13 ರಂದು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ

ಅಧಿಕಾರಿಗಳು ಗಡುವು ನೀಡಿದರೂ ಕ್ಯಾರೇ ಎನ್ನದ ಗುತ್ತಿಗೆದಾರರು: ಗಂಗಾವಳಿ ನದಿ ತಟದ ಜನರ ಆರೋಪ

Team Udayavani, Jun 9, 2022, 3:31 PM IST

22

ಅಂಕೋಲಾ: ಮಂಜಗುಣಿ-ಗಂಗಾವಳಿ ನಡುವಿನ ಸೇತುವೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣು ತೆರವುಗೊಳಿಸುವಂತೆ ನಾಗರಿಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಉದಯ ಕುಂಬಾರ, ಪಿಐ ಸಂತೋಷ ಶೆಟ್ಟಿ ತಕ್ಷಣ ಈ ಮಣ್ಣನ್ನು ತೆರವುಗೊಳಿಸುವಂತೆ ಇಂಜಿನಿಯರ್‌ಗಳಿಗೆ ಎಚ್ಚರಿಸಿದ್ದರು. ಆದಾಗ್ಯೂ ಇಲ್ಲಿ ಯಾವೊಂದೂ ಕೆಲಸ ನಡೆದಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆ ಮಂಜಗುಣಿ- ಗಂಗಾವಳಿ ನಡುವಿನ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಇದನ್ನು ಗುತ್ತಿಗೆ ಪಡೆದ ಡಿಆರ್‌ಎನ್‌ ಇನ್ಫ್ರಸ್ಟ್ರಕ್ಚರ್‌ ಕಂಪನಿಯವರು ಮಾತ್ರ ಆಮೆಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯಾವಾಗ ಇಲ್ಲಿ ಕೆಲಸ ನಡೆಯಲು ಆರಂಭವಾಗಿತ್ತೋ ಮಳೆಗಾಲದಲ್ಲಿ ಗಂಗಾವಳಿ ನದಿಗೆ ನೆರೆ ಬರಲು ಕಾರಣವಾಗಿತ್ತು. ಇಷ್ಟೆಲ್ಲ ತಿಳಿದಿದ್ದರೂ ಕೂಡ ಜಿಲ್ಲಾಡಳಿತ ನಿದ್ದೆ ಮಂಪರಿನಲ್ಲಿದ್ದಂತಿದೆ ಎಂದೂ ದೂರಲಾಗಿದೆ.

ಗಂಗಾವಳಿ ನದಿಗೆ ನೆರೆ ಉಂಟಾಗಿದ್ದರಿಂದ 2 ತೂಗು ಸೇತುವೆ, 1 ಸೇತುವೆ ಸಂಪೂರ್ಣ ನಾಶವಾಗಿತ್ತು. ಸುಮಾರು 10 ಕೋಟಿ ರೂ.ಗೂ ಅಧಿಕ ಹಾನಿ ಉಂಟಾಗಿತ್ತು. ಆದರೆ ಮಳೆಗಾಲ ಸಮೀಪಿಸುತ್ತಿದ್ದಂತೆಯೇ ಕಾಳಜಿ ಕೇಂದ್ರಕ್ಕೆ ನೋಡಲ್‌ ಅಧಿಕಾರಿಗಳನ್ನು ನೇಮಿಸಿದ್ದಾರೆ. ಆದರೆ ಈ ಎಲ್ಲಾ ಕೃತಕ ನೆರೆಗೆ ಕಾರಣವಾಗಿರುವ ಮಂಜಗುಣಿ ಸೇತುವೆ ನಿರ್ಮಾಣಕ್ಕೆ ಹಾಕಿದ್ದ ಮಣ್ಣನ್ನು ತೆಗೆಸಲು ಜಿಲ್ಲಾಡಳಿತವಾಗಲಿ, ತಾಲೂಕು ಆಡಳಿತವಾಗಲಿ ಅಷ್ಟಾಗಿ ಗಂಭೀರವಾಗಿ ಪರಿಗಣಿಸಿದಂತಿಲ್ಲ. ಇನ್ನು ಕಂಪನಿಯವರು ಕೂಡ ಈ ಅಧಿಕಾರಿಗಳಿಗೆ ಕ್ಯಾರೇ ಎನ್ನುತ್ತಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ.

