ಜುಲೈ ಕೊನೇ ವಾರದಲ್ಲಿ ಮೈಷುಗರ್‌ ಆರಂಭ ಖಚಿತ

ಪುಣೆ ಹಾಗೂ ಹೈದರಾಬಾದ್‌ನ ಎರಡು ಕಂಪನಿಗಳಿಂದ ಈಗಾಗಲೇ ಯಂತ್ರಗಳ ದುರಸ್ತಿ ಭರದಿಂದ ಸಾಗಿದೆ

Team Udayavani, Jun 9, 2022, 6:17 PM IST

ಜುಲೈ ಕೊನೇ ವಾರದಲ್ಲಿ ಮೈಷುಗರ್‌ ಆರಂಭ ಖಚಿತ

ಮಂಡ್ಯ: ಜುಲೈ ಕೊನೇ ವಾರದಲ್ಲಿ ಕಾರ್ಖಾನೆ ಆರಂಭ ಮಾಡುವುದು ಖಚಿತವಾಗಿದ್ದು, ಯಂತ್ರಗಳ ದುರಸ್ತಿ ಕಾರ್ಯ ಭರದಿಂದ ಸಾಗಿದೆ ಎಂದು ಮೈಷುಗರ್‌ ವ್ಯವಸ್ಥಾಪಕ ಪಾಟೀಲ ಅಪ್ಪಾಸಾಹೇಬ್‌ ಭರವಸೆ ನೀಡಿದರು. ನಗರದ ಮೈಷುಗರ್‌ ಕಾರ್ಖಾನೆ ದುರಸ್ತಿ ಕಾರ್ಯ ಪರಿಶೀಲಿಸಲು ಆಗಮಿಸಿದ್ದ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

15 ಕೋಟಿ ರೂ. ಬಿಡುಗಡೆ: ಮೊದಲ ಹಂತದಲ್ಲಿ ಸರ್ಕಾರದಿಂದ ಈಗಾಗಲೇ 15 ಕೋಟಿ ರೂ. ಬಿಡುಗಡೆಯಾಗಿದೆ. ಅದರಲ್ಲಿ 3.5 ಕೋಟಿ ರೂ. ಖಾತೆಗೆ ಜಮೆ ಆಗಿದ್ದು, ಉಳಿದ ಹಣ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ 2.80 ಕೋಟಿ ರೂ. ದುರಸ್ತಿ ಕಾರ್ಯಗಳಿಗೆ ನೀಡಲಾಗಿದೆ.

ಇನ್ನು ಶೇ.20 ಹಣವನ್ನು 2ನೇ ಕಂತಿನಲ್ಲಿ ನೀಡಬೇಕಾಗಿತ್ತು. ಅದಕ್ಕಾಗಿ 5 ಕೋಟಿ ರೂ. ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಜುಲೈ ತಿಂಗಳಲ್ಲಿ ಪ್ರಾಯೋಗಿಕವಾಗಿ ಕಾರ್ಖಾನೆ ಯಂತ್ರಗಳ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

5 ಲಕ್ಷ ಟನ್‌ ಕಬ್ಬು ಅರೆಯುವ ಗುರಿ: ಪ್ರಸ್ತುತ ಸಾಲಿನಲ್ಲಿ 5 ಲಕ್ಷ ಟನ್‌ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಮೈಷುಗರ್‌ ವ್ಯಾಪ್ತಿಯಲ್ಲಿ ಸುಮಾರು 7ರಿಂದ 8 ಟನ್‌ ಕಬ್ಬು ಲಭ್ಯವಿದೆ. ಈಗಾಗಲೇ 1.50 ಲಕ್ಷ ಟನ್‌ ಕಬ್ಬನ್ನು ರೈತರಿಂದ ಒಪ್ಪಿಗೆ ಮಾಡಿಕೊಳ್ಳಲಾಗಿದೆ. ಪ್ರತಿದಿನ 4500 ಟನ್‌ ಕಬ್ಬು ಅರೆಯಲಿದ್ದು, ಪ್ರತಿ ತಿಂಗಳು 1 ಲಕ್ಷ ಟನ್‌ ಕಬ್ಬು ಅರೆಯುವ ಗುರಿ ಇದೆ. ಅದರಂತೆ ಫೆಬ್ರವರಿ ತಿಂಗಳವರೆಗೂ ಕಾರ್ಖಾನೆ ನಡೆಯಲಿದೆ ಎಂದು ವಿವರಿಸಿದರು.

