ಪಂಜಾಬ್ನಲ್ಲಿ ಶೇ.60ರಷ್ಟು ಇಳಿಯಲಿದೆ ಮದ್ಯದ ದರ!
Team Udayavani, Jun 10, 2022, 7:30 AM IST
ಚಂಡೀಗಢ: ಪಂಜಾಬ್ನ ಆಮ್ ಆದ್ಮಿ ಸರ್ಕಾರವು ನೂತನ ಅಬಕಾರಿ ನೀತಿಗೆ ಬುಧವಾರ ಅನುಮೋದನೆ ನೀಡಿದೆ. ಜು.1ರಿಂದ ಈ ನೀತಿ ಜಾರಿಯಾಗಲಿದ್ದು, ಅದರಿಂದಾಗಿ ರಾಜ್ಯದಲ್ಲಿ ಮದ್ಯದ ದರದಲ್ಲಿ ಶೇ.35-60ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ.
2021-22ರ ಆರ್ಥಿಕ ವರ್ಷದಲ್ಲಿ ಪಂಜಾಬ್ ಅಬಕಾರಿ ಇಲಾಖೆಯಿಂದ 6,158 ಕೋಟಿ ರೂ. ಆದಾಯ ಗಳಿಸಿದೆ. ಈ ಆರ್ಥಿಕ ವರ್ಷದಲ್ಲಿ ಅದನ್ನು ಶೇ.40ರಷ್ಟು ಹೆಚ್ಚಿಸಿ, 9,647.85 ಕೋಟಿ ರೂ. ಆದಾಯ ಗಳಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. ಈವರೆಗೆ ಮದ್ಯ ತಯಾರಕರು, ಸಗಟು ವ್ಯಾಪಾರಿ ಮತ್ತು ಚಿಲ್ಲರೆ ವ್ಯಾಪಾರಿ ನಡುವೆ ಸಾಮಾನ್ಯ ಮಧ್ಯವರ್ತಿಗಳಿದ್ದರು. ಆದರೆ ಹೊಸ ನೀತಿಯಿಂದಾಗಿ ಎಲ್ಲ ವಿಭಾಗಗಳು ಪ್ರತ್ಯೇಕವಾಗಿ ಕೆಲಸ ಮಾಡಲಿವೆ, ಮಧ್ಯವರ್ತಿಗಳು ಇರುವುದಿಲ್ಲ. ಹಾಗೆಯೇ ಬಿಯರ್ ಮತ್ತು ಭಾರತದಲ್ಲಿ ತಯಾರಿಸಲಾಗುವ ವಿದೇಶಿ ಮದ್ಯದ ಮಾರಾಟಕ್ಕೆ ಇದ್ದ ಮಿತಿಯನ್ನೂ ತೆಗೆದುಹಾಕಲಾಗಿದೆ.
ಪಂಜಾಬ್ನ ಅಕ್ಕ ಪಕ್ಕದಲ್ಲಿರುವ ಕೇಂದ್ರಾಡಳಿತ ಪ್ರದೇಶಗಳಾದ ಹರ್ಯಾಣ ಮತ್ತು ಚಂಡೀಗಢಕ್ಕೆ ಹೋಲಿಸಿದರೆ ಪಂಜಾಬ್ನಲ್ಲಿ ಮದ್ಯದ ಬೆಲೆ ಹೆಚ್ಚಿದೆ. ಅದರಿಂದಾಗಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಕಳ್ಳಸಾಗಣೆಯಾಗುತ್ತಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಹೊಸ ನೀತಿ ಪರಿಚಯಿಸುತ್ತಿರುವುದಾಗಿ ಸರ್ಕಾರ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.