ರಾಜ್ಯಸಭೆಯಲ್ಲಿ ಕರಾವಳಿಗರ ಪ್ರಾತಿನಿಧ್ಯಕ್ಕೆ ತೆರೆ


Team Udayavani, Jun 8, 2022, 7:30 AM IST

ರಾಜ್ಯಸಭೆಯಲ್ಲಿ ಕರಾವಳಿಗರ ಪ್ರಾತಿನಿಧ್ಯಕ್ಕೆ ತೆರೆ

ಮಂಗಳೂರು: ಸರಿಯಾಗಿ 28 ವರ್ಷಗಳ ಬಳಿಕ ರಾಜ್ಯ ಸಭೆಯಲ್ಲಿ ಕರ್ನಾಟಕ ಕರಾವಳಿಯ ಪ್ರತಿನಿಧಿಯೇ ಇಲ್ಲದಂತಾಗಿದೆ. 1994ರಿಂದ ಈ ವರೆಗೆ ನಿರಂತರವಾಗಿ ಕರಾವಳಿಗರು ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದರು.

ಕರಾವಳಿಯ ಆಸ್ಕರ್‌ ಫೆರ್ನಾಂಡಿಸ್‌ ಸೇರಿದಂತೆ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಾಲ್ವರು ಸದಸ್ಯರ ಅವಧಿ ಜೂ. 10ಕ್ಕೆ ಕೊನೆಯಾಗಲಿದ್ದು, ಆ ಸ್ಥಾನಗಳಿಗೆ ಜೂ. 10ರಂದು ಚುನಾವಣೆ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳನ್ನು ಈಗಾಗಲೇ ಕಣಕ್ಕಿಳಿಸಿವೆ. ಇದರಲ್ಲಿ ಕರಾವಳಿಗರಿಗೆ ಅವಕಾಶ ಸಿಕ್ಕಿಲ್ಲ. ಆಸ್ಕರ್‌ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದು, 2016ರ ಜೂ. 11ರಂದು ಕರ್ನಾಟಕ ವಿಧಾನಸಭೆಯಿಂದ ಕಾಂಗ್ರೆಸ್‌ ಹಾಲಿ ಅಭ್ಯರ್ಥಿ ಜೈರಾಂ ರಮೇಶ್‌ ಜತೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಆಸ್ಕರ್‌ ನಿಧನದ ಹಿನ್ನೆಲೆಯಲ್ಲಿ ಅವರ ಸ್ಥಾನ ಕರಾವಳಿಯ ನಾಯಕರಿಗೆ ಲಭಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಿಕ್ಕಿಲ್ಲ. ಹಾಗಾಗಿ ರಾಜ್ಯಸಭೆಯಲ್ಲಿ ಕರ್ನಾಟಕ ಕರಾವಳಿಗರ ಧ್ವನಿ ಮೊಳಗದು.

ಮದ್ರಾಸ್‌ ಅಸೆಂಬ್ಲಿಯಿಂದ ಆರಂಭ
ಕರಾವ‌ಳಿಗರಿಗೆ ರಾಜ್ಯಸಭಾ ಸದಸ್ಯ ಸ್ಥಾನದ ಇತಿಹಾಸ ಮದ್ರಾಸ್‌ ಆಸೆಂಬ್ಲಿಯಿಂದ ಪ್ರಾರಂಭ ವಾಗಿತ್ತು. ಬಿ.ವಿ. ಕಕ್ಕಿಲ್ಲಾಯ ಅವರು ಮದ್ರಾಸ್‌ ಅಸೆಂಬ್ಲಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆ ಬಳಿಕ 1957-60 ರ ವರೆಗೆ ಬೆನಗಲ್‌ ಶಿವರಾವ್‌, 1952, 1954ರಲ್ಲಿ ಕೆ.ಎಸ್‌. ಹೆಗ್ಡೆ, 1972ರಿಂದ 1977ರ ವರೆಗೆ ಟಿ.ಎ. ಪೈ ಸದಸ್ಯರಾಗಿದ್ದರು. 1980ರಲ್ಲಿ ಬಿ. ಇಬ್ರಾಹಿಂಗೆ ಅವಕಾಶ ಲಭಿಸಿತ್ತು. 1994ರಿಂದ 2000 ಹಾಗೂ 2002ರಿಂದ 2008ರ ವರೆಗೆ ಜನಾರ್ದನ ಪೂಜಾರಿ ಪ್ರತಿನಿಧಿಸಿದ್ದರು. ಆಸ್ಕರ್‌ ಫೆರ್ನಾಂಡಿಸ್‌ 1998ರಿಂದ 2021ರ ವರೆಗೆ ನಿರಂತರವಾಗಿ 4 ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದರು.