13 ರಂದು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ

ತಹಶೀಲ್ದಾರ್‌ ಉದಯ ಕುಂಬಾರ ಸ್ಥಳಕ್ಕೆ ಆಗಮಿಸಿ ತಕ್ಷಣ ಮಂಜಗುಣಿ ಭಾಗದಲ್ಲಿರುವ ಅಲ್ಪ ಪ್ರಮಾಣದ ಮಣ್ಣನ್ನು ತೆರವುಗೊಳಿಸಿ ಹಾಗೂ ಗಂಗಾವಳಿ ಭಾಗದಲ್ಲಿ ಮೂರು ಹಿಟಾಚಿ ಹಾಕಿ ತೆಗೆಸಿ ನಂತರ ಬಾರ್ಜ್‌ ಮೂಲಕ ನದಿಯಾಳದಲ್ಲಿರುವ ಮಣ್ಣನ್ನು ಸಂಪೂರ್ಣ ತೆಗೆಯಬೇಕು ಎಂದು ಸ್ಥಳದಲ್ಲಿದ್ದ ಸೈಟ್‌ ಇಂಜಿನಿಯರ್‌ ರಾಘವೇಂದ್ರ ಅವರಿಗೆ ಎಚ್ಚರಿಕೆ ನೀಡಿದ್ದರು. ಇಷ್ಟಾಗಿಯೂ ಮಂಜಗುಣಿ ಭಾಗದಲ್ಲಿ ಮಣ್ಣನ್ನು ಇನ್ನುವರೆಗೂ ತೆಗೆಯದಿರುವುದು ಅವರ ನಿರ್ಲಕ್ಷ್ಯ ಧೋರಣೆಗೆ ಕೈಗನ್ನಡಿಯಂತಾಗಿದೆ.

ಕೃತಕ ನೆರೆಗೆ ಕಾರಣವಾಗಿರುವ ಮಂಜಗುಣಿ- ಗಂಗಾವಳಿ ಸೇತುವೆ ನಿರ್ಮಾಣಕ್ಕೆ ಹಾಕಲಾದ ಮಣ್ಣು ತೆರವುಗೊಳಿಸುವಂತೆ ತಹಶೀಲ್ದಾರರು ಆದೇಶಿಸಿದ್ದರೂ ಕೂಡ ಇನ್ನುವರೆಗೂ ಕ್ರಮ ಕೈಗೊಳ್ಳದಿರುವುದು ನಿಜಕ್ಕೂ ವಿಪರ್ಯಾಸ. ಇದು ಹೀಗೇ ಮುಂದುವರೆದಲ್ಲಿ ಜೂ.13 ರಂದು ತಹಶೀಲ್ದಾರ್‌ ಕಚೇರಿ ಎದುರು ಸಮಸ್ತ ಗಂಗಾವಳಿ ನದಿ ತಟದ ಜನರು ಪ್ರತಿಭಟನೆ ನಡೆಸಲಿದ್ದೇವೆ. –ರಮೇಶ ಗೌಡ, ಶಿರೂರು,ಗ್ರಾ.ಪಂ. ಮಾಜಿ ಸದಸ್ಯ

ಅಧಿಕಾರಿಗಳು ಗಡುವು ನೀಡಿದರೂ ಕೂಡ ಗುತ್ತಿಗೆ ಪಡೆದ ಕಂಪನಿಯವರು ಅದನ್ನು ಪಾಲಿಸುತ್ತಿಲ್ಲ. ಕಳೆದ ಮೂರು ವರ್ಷಗಳಲ್ಲಿಯೇ ಸಾಕಷ್ಟು ಅನಾಹುತವನ್ನು ಅನುಭವಿಸಿದ್ದೇವೆ. ಆದರೂ ಕೂಡ ವೈಜ್ಞಾನಿಕವಾಗಿ ಕಾರಣವನ್ನು ಹುಡುಕಿ ಅದನ್ನು ಸರಿಪಡಿಸುವ ವಿಚಾರ ಅಧಿಕಾರಿಗಳಿಗೆ ಇಲ್ಲದಿರುವುದು ಇನ್ನೊಂದು ದುರಂತ. ಈಗಲಾದರೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ. –ನಾಗರಾಜ ಮಂಜಗುಣಿ, ಸ್ಥಳೀಯರು

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.