![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jun 3, 2022, 6:10 PM IST
ಶಿಡ್ಲಘಟ್ಟ: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ತಾಲೂಕಿನ ದಿಬ್ಬೂರಹಳ್ಳಿಯಲ್ಲಿ 1969ರಲ್ಲಿ ಸ್ಥಾಪನೆಯಾಗಿ, ಅನೇಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ, ಉನ್ನತ ಸ್ಥಾನ ಅಲಂಕರಿಸಲು ಕಾರಣವಾಗಿದ್ದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯನ್ನು ಆದಿಚುಂಚನಗಿರಿ ಮಠದ ಸುಪರ್ದಿಗೆ ನೀಡಲು ವೇದಿಕೆ ಸಜ್ಜಾಗಿದೆ.
ತಾಲೂಕಿನ ದಿಬ್ಬೂರಹಳ್ಳಿ, ಸಾದಲಿ, ಬಶೆಟ್ಟಹಳ್ಳಿ, ಚಿಲಕಲನೇಪು ಹೋಬಳಿಗಳ ಸುತ್ತಮುತ್ತಲಿನ ಬಡ ವಿದ್ಯಾವಂತ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಿ, ಸಮಾಜದಲ್ಲಿ ಉತ್ತಮ, ಉನ್ನತ ವ್ಯಕ್ತಿಗಳನ್ನು ರೂಪಿಸಿದ ದಿಬ್ಬೂರಹಳ್ಳಿಯ ವೆಂಕಟೇಶ್ವರ ಪ್ರೌಢಶಾಲೆಯನ್ನು ಆದಿಚುಂಚನಗಿರಿ ಮಠದ ಸುಪರ್ದಿಗೆ ನೀಡುವ ಕಾರ್ಯಕ್ರಮ ಜೂ.7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯಶಿಕ್ಷಕ ಡಿ.ಸಿ.ಗೋಪಿನಾಥ್ ತಿಳಿಸಿದರು.
ತಾಲೂಕಿನ ದಿಬ್ಬೂರಹಳ್ಳಿಯ ವೆಂಕಟೇಶ್ವರ ಪ್ರೌಢ ಶಾಲೆಯಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸದ ಜೊತೆಗೆ ಆಧ್ಯಾತ್ಮಿಕ ಮೌಲ್ಯ, ಉತ್ತಮ ಸಮಾಜ ಕಟ್ಟುವ ಆಶಾಭಾವನೆಗಳೊಂದಿಗೆ ಶಾಲೆಯನ್ನು ಆದಿಚುಂಚನಗಿರಿ ಮಠದ ಸುಪರ್ದಿಗೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಹೇಳಿದರು.
ಜೂ.7ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ವೆಂಕಟೇಶ್ವರ ಪ್ರೌಢಶಾಲೆ ಆವರಣದಲ್ಲಿ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಶಾಲೆಯ ಹಳೆ ವಿದ್ಯಾರ್ಥಿಗಳು, ಸಮುದಾಯದವರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಗ್ರಾಪಂ ಉಪಾಧ್ಯಕ್ಷ ಡಿ.ಜಿ.ರಾಮಚಂದ್ರ, ಭೂ ಅಭಿವೃದ್ಧಿ ಬ್ಯಾಂಕ್ನ ನಿರ್ದೇಶಕ ಡಿ.ಸಿ.ರಾಮಚಂದ್ರ, ಗ್ರಾಪಂ ಸದಸ್ಯ ಡಿ.ಪಿ.ನಾಗರಾಜ್, ಮಾಜಿ ಸದಸ್ಯ ಪ್ರಸನ್ನ, ಶ್ರೀರಂಗಪ್ಪ, ವಿಜಯಕುಮಾರ್, ತಲಕಾಯಲಬೆಟ್ಟ ಅಶ್ವತ್ಥರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.