![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 9, 2022, 2:40 PM IST
ಆಳಂದ: ಸರ್ಕಾರಿ ಮತ್ತು ಅನುದಾನಿತ 1ರಿಂದ 8ನೇ ತರಗತಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರಕ್ಕೆ ಎರಡು ಬಾರಿ ಕಡ್ಡಾಯವಾಗಿ ಮಕ್ಕಳ ಬೇಡಿಕೆಯಂತೆ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ ತಾಲೂಕಿನ ಶಾಲಾ ಮುಖ್ಯಸ್ಥರಿಗೆ ಸೂಚಿಸಿದರು.
ಪಟ್ಟಣ ಹೊರವಲಯದ ಸಂಗೋಳಗಿ ಜಿ. ಪುನರ್ವಸತಿ ಕೇಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದೊಂದಿಗೆ ವಾರಕ್ಕೆ ಎರಡು ಬಾರಿ ಮೊಟ್ಟೆ, ಬಾಳೆಹಣ್ಣು, ಚಿಕ್ಕೆ ವಿತರಿಸುವ ಸಂದರ್ಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬಿಸಿಯೂಟ ಯೋಜನೆ ಆರಂಭವಾಗಿದ್ದು, ಈ ಪೈಕಿ ಬುಧವಾರದಿಂದ ವಾರಕ್ಕೆ ಎರಡು ಬಾರಿ 1ರಿಂದ 8ನೇ ತರಗತಿ ಮಕ್ಕಳಿಗೆ ಮೊಟ್ಟೆ, ಚಿಕ್ಕೆ, ಬಾಳೆಹಣ್ಣು ವಿತರಣೆಯನ್ನು ಎಲ್ಲ ಶಾಲೆಗಳಲ್ಲಿಯೂ ಆರಂಭಿಸಿ, ಮಕ್ಕಳ ಬೇಡಿಕೆಗೆ ಅನುಸಾರವಾಗಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ಹೀಗೆ ಒಂದನ್ನು ಬಿಸಿಯೂಟದೊಂದಿಗೆ ಕಡ್ಡಾಯವಾಗಿ ನೀಡಬೇಕು ಎಂದು ಸಲಹೆ ನೀಡಿದರು.
ಆಯಾ ಶಾಲೆಗಳ ಮುಖ್ಯಸ್ಥರು ಮಕ್ಕಳಿಗೆ ಸರ್ಕಾರ ನೀಡುವ ಎಲ್ಲ ಸೌಲಭ್ಯಗಳನ್ನು ಕಡ್ಡಾಯವಾಗಿ ಸಕಾಲಕ್ಕೆ ಪೂರೈಸಲು ಹಿಂದೇಟು ಹಾಕಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಸಮಯಕ್ಕೆ ಶಾಲೆಗೆ ಹೋಗಿ ಪಾಠ ಮಾಡುವುದನ್ನು ರೂಡಿಸಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಹೆಚ್ಚಿನ ನಿಗಾವಹಿಸಬೇಕು. ಇಲ್ಲದಿದ್ದರೆ ಮೇಲಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈಗಿನಿಂದಲೇ ಶಾಲೆಗಳ ಮುಖ್ಯಸ್ಥರು ಸರಿಯಾಗಿ ಕರ್ತವ್ಯ ನಿರ್ವಹಿಸಿ, ತಾಲೂಕಿನ ಶೈಕ್ಷಣಿಗ ಸಾಧನೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಸಮನ್ವಯಾಧಿಕಾರಿ ಬಸವರಾಜ ದೊಡ್ಡಮನಿ, ಶಾಲೆ ಮುಖ್ಯ ಶಿಕ್ಷಕ ವಿಜಯ ರೆಡ್ಡಿ, ಕೋರಳ್ಳಿ ಸಿಆರ್ಪಿ ಅಂಬರಾಯ ಕಾಂಬಳೆ, ಜಿಡಗಾ ಸಿಆರ್ಪಿ ಸೈಫನ್ ಡಾಂಗೆ, ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.