ತರಗತಿ ಆರಂಭವಾದರೂ ಪಠ್ಯಪುಸ್ತಕ ಕೊರತೆ

ಪರಿಷ್ಕರಣೆ ಗೊಂದಲ-ಮುದ್ರಣ ಕಾಗದ ಕೊರತೆ ಹಿನ್ನೆಲೆ ; 8-9ನೇ ತರಗತಿಯ ಯಾವ ಪುಸ್ತಕಗಳೂ ಬಂದೇ ಇಲ್ಲ

Team Udayavani, Jun 6, 2022, 9:42 AM IST

1

ಹುಬ್ಬಳ್ಳಿ: ಶಾಲೆಗಳು ಆರಂಭಗೊಂಡು ದಿನಗಳು ಕಳೆಯುತ್ತಿದ್ದರೂ ಪುಸ್ತಕದ ಪರಿಷ್ಕರಣೆ ಗೊಂದಲ ತಣ್ಣಗಾಗುತ್ತಿಲ್ಲ. ತರಗತಿಗಳು ಆರಂಭಗೊಂಡ ಮಕ್ಕಳು ಪಾಠ ಕೇಳಬೇಕು, ಆದರೆ ಇದುವರೆಗೂ ಹಲವು ಪುಸ್ತಕಗಳ ಕೊರತೆ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದೆ.

ಪ್ರತಿ ವರ್ಷ ಶಾಲೆ ಆರಂಭಕ್ಕೂ ಮುನ್ನ ಅಥವಾ ಮೊದಲ ಒಂದು ವಾರದದಲ್ಲಿ ಎಲ್ಲ ಶಾಲೆಗಳಿಗೆ ಪುಸ್ತಕ ವಿತರಣೆ ಪೂರ್ಣಗೊಳಿಸಲಾಗುತ್ತಿತ್ತು. ಆದರೆ ಈ ವರ್ಷ ಹಲವು ಗೊಂದಲಗಳಿಂದ ಇದುವರೆಗೆ ಮಕ್ಕಳ ಕೈಗೆ ಎಲ್ಲ ಪುಸ್ತಕಗಳು ಸೇರಿಲ್ಲ. 1ರಿಂದ 10ನೇ ತರಗತಿ ಕನ್ನಡ ಮಾಧ್ಯಮ ಪುಸ್ತಕದ ಪರಿಷ್ಕರಣೆ ಗೊಂದಲ ಒಂದೆಡೆಯಾದರೆ, ಮತ್ತೂಂದೆಡೆ ಪುಸ್ತಕ ಮುದ್ರಣದ ಕಾಗದದ ಕೊರತೆ ಸಹ ಕಾರಣವಾಗಿದೆ.

ಶಾಲೆಗಳಿಗೆ 1ರಿಂದ 10ನೇ ತರಗತಿಯ ಕನ್ನಡ ಹಾಗೂ 6ರಿಂದ 10ನೇ ತರಗತಿ ಸಮಾಜ ವಿಜ್ಞಾನ, 7ರಿಂದ 9ನೇ ತರಗತಿ ತೃತೀಯ ಭಾಷೆ ಕನ್ನಡ ಪುಸ್ತಕ ಪರಿಷ್ಕರಣೆಯಾಗಿದೆ. ಆದರೆ 3ನೇ ತರಗತಿ ಪಠ್ಯದಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ. 10ನೇ ತರಗತಿ ಕನ್ನಡ ಹಾಗೂ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆಯಾಗಿದೆ. ಇನ್ನು 8-9ನೇ ತರಗತಿಯ ಯಾವ ಪುಸ್ತಕಗಳೂ ಬಂದಿಲ್ಲ.