ಈ ಬಾರಿ ಕಾಂಗ್ರೆಸ್‌ನಲ್ಲಿ ರಾಜ್ಯಸಭೆಗೆ ಅಭ್ಯರ್ಥಿ ಯಾಗಿ ಕರಾವಳಿಯ ನಾಯಕರೊಬ್ಬರ ಹೆಸರು ಕೇಳಿಬಂದಿತ್ತು. ಕಳೆದ ಬಾರಿ ಕಾಂಗ್ರೆಸ್‌ ವಿಧಾನಸಭೆಯಲ್ಲಿ ಹೆಚ್ಚಿನ ಸದಸ್ಯ ಬಲ ಹೊಂದಿದ್ದ ಹಿನ್ನೆಲೆಯಲ್ಲಿ ಎರಡು ಸದಸ್ಯತ್ವ ಅವಕಾಶ ದಿಂದಾಗಿ ಆಸ್ಕರ್‌ ಮತ್ತು ಜೈರಾಂ ರಮೇಶ್‌ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸಿಗೆ ಸ್ವಂತ ಬಲದಿಂದ ಒಂದು ಸ್ಥಾನ ಮಾತ್ರ ಗೆಲ್ಲಲು ಮಾತ್ರ ಅವಕಾಶವಿದೆ. ಹಾಗಾಗಿ ಜೈರಾಂ ರಮೇಶ್‌ ಅವರನ್ನು ಕಣಕ್ಕಿಳಿಸಿದೆ. ಎರಡನೇ ಸ್ಥಾನಕ್ಕೆ ಮನ್ಸೂರ್‌ ಆಲಿ ಖಾನ್‌ ಅವರನ್ನು ಆಯ್ಕೆ ಮಾಡಿದೆ.

ಕರ್ನಾಟಕದಲ್ಲಿ ಕರಾವಳಿಗರಿಗೆ ಈ ಬಾರಿ ಪ್ರಾತಿನಿಧ್ಯ ತಪ್ಪಿದರೂ ಬಿಹಾರದಲ್ಲಿ ಕುಂದಾಪುರದ ಸಳ್ವಾಡಿಯ ಅನಿಲ್‌ ಪ್ರಸಾದ್‌ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ. ಆಸ್ಕರ್‌ ಬಳಿಕ ಉಡುಪಿ ಜಿಲ್ಲೆಯವರೇ ಆಗಿರುವ ಅನಿಲ್‌ ಹೆಗ್ಡೆ ರಾಜ್ಯಸಭಾ ಸದಸ್ಯರಾಗುತ್ತಿರುವುದು ಗಮನಾರ್ಹ. ಹಿಂದೆ ಜಾರ್ಜ್‌ ಫೆರ್ನಾಂಡಿಸ್‌ ಬಿಹಾರದಿಂದ 9 ಬಾರಿ ಸಂಸದರಾಗಿದ್ದರು.

ಸಚಿವ ಸ್ಥಾನ
ಕರಾವಳಿಯ ನಾಯಕರು ರಾಜ್ಯಸಭಾ ಸದಸ್ಯರಾಗಿದ್ದಾಗ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಟಿ.ಎ. ಪೈ ಅವರು ರಾಜ್ಯಸಭಾ ಸದಸ್ಯರಾಗಿದ್ದ ಅವಧಿಯಲ್ಲಿ ಇಂದಿರಾ ಗಾಂಧಿಯವರ ಸರಕಾರದಲ್ಲಿ ರೈಲ್ವೇ, ಬೃಹತ್‌ ಕೈಗಾರಿಕೆ, ಉಕ್ಕು ಮತ್ತು ಗಣಿ ಖಾತೆಗಳ ಸಚಿವರಾಗಿದ್ದರು. ಆಸ್ಕರ್‌ ಫೆರ್ನಾಂಡಿಸ್‌ ಯುಪಿಎ ಸರಕಾರದಲ್ಲಿ ಯೋಜನಾನುಷ್ಠಾನ, ಕಾರ್ಮಿಕ ಇಲಾಖೆ, ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾಗಿದ್ದರು.

– ಕೇಶವ ಕುಂದರ್‌

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.