ಬಿತ್ತನೆ ಬೀಜ-ರಸಗೊಬ್ಬರ ಕೊರತೆಯಾಗದಿರಲಿ: ಧಂಗಾಪುರ
Team Udayavani, Jun 4, 2022, 11:29 AM IST
ಸೇಡಂ: ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ರೈತರು ಮುಂಗಾರು ಬಿತ್ತನೆಗೆ ತಯಾರಿ ನಡೆಸಿದ್ದು, ಯಾವುದೇ ಕಾರಣಕ್ಕೂ ಬಿತ್ತನೆ ಬೀಜ, ರಸಗೊಬ್ಬರದ ಪೂರೈಕೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಡಾ| ಸಿದ್ರಾಮಪ್ಪ ಧಂಗಾಪುರ ಹೇಳಿದರು.
ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳು, ಅಧಿಕಾರಿಗಳೊಂದಿಗೆ ಮುಂಗಾರು ಹಂಗಾಮಿನ ಸಾಮಾನ್ಯ ಸಭೆ ನಡೆಸಿ ಮಾತನಾಡಿದ ಅವರು, ಕೆಲವೆಡೆ ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬಂದಿವೆ. ಇದರ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು. ಅಂತಹದ್ದೇನಾದರೂ ಕಂಡು ಬಂದಲ್ಲಿ ವ್ಯಾಪಾರಿಗಳ ಪರವಾನಗಿ ರದ್ದುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಮುಂಗಾರು ಹಂಗಾಮಿನಲ್ಲಿ ರೈತರಿಗಾಗಿಯೇ ವಿಶೇಷ ಕಾರ್ಯಾಗಾರ ಏರ್ಪಡಿಸಿ, ಬೆಳೆಗಳ ಸಮಗ್ರ ನಿರ್ವಹಣೆ ಕುರಿತು ತಿಳಿಹೇಳುವ ಕೆಲಸ ಮಾಡಬೇಕು ಎಂದು ಹೇಳಿದರು.
ಕೃಷಿಕ ಸಮಾಜದ ಉಪಾಧ್ಯಕ್ಷರ ಅವಿರೋಧ ಆಯ್ಕೆ
ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷರನ್ನಾಗಿ ರಾಮಯ್ಯ ಪೂಜಾರಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ತಾಲೂಕಿನ ರೈತರಿಗೆ ಡಿಸಿಸಿ ಬ್ಯಾಂಕ್ ಮೂಲಕ ಹೆಚ್ಚಿನ ಸಾಲದ ಸೌಲಭ್ಯ ಒದಗಿಸಿದ ಕ್ಷೇತ್ರದ ಶಾಸಕರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ ಅವರನ್ನು ಅಭಿನಂದಿಸಲಾಯಿತು. ಸಹಾಯಕ ಕೃಷಿ ನಿರ್ದೇಶಕ ಎ.ವೈ.ಹಂಪಣ್ಣ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಡಾ| ನಾಗರೆಡ್ಡಿ ಪಾಟೀಲ, ಉಪಾಧ್ಯಕ್ಷ ರಾಮಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಣಪತರಾವ್ ಚಿಮ್ಮನಚೋಡಕರ್, ಸದಸ್ಯರಾದ ಶಂಭುರೆಡ್ಡಿ ನರಸಗೋಳ, ಸಿದ್ಧು ಕೋದಂಪುರ, ಬಸವರಾಜ ಮಾಲಿಪಾಟೀಲ, ತಮ್ಮಾರೆಡ್ಡಿ ಪಾಟೀಲ, ಬಸರೆಡ್ಡಿ, ಮಲ್ಲಿಕಾರ್ಜುನ ಸಾತನೂರ, ಕೃಷಿ ಅಧಿಕಾರಿಗಳಾದ ಅನಂತರೆಡ್ಡಿ, ಪ್ರಕಾಶ ರಾಠೊಡ, ಬಸವರಾಜ ಕೊಡಸಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.