ಶಹರದ ಬೇಡಿಕೆ: ಹುಬ್ಬಳ್ಳಿ ನಗರ ವ್ಯಾಪ್ತಿಯ ಶಾಲೆಗಳಿಗೆ ಇಲಾಖೆಯಿಂದ ಎಲ್ಲ ಶೀರ್ಷಿಕೆಗಳ ಪುಸ್ತಕಗಳು ಸೇರಿ ಉಚಿತವಾಗಿ ನೀಡಲು 3,37,654 ಪುಸ್ತಕಗಳು ಹಾಗೂ ಮಾರಾಟಕ್ಕೆ 2,24,975 ಪುಸ್ತಕಗಳು ಸೇರಿ ಒಟ್ಟು 5, 62,629 ಪುಸ್ತಕಗಳಿಗೆ ಬೇಡಿಕೆ ಸಲ್ಲಿಸಲಾಗಿತ್ತು. ಸದ್ಯ ಇಲಾಖೆಯಿಂದ ಉಚಿತವಾಗಿ ನೀಡಲು 1,96,528 ಮತ್ತು ಮಾರಾಟಕ್ಕೆ 1,10,552 ಪುಸ್ತಕಗಳು ಒಟ್ಟು 3,07,080 ಪುಸ್ತಕಗಳನ್ನು ಪೂರೈಕೆ ಮಾಡಲಾಗಿದೆ. ಈಗಾಗಲೇ ಶಹರ ವ್ಯಾಪ್ತಿಯ ಶಾಲೆಗಳಿಗೆ ಉಚಿತವಾಗಿ 1,40,129 ಮತ್ತು ಮಾರಾಟಕ್ಕೆ 1,08,089 ಪುಸ್ತಕಗಳನ್ನು ವಿತರಣೆ ಮಾಡಲಾಗಿದೆ.

ಶಹರ ವ್ಯಾಪ್ತಿಯಲ್ಲಿ ಒಟ್ಟು 335 ಶಾಲೆಗಳು ಬರುತ್ತಿದ್ದು, ಅದರಲ್ಲಿ 155 ಖಾಸಗಿ ಅನುದಾನ ರಹಿತ ಶಾಲೆಗಳಿದ್ದು, 84 ಅನುದಾನಿತ ಶಾಲೆಗಳು, 96 ಸರಕಾರಿ ಶಾಲೆಗಳು ಬರುತ್ತಿವೆ. ಸರಕಾರಿ ಶಾಲೆಗಳಿಗೆ ಬಂದಿರುವ ಎಲ್ಲ ಶೀರ್ಷಿಕೆಗಳ ಪುಸ್ತಕಗಳನ್ನು ನೀಡಲಾಗಿದ್ದು, ಇನ್ನು ಬರದೆ ಇರುವ ಪುಸ್ತಕಗಳ ಆಗಮನಕ್ಕೆ ಕಾಯಲಾಗುತ್ತಿದೆ.

ಈಗಾಗಲೇ ಶಹರ ಘಟಕದಿಂದ ಶೇ.65 ಶಾಲೆಗಳಿಗೆ ಪುಸ್ತಕ ವಿತರಣೆ ಮಾಡಲಾಗಿದ್ದು, ಜೂ.6ರಿಂದ 10ರ ವರೆಗೆ ಇನ್ನುಳಿದಿರುವ ಶಾಲೆಗಳಿಗೆ ಪುಸ್ತಕ ವಿತರಣೆ ಮಾಡಲಾಗುತ್ತಿದೆ. ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸುಮಾರು 80ಕ್ಕೂ ಹೆಚ್ಚು ಶಾಲೆಗಳು ಪುಸ್ತಕಗಳನ್ನು ಖರೀದಿಸಿಕೊಂಡು ಹೋಗಿದ್ದು, ಇನ್ನುಳಿದ ಶಾಲೆಗಳಿಗೆ ಪುಸ್ತಕಗಳ ಖರೀದಿ ಪ್ರಕ್ರಿಯೆ ನಡೆಯಬೇಕಿದೆ.

ಒಂದನೇ ಹಂತದಲ್ಲಿ ಶೇ.65 ಪುಸ್ತಕಗಳ ವಿತರಣೆ ಮಾಡಲಾಗಿದ್ದು, ಜೂ. 6ರಿಂದ ಎರಡನೇ ಹಂತದಲ್ಲಿ ಪುಸ್ತಕ ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಪರಿಷ್ಕರಣೆ ಮಾಡಲಾಗಿರುವ ಪುಸ್ತಕಗಳು ಸದ್ಯ ಇನ್ನು ಲಭ್ಯವಾಗಿಲ್ಲ. ಅವುಗಳು ಬಂದ ನಂತರ ಶಾಲೆಗಳಿಗೆ ವಿತರಣೆ ಮಾಡಲಾಗುತ್ತದೆ. ಎಂ.ಎಸ್‌. ಶಿವಳ್ಳಿಮಠ, ಪ್ರಭಾರಿ ಬಿಇಒ , -ಡಿ.ಎಫ್‌. ಈರಗಾರ, ಶಹರ ಶಿಕ್ಷಣ ಸಂಯೋಜಕ                               

 ಬಸವರಾಜ ಹೂಗಾರ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.