![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 5, 2022, 6:55 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳು ಹಾಗೂ ನಾಲ್ಕು ರಾಜ್ಯ ಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ- ಚುನಾವಣೆಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಈ ಕ್ಷೇತ್ರಗಳಿಗೆ ಜೂ. 23ರಂದು ಮತದಾನ ನಡೆಯಲಿದೆ.ಉತ್ತರ ಪ್ರದೇಶದ ರಾಮ್ಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಘನಶ್ಯಾಮ್ ಲೋಧಿಯವರನ್ನು ಕಣಕ್ಕಿಳಿಸಲಾಗಿದ್ದರೆ, ಆಜಂಗಢ ಕ್ಷೇತ್ರಕ್ಕೆ ಭೋಜ್ಪುರಿ ಚಿತ್ರನಟ ಹಾಗೂ ರಾಜಕೀಯ ನೇತಾರ ದಿನೇಶ್ ಲಾಲ್ ಯಾದವ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ಇದೇ ವರ್ಷ ಜನವರಿಯಲ್ಲಿ ಘನಶ್ಯಾಮ್ ಲೋಧಿಯವರು ಸಮಾಜವಾದಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ನಖ್ವಿ ಗೆ ಕೊಕ್!: ಬಿಜೆಪಿಯಲ್ಲಿ ಅಲ್ಪಸಂಖ್ಯಾಕರ ನಾಯಕರೆಂದೇ ಗುರುತಿಸಿಕೊಂಡಿರುವ ಮುಖ್ತಾರ್ ಅಬ್ಬಾಸ್ ನಖ್ವಿಯವರಿಗೆ ಆಜಂಗಢ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತದೆಂದು ಭಾವಿಸಲಾಗಿತ್ತು. ಇತ್ತೀಚೆಗೆ ರಾಜ್ಯಸಭಾ ಸದಸ್ಯತ್ವಕ್ಕಾಗಿ ಬಿಜೆಪಿ ಕಣಕ್ಕಿಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಲಿ ರಾಜ್ಯಸಭಾ ಸದಸ್ಯ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು ಇರಲಿಲ್ಲ. ಹಾಗಾಗಿ, ಅವರನ್ನು ಆಜಂಗಢದ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಸಲಾಗುತ್ತದೆ ಎಂದು ಹೇಳಲಾಗಿತ್ತು.
ಸಾಹಾರಿಗೆ ಸ್ಪರ್ಧಿಸಲು ಅವಕಾಶ: ತ್ರಿಪುರಾದಲ್ಲಿ ಹಾಲಿ ಸಿಎಂ ಮಾಣಿಕ್ ಸಾಹಾ ಅವರನ್ನು ಬೊರಾಡ್ವಾಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಡಾ| ಅಶೋಕ್ ಅವರಿಗೆ ಅಗರ್ತಲಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಅಂತೆಯೇ, ಸ್ವಪ್ನಾ ದಾಸ್ ಪಾಲ್ಗೆ ಸುರ್ಮಾ ಕ್ಷೇತ್ರದಿಂದ, ಮಲಿನಾ ದೇಬರಥ್ ಅವರಿಗೆ ಜುಬಾರನಗರ್ನಿಂದ ಸ್ಪರ್ಧಿಸಲು ಅವಕಾಶ ನೀಡಲಾಗಿದೆ.
ಇತರೆಡೆ ಅಭ್ಯರ್ಥಿಗಳ ಘೋಷಣೆ: ಆಂಧ್ರ ಪ್ರದೇಶದಲ್ಲಿ ಗುಂಡ್ಲಪಲ್ಲಿ ಭರತ್ ಕುಮಾರ್ ಯಾದವ್ (ಆತ್ಮಾಕುರ್), ದಿಲ್ಲಿಯಲ್ಲಿ ರಾಜೇಶ್ ಭಾತಿ (ರಾಜಿಂದರ್ ನಗರ್), ಝಾರ್ಖಂಡ್ನಲ್ಲಿ ಗಂಗೋತ್ರಿ ಕುಜೂರ್ (ಮಂದಾರ್) ಅವರಿಗೆ ಟಿಕೆಟ್ ನೀಡಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.