ಚಾಮರಾಜಪೇಟೆ ಮೈದಾನ ವಿವಾದ: 2006ರಲ್ಲಿ ಮಾಡಿಕೊಂಡ ಒಪ್ಪಂದ ಈವರೆಗೆ ಜಾರಿಗೆ ತಂದಿಲ್ಲ
Team Udayavani, Jun 10, 2022, 7:40 AM IST
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ ಎಲ್ಲ ಸಮುದಾಯಗಳ ಹಬ್ಬ, ಪ್ರಾರ್ಥನೆ ಹಾಗೂ ಆಚರಣೆಗಳಿಗೆ ಅನುಮತಿ ನೀಡುವ ಕುರಿತಂತೆ 2006ರಲ್ಲಿಯೇ ಸ್ಥಳೀಯ ಶಾಸಕರು ಹಾಗೂ ಇನ್ನಿತರ ಪ್ರಮುಖರು ಮಾಡಿಕೊಂಡ ಒಪ್ಪಂದವನ್ನು ಈವರೆಗೆ ಜಾರಿಗೆ ತಂದಿಲ್ಲ.
ಮೈದಾನ ಬಳಕೆ ಕುರಿತಂತೆ 2006ರ ಸೆಪ್ಟಂಬರ್ನಲ್ಲಿ ಚಾಮರಾಜಪೇಟೆಯ ಅಂದಿನ ಎಸಿಪಿ ಹಾಗೂ ಶಾಸಕ ಜಮೀರ್ ಅಹ್ಮದ್, ಪ್ರಮುಖರಾದ ಪ್ರಮೀಳಾ ನೇಸರ್ಗಿ, ಆರ್.ವಿ. ದೇವರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ಮೈದಾನವನ್ನು ಯಾವುದೇ ರೀತಿಯಲ್ಲಿ ಮಾರ್ಪಡಿಸದೆ ಯಥಾಸ್ಥಿತಿಯಲ್ಲಿ ಇರಿಸುವಂತೆ ನೋಡಿಕೊಳ್ಳಬೇಕು. ಅಲ್ಲಿ ನಿರ್ಮಿಸಲಾದ ಶೌಚಗೃಹವನ್ನು ಸಾರ್ವಜನಿಕ ಬಳಕೆಗೆ ಮುಕ್ತವಾಗಿಸಬೇಕು. ಮುಖ್ಯವಾಗಿ ಮೈದಾನದಲ್ಲಿ ದಸರಾ, ಶಿವರಾತ್ರಿ, ಗಣೇಶೋತ್ಸವ, ಕರ್ನಾಟಕ ರಾಜ್ಯೋತ್ಸವ, ಕ್ರೀಡಾಕೂಟ ಮುಂತಾದ ಚಟುವಟಿಕೆಗಳನ್ನು ನಡೆಸಲು ಅನುಮತಿಸಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಅದಾದ ಬಳಿಕ ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಮುಸ್ಲಿಂ ಸಮುದಾಯದವರಿಗೆ ವರ್ಷದಲ್ಲಿ ಎರಡು ಬಾರಿ ಪ್ರಾರ್ಥನೆ ಸಲ್ಲಿಸಲು ಮಾತ್ರ ಅವಕಾಶ ನೀಡುತ್ತಿವೆ. ಬೇರೆ ಯಾವುದೇ ಸಮಾರಂಭ, ಆಚರಣೆಗೂ ಅನುಮತಿ ನೀಡುತ್ತಿಲ್ಲ. ಇದು 2006ರಲ್ಲಿ ಸ್ಥಳೀಯ ಮುಖಂಡರು ಮಾಡಿಕೊಂಡ ಒಪ್ಪಂದದ ಉಲ್ಲಂಘನೆಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಬಾರಿ 3 ಅರ್ಜಿ ಸಲ್ಲಿಕೆ :
ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಸಭೆ- ಸಮಾರಂಭ ನಡೆಸಲು ಈ ಬಾರಿ 3 ಅರ್ಜಿಗಳು ಸಲ್ಲಿಕೆಯಾಗಿವೆ. ಶ್ರೀರಾಮಸೇನೆಯಿಂದ ಜೂ. 21ರಂದು ಯೋಗ ದಿನಾಚರಣೆ, ವಿಶ್ವ ಸಾಧನಾ ಪರಿಷತ್ ವತಿಯಿಂದ ಆ. 14-15ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ವಂದೇ ಮಾತರಂ ಸಮಾಜ ಸಂಸ್ಥೆಯಿಂದ ಆ. 15ರಂದು ಸ್ವಾತಂತ್ರ್ಯ ದಿನ ಆಚರಣೆ ಅವಕಾಶ ನೀಡುವಂತೆ ಮನವಿ ಪತ್ರ ಸಲ್ಲಿಸಲಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಸ್ಥಳೀಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.