ಉಗಾರ ಶುಗರ್ಸ್ ಕಾರ್ಮಿಕರಿಂದ ಪ್ರತಿಭಟನೆ
Team Udayavani, Jun 3, 2022, 5:10 PM IST
ಯಡ್ರಾಮಿ: ತಾಲೂಕಿನ ಮಳ್ಳಿ-ನಾಗರಳ್ಳಿ ಉಗಾರ ಸಕ್ಕರೆ ಕಾರ್ಖಾನೆ ಸೆಕ್ಯುರಿಟಿ ನೌಕರರು ಆಡಳಿತ ಮಂಡಳಿ ವಿರುದ್ಧ ಬುಧವಾರದಿಂದ ಪ್ರತಿಭಟನೆಗಿಳಿದಿದ್ದಾರೆ.
ಉಗಾರ ಶುಗರ್ಸ್ ಕಾಂಟ್ರ್ಯಾಕ್ಟ್ ವರ್ಕರ್ಸ್ ಗೌರವ ಅಧ್ಯಕ್ಷ ಡಾ| ಮಹೇಶ ಕುಮಾರ ರಾಠೊಡ ಮಾತನಾಡಿ, ಕಳೆದ 15ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಖಾನೆ ರಕ್ಷಣೆ ಸಿಬ್ಬಂದಿ (ಸೆಕ್ಯೂರಿಟಿ ಗಾರ್ಡ್) ತಮಗೆ ಸಿಗಬೇಕಾದ ಕಾನೂನು ಬದ್ಧ ಕನಿಷ್ಟ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನಿಟ್ಟ ಪರಿಣಾಮವಾಗಿ ಆ ಸಿಬ್ಬಂದಿಗಳನ್ನೇ ಕೆಲಸದಿಂದ ಕಿತ್ತೂಗೆಯುವಂತ ಹೀನ ಕೆಲಸವನ್ನು ಇಲ್ಲಿನ ಆಡಳಿತ ಮಂಡಳಿಯವರು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರು ನ್ಯಾಯ ಸಮ್ಮತ ಬೇಡಿಕೆ ಕೇಳಿದ್ದಾರೋ ಅವರ ಬದಲಾಗಿ ಬೇರೆ ನೌಕರರನ್ನು ನೇಮಕ ಮಾಡಿಕೊಳ್ಳುವ ಮೂಲಕ ಕಾರ್ಖಾನೆ ಮೊದಲಿನ ನೌಕರರಿಗೆ ಅನ್ಯಾಯ ಎಸಗಿದೆ. ಪ್ರಾರಂಭದಿಂದಲೂ ಕರ್ತವ್ಯ ನಿರ್ವಹಿಸಿಕೊಂಡು ಬಂದ ನೌಕರರಿಗೆ ಕೂಡಲೇ ಕೆಲಸ ನೀಡಿ. ಅವರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ನಮ್ಮ ಈ ಹೋರಾಟ ತೀವ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಸಿದರು.
ಡಾ| ಮಹೇಶ ಕುಮಾರ ರಾಠೊಡ, ಉಗಾರ ಶುಗರ್ಸ್ ಕಾಂಟ್ರ್ಯಾಕ್ಟ್ ವರ್ಕರ್ಸ್ ಯೂನಿಯನ್ ಅಧ್ಯಕ್ಷ ಬಾಬುಸಾಬ್ ಮುಲ್ಲಾ, ಪ್ರಧಾನ ಕಾರ್ಯದರ್ಶಿ ಅಶೋಕ ಸಾಸನೂರ , ತಾಲೂಕು ಅಧ್ಯಕ್ಷ ಭೀಮರಾಯ ಮುದಬಸ್ಸಪ್ಪಗೋಳ, ರಾಜ್ಯ ಸಮಿತಿ ಸದಸ್ಯ ಅನಿಲ ಕಾಂಬಳೆ, ಕಟ್ಟಡ ಕಾರ್ಮಿಕರ ಸಂಘದ ವಿಭಾಗೀಯ ಸಂಚಾಲಕ ರಾಮು ಯಡ್ರಾಮಿ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.