ನಿಮಗೆ ನಾಚಿಕೆ ಅಗೋದಿಲ್ವಾ?: ಆರ್ ಎಸ್ಎಸ್ ಮುಖಂಡರ ವಿರುದ್ಧ ವಿಶ್ವನಾಥ್ ಆಕ್ರೋಶ


Team Udayavani, Jun 7, 2022, 1:14 PM IST

h vishwanath

ಮೈಸೂರು: ಕರ್ನಾಟಕದ ಶಾಂತಿಯನ್ನು ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮೂಲಕ ಕದಡಲಾಗುತ್ತಿದೆ. ರಾಜ್ಯದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿಸಿರುವ ನಿಮಗೆ ನಾಚಿಕೆ ಅಗೋದಿಲ್ವಾ ಎಂದು ಆರ್ ಎಸ್ಎಸ್ ಮುಖಂಡರ ವಿರುದ್ಧ ಮಾಜಿ ಸಚಿವ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಕ್ತಾರರು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ನಾಯಕರು ಇದಕ್ಕೆ ಕಡಿವಾಣ ಹಾಕಬೇಕು. ಈ ಬಗ್ಗೆ ಆರ್ ಎಸ್ಎಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಬೇಕು. ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದನ್ನು ನಿಲ್ಲಿಸಿಯೆಂದು ಹೇಳಬೇಕು ಎಂದರು.

ಮಸೀದಿಗಳಿಗೆ ಸಂಬಂಧಿಸಿದಂತೆ ಇರುವ ವಿವಾದಗಳನ್ನು ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅವರ ಹೇಳಿಕೆಯ ಹಿಂದೆ ಒಳ್ಳೆಯ ಉದ್ದೇಶವಿದೆ. ಮೋಹನ್ ಭಾಗವತ್ ಹೇಳಿಕೆಯನ್ನು ಕಟ್ಟರ್ ಆರ್ ಎಸ್ಎಸ್ ವಾದಿಗಳು ಏಕೆ ಸ್ವಾಗತಿಸುತ್ತಿಲ್ಲ. ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಯಾಕೆ ತುಟಿ ಬಿಚ್ಚುತ್ತಿಲ್ಲ. ಹಾಗಾದರೆ ನೀವು ಮೋಹನ್ ಭಾಗವತ್ ಹೇಳಿಕೆಯನ್ನು ವಿರೋಧಿಸುತ್ತೀರಾ? ಭಾಗವತ್ ಕುಣಿಯುವುದನ್ನು ನಿಲ್ಲಿಸಿ ಎಂದರೂ ನೀವು ಏಕೆ ಕುಣಿಯುತ್ತಿದೀರಾ? ಬೆಂಕಿ ಹಚ್ಚುವುದನ್ನು ನಿಲ್ಲಿಸಿ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಆದರೂ ನೀವು ಬೆಂಕಿ ಹಚ್ಚುವುದನ್ನು ನಿಲ್ಲಿಸುತ್ತಿಲ್ಲ ಎಂದರು.

ಇದನ್ನೂ ಓದಿ:ಮತ್ತೆ ಮೈತ್ರಿ?: ಕಾಂಗ್ರೆಸ್‌ಗೆ ಓಪನ್ ಆಫರ್ ಇಟ್ಟ ಎಚ್.ಡಿ.ಕುಮಾರಸ್ವಾಮಿ

ಸದ್ಯಕ್ಕೆ ರಾಜ್ಯದ ಪರಿಸ್ಥಿತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲಿ ಆಡಳಿತದಲ್ಲಿರುವುದು ಬಿಜೆಪಿ ಸರ್ಕಾರವೇ ಹೊರತು, ಆರ್ ಎಸ್ಎಸ್ ಸರ್ಕಾರವಲ್ಲ. ನಾವು 17 ಮಂದಿ ಬಿಜೆಪಿ ಸರ್ಕಾರ ಬೆಂಬಲಿಸಿ ಬಂದವರು. ನಾವು ಆರ್ ಎಸ್ ಎಸ್ ಬೆಂಬಲಿಸಿ ಬಂದವರಲ್ಲ ಎಂದು ಎಂಎಲ್ ಸಿ ವಿಶ್ವನಾಥ್ ಹೇಳಿದರು.

ಪ್ರತಾಪ್ ಸಿಂಹ ಓರ್ವ ಅಯೋಗ್ಯ. ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು. ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಪ್ರಾಕ್ಟೀಸ್ ಮಾಡಿದ್ದೇವೆ. ಬಾಯಿಗೆ ಬಂದಂಗೆ ಮಾತನಾಡ್ತಾನೆ. ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಎನ್ನುತ್ತಾನೆ. ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ. 2014 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ನಾನು ಸೋಲುತ್ತಿರಲಿಲ್ಲ ಎಂದರು.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.