಶ್ರಮ ಆರಂಭಿಸುವ ಕುರಿತು ಸಿದ್ಧತೆ ನಡೆಸಿದ್ದಾರೆ. ಆ ಜಮೀನಿನಲ್ಲಿ ಶಿಥಿಲಾ ವಸ್ಥೆಯಲ್ಲಿದ್ದ ಕಟ್ಟಡವೊಂದನ್ನು ಆಶ್ರಮಕ್ಕೆ ಹೊಂದಿಕೊಳ್ಳುವ ರೀತಿ ನವೀಕರಣ ಗೊಳಿಸಿದ್ದಾರೆ.

ಆಶ್ರಮಕ್ಕೆ ಬಾಡಿಗೆ ಮೊತ್ತ

ಕುಮುದಾ ಜೆ.ಕುಡ್ವ ಪಾಣೆ ಮಂಗಳೂರಿನ ಕೇಂದ್ರ ಭಾಗದಲ್ಲಿ ವಾಣಿಜ್ಯ ಸಂಕೀರ್ಣವೊಂದನ್ನು ಹೊಂದಿದ್ದು, ಅದರ ಬಾಡಿಗೆ ಮೊತ್ತದಿಂದಲೇ ಆಶ್ರಮ ನಡೆಸುವುದಾಗಿ ತಿಳಿಸಿದ್ದಾರೆ. ಕುಮುದಾ ಅವರ ಇಬ್ಬರು ಮಕ್ಕಳು ಹೊರಗಿದ್ದು, ಪ್ರಸ್ತುತ ಅವರು ಒಬ್ಬರೇ ವಾಸಿಸುತ್ತಿದ್ದಾರೆ. ಆಶ್ರಮ ಆರಂಭವಾದ ಬಳಿಕ ಅವರು ಅಲ್ಲೇ ಉಳಿದುಕೊಳ್ಳುವ ಹಾಗೆ ಪ್ರತ್ಯೇಕ ಕೊಠಡಿ ಯೊಂದನ್ನು ನಿರ್ಮಿಸಿದ್ದಾರೆ.

ಜಮೀನಿನಲ್ಲಿ ಒಂದಷ್ಟು ತೆಂಗಿನ ಮರಗಳಿದ್ದು, ಅದರ ಆದಾಯವನ್ನೂ ಅಶ್ರ ಮಕ್ಕೆ ಬಳಕೆ ಮಾಡುತ್ತೇವೆ. ಉಳಿದಂತೆ ಆಶ್ರಮ ವಾಸಿಗಳಿಗೆ ಪ್ರಾರಂಭದಲ್ಲಿ ಅಡುಗೆಗೆ ವ್ಯವಸ್ಥೆ ಮಾಡಿ ಮುಂದೆ ಅವರೇ ಅಡುಗೆ ತಯಾರಿ ಮಾಡುವ ಆಲೋಚನೆಯನ್ನೂ ಹೊಂದಿದ್ದಾರೆ. ಹೆಣ್ಣು ಮಕ್ಕಳಿಂತ ಹಿರಿಯ ಮಹಿಳೆಯರಿಗೂ ಆಶ್ರಮದಲ್ಲಿ ಆಶ್ರಯ ನೀಡುವ ಆಲೋಚನೆ ಹೊಂದಿದ್ದು, ಆರೋಗ್ಯವಂತರಾಗಿರುವರಿಗೆ ಮಾತ್ರ ಅವಕಾಶ ಎನ್ನುತ್ತಾರೆ ಕುಮುದಾ.

ನಾಯಿ ಸಾಕುವ ಆಸಕ್ತಿ

ಪ್ರಾಣಿ ಪ್ರೇಮಿಯಾಗಿರುವ ಕುಮುದಾ ಹಿಂದೆ ಹತ್ತಾರು ನಾಯಿಗಳನ್ನು ಸಾಕುತ್ತಿದ್ದು, ಅದಕ್ಕೆ ಬೇಕಾದ ಆರೈಕೆಯನ್ನೂ ಸ್ವತಃ ಅವರೇ ಮಾಡುತ್ತಿದ್ದರು. ಆದರೆ ಪ್ರಸ್ತುತ ವಯಸ್ಸಾದ ಕಾರಣದಿಂದ ನಾಯಿಗಳನ್ನು ಸಾಕುವುದನ್ನು ಬಿಟ್ಟು ಬಿಟ್ಟಿದ್ದಾರೆ. ಆದರೆ ಮುಂದೆ ನಾಯಿಗಳನ್ನೂ ಸಾಕುವ ಯೋಜನೆಯೊಂದಿಗೆ ಅದಕ್ಕಾಗಿ ಪ್ರತ್ಯೇಕ ಗೂಡಿನ ವ್ಯವಸ್ಥೆಗಳನ್ನು ಮಾಡಿದ್ದಾರೆ.

10 ವರ್ಷಗಳ ಯೋಜನೆ

ಆಶ್ರಮ ಸ್ಥಾಪನೆಯ ಉದ್ದೇಶದಿಂದ 10 ವರ್ಷಗಳ ಹಿಂದೆಯೇ ಜಗದೀಶ್‌ ಕುಡ್ವಾ, ಕುಮುದಾ ಹೆಸರಿನಲ್ಲಿ ಜೆ.ಕೆ. ಸೇವಾ ಟ್ರಸ್ಟ್‌ ಸ್ಥಾಪಿಸಿದ್ದು, ಮುಂದೆ ಜೆ.ಕೆ.ಮಹಿಳಾ ಸೇವಾಶ್ರಮವನ್ನು ಆರಂಭಿಸಲಿದ್ದೇವೆ. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಆಶ್ರಮವಾಸಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯರ ಜತೆಯೂ ಮಾತುಕತೆ ನಡೆಸಿದ್ದು, ಅವರು ಆಶ್ರಮಕ್ಕೆ ಬಂದು ಸೇವೆ ನೀಡುವ ಭರವಸೆ ನೀಡಿದ್ದಾರೆ. -ಕುಮುದಾ ಜೆ.ಕುಡ್ವ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.