ಖಾಸಗಿ ಕಾರ್ಖಾನೆಗಳ ಕಚೇರಿ ತೆರವಿಗೆ ಸೂಚನೆ: ಖಾಸಗಿ ಕಾರ್ಖಾನೆಗಳು ಕಚೇರಿ ತೆರೆದು ಕಬ್ಬು ಒಪ್ಪಿಗೆ ಮಾಡಿಕೊಳ್ಳಲು ಗ್ಯಾಂಗ್‌ಮೆನ್‌ ನೇಮಕ ಮಾಡಿದ್ದವು. ಈ ಬಗ್ಗೆ ಜಿಲ್ಲಾ ಧಿಕಾರಿಗೆ ದೂರು ನೀಡಿದ್ದೆವು. ಜಿಲ್ಲಾಧಿಕಾರಿ ಖಾಸಗಿ ಕಾರ್ಖಾನೆಗಳು ಕಚೇರಿ ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಇದರಿಂದ ನಮ್ಮ ಕಬ್ಬು ಕಾರ್ಖಾನೆಗೆ ಸಿಗಲಿದೆ. 15ರಿಂದ 20 ಮಂದಿ ಗ್ಯಾಂಗ್‌ಮೆನ್‌ ನೇಮಕ ಮಾಡಿ ಕೊಳ್ಳಲಾಗಿದ್ದು, ಒಪ್ಪಿಗೆ ಕಾರ್ಯ ಮುಂದುವರಿದಿದೆ. ಬೇಗ
ಆರಂಭಗೊಂಡರೆ ಇನ್ನುಳಿದ 2 ಲಕ್ಷ ಟನ್‌ ಕಬ್ಬು ಅರೆಯಲಿದ್ದು, ಸಂಪೂರ್ಣ ಗುರಿ ಮುಟ್ಟಲು ಸಾಧ್ಯವಾಗಲಿದೆ ಎಂದರು.

200 ಮಂದಿ ಕಾರ್ಮಿಕರು: ಪುಣೆ ಹಾಗೂ ಹೈದರಾಬಾದ್‌ನ ಎರಡು ಕಂಪನಿಗಳಿಂದ ಈಗಾಗಲೇ ಯಂತ್ರಗಳ ದುರಸ್ತಿ ಭರದಿಂದ ಸಾಗಿದೆ. 200 ಮಂದಿ ಕಾರ್ಮಿಕರ ಅಗತ್ಯವಿದೆ. ಈಗಾಗಲೇ 100 ಮಂದಿ ಕಾರ್ಮಿಕರು ಆಗಮಿಸಿದ್ದು, ಶನಿವಾರದೊಳಗೆ ಇನ್ನು ಳಿದ 100 ಮಂದಿ ಕಾರ್ಮಿಕರು ಆಗಮಿಸಲಿದ್ದಾರೆ. ಎಲ್ಲಾ ಕಾರ್ಮಿಕರಿಗೂ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಬಾಕಿ ತೀರುವಳಿಗೆ ಸೂಚನೆ: ಸರ್ಕಾರ ಘೋಷಣೆ ಮಾಡಿರುವ 50 ಕೋಟಿ ರೂ. ಅನುದಾನದಲ್ಲಿ ಕಾರ್ಖಾ ನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರಲ್ಲಿ ವಿಆರ್‌ ಎಸ್‌ ತೆಗೆದುಕೊಂಡ ನೌಕರರಿಗೆ ಬಾಕಿ ಉಳಿದಿರುವ 3.9 ಕೋಟಿ ರೂ. ತೀರುವಳಿ ಮಾಡಬೇಕಾಗಿದೆ. ಇನ್ನುಳಿದ ಅನುದಾನದಲ್ಲಿ ಕಾರ್ಖಾನೆ ಆರಂಭಿಸುವ ಸರ್ಕಾರದ ಆದೇಶದ ಇದೆ ಎಂದು ತಿಳಿಸಿದರು.

ಸಭೆಯಲ್ಲಿ ಮೈಷುಗರ್‌ ಕಬ್ಬು ಒಪ್ಪಿಗೆದಾರರ ಸಂಘದ ಅಧ್ಯಕ್ಷ ಎಸ್‌.ಕೃಷ್ಣಶಂಭೂನಹಳ್ಳಿ, ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್‌, ರೈತ ಮುಖಂಡ ಮುದ್ದೇಗೌಡ, ಕನ್ನಡ ಸೇನೆ ಸಂಘಟನೆ ಮಂಜುನಾಥ್‌, ಸಿಐಟಿಯು ಸಿ.ಕುಮಾರಿ, ಕೃಷಿ ಪ್ರಾಂತ ರೈತಸಂಘದ ಟಿ.ಎಲ್‌.ಕೃಷ್ಣೇಗೌಡ, ಟಿ.ಯಶವಂತ, ಕೃಷಿ ಕೂಲಿಕಾರರ ಸಂಘದ ಪುಟ್ಟಮಾಧು, ದಸಂಸ ಮುಖಂಡ ಎಂ.ವಿ.ಕೃಷ್ಣ ಮತ್ತಿತರರಿದ್ದರು.

