ಪಠ್ಯ ಪುಸ್ತಕ ಪರಿಷ್ಕರಣೆ ರದ್ದು, ಸಿಎಂ ರಾಜೀನಾಮೆ ಆಗ್ರಹಿಸಿ ಕಾಂಗ್ರೆಸ್‌ ಧರಣಿ


Team Udayavani, Jun 9, 2022, 9:35 PM IST

Untitled-1

ಬೆಂಗಳೂರು: ನಾಡಿನ ದಾರ್ಶನಿಕರು ಹಾಗೂ ಮಹಾನ್‌ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯ ಪುಸ್ತಕ  ಪರಿಷ್ಕರಣೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿಧಾನಸೌಧ ಆವರಣದ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ  ಕಾಂಗ್ರೆಸ್‌ ಶಾಸಕರು ಗುರುವಾರ ಧರಣಿ ನಡೆಸಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವ ವಹಿಸಿದ್ದು, ಪರಿಷತ್‌ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಸಹಿತ ಹಲವು ಶಾಸಕರು ಹಾಗೂ ಮುಖಂಡರು ಭಾಗಿಯಾಗಿದ್ದರು.

ಸಿದ್ದರಾಮಯ್ಯ ಮಾತನಾಡಿ, ರೋಹಿತ್‌ ಚಕ್ರತೀರ್ಥ  ಪರಿಷ್ಕರಿಸಿರುವ ಪಠ್ಯಕ್ರಮವನ್ನು ವಿರೋಧಿಸಿ ಸಾಂಕೇತಿಕವಾಗಿ ಇಂದು ಮುಷ್ಕರ ನಡೆಸುತ್ತಿದ್ದೇವೆ.  ಸಮಿತಿಯನ್ನು ವಿಸರ್ಜಿಸಿದ ಮೇಲೆ ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಪಠ್ಯವನ್ನು ಮಕ್ಕಳಿಗೆ ಬೋಧನೆ ಮಾಡಬಾರದು ಎಂದು ಆಗ್ರಹಿಸಿದರು.

ಶಿಕ್ಷಣ ಸಚಿವ ನಾಗೇಶ್‌ ಅವರು  ಪರಿಷ್ಕೃತ ಪಠ್ಯವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ ಎಂದು ಹೇಳಿದ್ದರು. ಗಣ್ಯರಿಂದ  ಪ್ರತಿರೋಧ ವ್ಯಕ್ತವಾದ ಮೇಲೆ ಕೆಲವು ವಿಚಾರಗಳನ್ನು ಪುನರ್‌ ಪರಿಶೀಲಿಸುತ್ತೇವೆ, ಇನ್ನೊಂದು ತಿಂಗಳಲ್ಲಿ ಪಠ್ಯಪುಸ್ತಕ ಮುದ್ರಣ ಮಾಡಿ ಮಕ್ಕಳಿಗೆ ನೀಡುತ್ತೇವೆ ಎಂದಿದ್ದಾರೆ.  ಚರಿತ್ರೆ ತಿರುಚಿರುವುದು ಸತ್ಯ ಹಾಗೂ ಆರೆಸ್ಸೆಸ್‌ ನಿರ್ದೇಶನದಂತೆ ಪಠ್ಯ ರಚನೆ ಮಾಡಲಾಗಿದೆ ಎಂಬುದನ್ನು ಇವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಬಹುದು ಎಂದರು.

ಸಿಎಂ ರಾಜೀನಾಮೆ ನೀಡಲಿ :

ಡಿ.ಕೆ.ಶಿವಕುಮಾರ್‌ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತತ್‌ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಸವಣ್ಣನವರಿಂದ ಹಿಡಿದು ಅಂಬೇಡ್ಕರ್‌ ವರೆಗೂ, ನಾರಾಯಣ ಗುರುಗಳಿಂದ ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರ ಸ್ವಾಮಿ, ಮುರುಘಾ ಮಠದ ಸ್ವಾಮಿಗಳು, ಭಗತ್‌ ಸಿಂಗ್‌ ವರೆಗೂ ಯಾರೊಬ್ಬರನ್ನೂ ಬಿಡದೆ ಈ ಸರಕಾರ ಅವಮಾನಿಸಿದೆ ಎಂದು ದೂರಿದರು.

ಇದು ಜನರ ಸ್ವಾಭಿಮಾನದ ಪ್ರಶ್ನೆ. ಹೀಗಾಗಿ ಮಠ, ಸಂಘಟನೆಗಳು ಸಹಿತ ಎಲ್ಲ ವರ್ಗದ ಜನರೂ ಧ್ವನಿ ಎತ್ತಬೇಕು ಎಂದು ಕರೆ ನೀಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

kannada-and-samskrati

Karnataka ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ 49 ಮಂದಿ ಸಲಹಾ ಸಮಿತಿ ರಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.