ಮನೆಗೆ ಬಿದ್ದ ಬೆಂಕಿ ನಂದಿಸಲು ಹೋಗಿದ್ದಾತ ಚಿನ್ನಾಭರಣ ಎಗರಿಸಿದ್ದ
Team Udayavani, Jun 8, 2022, 11:15 PM IST
ಉಪ್ಪಿನಂಗಡಿ : ಕಳೆದ ಮೇ 16ರಂದು ಮನೆಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ಮನೆಯ ಕಪಾಟಿನಲ್ಲಿದ್ದ 2.50 ಲಕ್ಷರೂ ಮೊತ್ತದ ಚಿನ್ನಾಭರಣ ಕಳವಿಗೀಡಾದ ಕೃತ್ಯಕ್ಕೆ ಸಂಬಂಧಿಸಿ ಕಳವು ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾ| ಕಣಿಯೂರು ಗ್ರಾಮದ ಮಲೆಂಗಲ್ನ ಆನಂದ ಮೂಲ್ಯ ಅವರ ಮನೆಗೆ ಬೆಂಕಿ ತಗಲಿದ್ದು, ಸ್ಥಳೀಯರು ಸಕಾಲಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು. ಆದರೆ ಆ ವೇಳೆಗಾಗಲೇ ಮನೆಯಲ್ಲಿದ್ದ ಬಟ್ಟೆ ಬರೆ, ಕೆಮರಾದ ಪರಿಕರಗಳು ಸುಟ್ಟು ಹೋಗಿದ್ದು, ಕಪಾಟಿನಲ್ಲಿದ್ದ ಚಿನ್ನ ಇಡುವ ಬಾಕ್ಸ್ ಮತ್ತು ದಾಖಲೆ ಪತ್ರಗಳು ಯಥಾ ಸ್ಥಿತಿಯಲ್ಲಿದ್ದವು. ಅನಂತರ ವಸ್ತುಗಳನ್ನು ಒಪ್ಪವಾಗಿ ಜೋಡಿಸಿ ಇಡುವಾಗ ಚಿನ್ನ ಇಡುವ ಬಾಕ್ಸ್ನೊಳಗಿದ್ದ ವಿವಿಧ ಆಭರಣಗಳು ಸೇರಿದಂತೆ ಒಟ್ಟು 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವು ಕಳವಾಗಿರುವುದು ಕಂಡುಬಂದಿತ್ತು.
ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯ ಬಾರ್ ಉದ್ಯೋಗಿ ಶಿವಪ್ರಸಾದ್ (38) ನನ್ನು ವಿಚಾರಣೆ ನಡೆಸಿದಾಗ, ತಾನು ಚಿನ್ನಾಭರಣವನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದ. ಪೊಲೀಸರು ಆಭರಣಗಳನ್ನು ವಶಪಡಿಸಿ ಕೊಂಡಿದ್ದಾರೆ.
ಬೆಂಕಿ ನಂದಿಸಲು ಬಂದಾಗ ಮನೆಯೊಳಗೆ ಚಿನ್ನಾಭರಣದ ಪೆಟ್ಟಿಗೆ ನೋಡಿ ಅದನ್ನು ಎಗರಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.