ಸರ್ಕಾರದಿಂದಲೇ ದೂರು ದಾಖಲಿಸಲು ಕ್ರಮ
ಕಾರ್ಖಾನೆಯಲ್ಲಿ 121 ಕೋಟಿ ರೂ. ಅವ್ಯವಹಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಅಧ್ಯಕ್ಷರಾಗಿದ್ದ ನಾಗರಾಜಪ್ಪ ವಿರುದ್ಧ ದೂರು ದಾಖಲಿಸುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶಕ್ಕೆ ಸರ್ಕಾರದಿಂದಲೇ ದೂರು ದಾಖಲಿಸಲು ಕ್ರಮ ವಹಿಸಲಾಗಿದೆ. ಇಲ್ಲಿ ದೂರು ದಾಖಲಿಸಿದರೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರದ ಮಟ್ಟದಲ್ಲೇ ದೂರು ದಾಖಲಿಸಿ 121 ಕೋಟಿ ರೂ.ಗೆ ಶೇ.18 ಬಡ್ಡಿ ವಸೂಲಿ ಮಾಡಲು ಕ್ರಮ ವಹಿಸಲಾಗುವುದು ಎಂದು ಎಂಡಿ ಪಾಟೀಲ ಅಪ್ಪಾಸಾಹೇಬ ಸಂಘಟನೆಗಳ ಮುಖಂಡರಿಗೆ ಪ್ರಕರಣದ ಸಂಬಂಧ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌.ಕೃಷ್ಣಶಂಭೂನಹಳ್ಳಿ ಸರ್ಕಾರ ಮಟ್ಟದಲ್ಲಿಯೇ ಪ್ರಕರಣ ದಾಖಲಾದರೆ ಅದಕ್ಕೆ ಅಗತ್ಯ ದಾಖಲಾತಿ ಹಾಗೂ ನಮ್ಮ ಕಡೆಯಿಂದಲೂ ಮತ್ತೂಂದು ಪ್ರಕರಣ ದಾಖಲಿಸಲಾಗುವುದು ಎಂದು “ಉದಯವಾಣಿ’ಗೆ ತಿಳಿಸಿದರು.

ದುರಸ್ತಿ ಪರಿಶೀಲಿಸಿದ ಸಂಘಟನೆಗಳು ಜುಲೈನಲ್ಲಿ ಕಾರ್ಖಾನೆ ಆರಂಭಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಕೆಲಸ ನಡೆಯುತ್ತಿವೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ಬುಧವಾರ ಕಾರ್ಖಾನೆಗೆ ಭೇಟಿ ನೀಡಿದರು. ಕಾರ್ಖಾನೆಯ ಎಲ್ಲಾ ವಿಭಾಗಗಳಿಗೂ ತೆರಳಿ ದುರಸ್ತಿ ಕಾರ್ಯದ ಮಾಹಿತಿ ಪಡೆದರು.

ಸರ್ಕಾರದಿಂದ ಬಿಡುಗಡೆಯಾಗುವ 50 ಕೋಟಿ ರೂ. ಅನುದಾನ ಸಂಪೂರ್ಣ ಕಾರ್ಖಾನೆ ಅಭಿವೃದ್ಧಿಗೆ ಬಳಕೆಯಾಗಬೇಕು. ಜತೆಗೆ ನಿಗದಿಪಡಿಸಿರುವ ದಿನಾಂಕದಂದು ಕಾರ್ಖಾನೆ ಆರಂಭವಾಗಬೇಕು.
ಸುನಂದಜಯರಾಂ,
ರೈತನಾಯಕಿ

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

13

Srirangapatna: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

23

Actor Darshan: ಕಾನ್‌ಸ್ಟೇಬಲ್‌ ಮೇಲೆಯೂ ನಟ ದರ್ಶನ್‌ ಗ್ಯಾಂಗ್‌ ಹಲ್ಲೆ 

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.