ಭೂ ಕುಸಿತ ಸಂಭವಿಸುವ 30 ಸ್ಥಳ ಗುರುತು

ಜಿಲ್ಲಾಡಳಿತ- ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಕೆ

Team Udayavani, Jun 3, 2022, 3:34 PM IST

landslide

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಕ್ಕೆ ಕಾಲ ಸನ್ನಿಹಿತವಾಗಿದೆ. ಮಳೆಯಿಂದ ಭೂಕುಸಿತ ಸಂಭವಿಸಬಹುದಾದ 30 ಪ್ರದೇಶಗಳನ್ನು ಗುರುತಿಸಿದ್ದು, ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಎಚ್ಚರಿಕೆ ವಹಿಸಿದೆ.

2019-20ನೇ ಸಾಲಿನಲ್ಲಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಹಾಮಳೆ ಅನಾಹುತ ಸೃಷ್ಟಿಸಿತ್ತು. ಭೂಕುಸಿತ ಸಂಭವಿಸಿ ಅಪಾರ ಪ್ರಮಾಣ ಆಸ್ತಿಪಾಸ್ತಿ, ಮನೆ, ಜೀವಹಾನಿ ಸಂಭವಿಸಿತ್ತು. ಅಲ್ಲಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಸಂಭವಿಸಬಹುದಾದ ಅವಘಡವನ್ನು ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಅಲೇಖಾನ್‌ ಹೊರಟ್ಟಿ, ಹಳ್ಳಿಕೆರೆ, ಚನ್ನಹಡ್ಲು, ಬಾಳೂರು ಹೊರಟ್ಟಿ, ಭೂತನಕಾಡು, ಮಲೆಮನೆ, ಮೇಗೂರು, ಜಾವಳಿ, ಮಧುಗುಂಡಿ, ಬಲಿಗೆ, ದುರ್ಗದಹಳ್ಳಿ, ಅವತಿ ಹೊಸಳ್ಳಿ, ಶಿರವಾಸೆ, ಚನ್ನಡ್ಲು ಕಾಫಿ ಎಸ್ಟೇಟ್‌ (ಮಲ್ಲೇಶ್ವರಗುಡ್ಡ), ಬೂದಿಗುಂಡಿ, ಯಡೂರು, ಯಳಂದೂರು, ಕೋಟೆಮಕ್ಕಿ, ಹೆಮ್ಮಕ್ಕಿ, ಕಸ್ಕೆಬೈಲು, ದೇವವೃಂದ, ಅತ್ತಿಗೆರೆ, ಕೆಳಗೂರು, ಕೆಳಗೂರು ಕಾಫಿ ಎಸ್ಟೇಟ್‌, ಮುಸ್ತಿಖಾನ್‌ ಕಾಫಿ ತೋಟ, ಸುಂಕಸಾಲೆ, ಬದನೆಖಾನ್‌ ಕಾಫಿ ಎಸ್ಟೇಟ್‌, ಕುಣಿಯಳ್ಳಿ, ಬಲ್ಲಾಳರಾಯನದುರ್ಗ, ದುರ್ಗದಹಳ್ಳಿಗಳನ್ನು ಗುರುತಿಸಲಾಗಿದೆ.

2019-20ನೇ ಸಾಲಿನಲ್ಲಿ ಅವಘಡ ಸಂಭವಿಸಿದ ಪ್ರದೇಶಗಳಿಗೆ ಜಿಯಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ- ಸೂಚನೆಗಳನ್ನು ನೀಡಿದ್ದು, ಅದರಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಕಳೆದ ಬಾರಿ ಭೂಕುಸಿತ ಸಂಭವಿಸಿರಲಿಲ್ಲ.

ಜಿಯಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ತಂಡದಿಂದ ಭೂ ಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ರಸ್ತೆ ಬದಿ ಸೈಡ್‌ ಕಟಿಂಗ್‌ ಮಾಡಲಾಗಿದೆ. ಬ್ಯಾರಿಕೇಡ್‌ ವಾಲ್‌ ನಿರ್ಮಿಸಲಾಗಿದೆ. ನೀರು ಸರಾಗವಾಗಿ ಹರಿಯಲು ಅನುಕೂಲವಾಗುವಂತೆ ಚರಂಡಿಗಳನ್ನು ನಿರ್ಮಿಸಲಾಗಿದೆ.

ಅವಘಡಗಳು ಸಂಭವಿಸದಂತೆ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೇನು ಮುಂಗಾರು ಮಳೆ ಆರಂಭದ ದಿನಗಳು ಹತ್ತಿರವಾಗುತ್ತಿವೆ. ಒಟ್ಟಾರೆ ಈ ವರ್ಷದ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

2019-20ನೇ ಸಾಲಿನಲ್ಲಿ ಸಂಭವಿಸಿದ ಅನಾಹುತ ಪ್ರದೇಶಗಳಿಗೆ ಕಳೆದ ವರ್ಷ ಜಿಯಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ಅಧಿಕಾರಿಗಳ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಸೂಚನೆಗಳನ್ನು ನೀಡಿದ್ದರು. ಅದರಂತೆ ಭೂ ಕುಸಿತ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಕಳೆದ ವರ್ಷ ಹೆಚ್ಚಿನ ಅನಾಹುತ ಸಂಭವಿಸಿರಲಿಲ್ಲ. ಅದರಂತೆ ಈ ವರ್ಷವೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. -ವಿಂಧ್ಯಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.